ಸೇವಾ ಅವಧಿಯಲ್ಲಿ ಮೃತಪಟ್ಟ ನಿಗಮದ ನೌಕರರ ಅರ್ಹ ಅವಲಂಬಿತರಿಗೆ ನಿಗಮದಲ್ಲಿ ಕೆಲಸದ ನೇಮಕಾತಿ ಆದೇಶ ಪತ್ರಗಳನ್ನೂ ವಿತರಿಸಲಾಗುವುದು. ನಿಗಮದಲ್ಲಿ ಸೇವಾ ಅವಧಿಯಲ್ಲಿ ಮೃತಪಟ್ಟ 8 ಅಧಿಕಾರಿ/ಸಿಬ್ಬಂದಿ ಕುಟುಂಬದವರಿಗೆ ತಲಾ ₹10 ಲಕ್ಷ ಆಂತರಿಕ ಗುಂಪು ವಿಮಾ ಪರಿಹಾರದ ಮೊತ್ತದ ಚೆಕ್ಗಳನ್ನೂ ವಿತರಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸಬೇಕು ಎಂದು ಕೆಕೆಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ಪ್ರಕಟಣೆ ಮೂಲಕ ಕೋರಿದ್ದಾರೆ.