<p><strong>ಕಲಬುರಗಿ:</strong> ನಗರದ ಕಪನೂರು ಪ್ರದೇಶದಲ್ಲಿ ಮನೆಗೆ ಹಾಕಿದ್ದ ಕೀಲಿ ಒಡೆದ ಕಳ್ಳರು 70 ಗ್ರಾಂ ಚಿನ್ನಾಭರಣ ಹಾಗೂ ₹ 12 ಸಾವಿರ ನಗದು ಕಟ್ಟು ಪರಾರಿಯಾಗಿದ್ದಾರೆ. ಚಿನ್ನಾಭರಣದ ಒಟ್ಟು ಮೌಲ್ಯ ₹ 4 ಲಕ್ಷ ಎಂದು ಅಂದಾಜಿಸಲಾಗಿದೆ.</p>.<p>ಶರಣಬಸಪ್ಪ ಜಗತಿ ಚಿನ್ನಾಭರಣ ಕಳೆದುಕೊಂಡವರು.</p>.<p>‘ಅನಾರೋಗ್ಯಕ್ಕೀಡಾಗಿದ್ದ ನಮ್ಮ ಮಾವನವರ (ಹೆಂಡತಿಯ ತಂದೆ) ಆರೋಗ್ಯ ವಿಚಾರಿಸಲು ಜನವರಿ 4ರಂದು ಬೆಳಿಗ್ಗೆ ಜಂಬಗಾ ಗ್ರಾಮಕ್ಕೆ ಕುಟುಂಬ ಸಮೇತ ಹೋಗಿದ್ದೆವು. ಅವರು ಮೃತಪಟ್ಟಿದ್ದರಿಂದ ಅಲ್ಲೇ ಉಳಿದೆವು. ಜನವರಿ 7ರಂದು 8 ಗಂಟೆಗೆ ನಮ್ಮ ಅಣ್ಣನ ಮಗ ಮನೆಯ ಬಾಗಿಲು ಕೊಂಡಿ ಮುರಿದಿದೆ ಎಂದು ತಿಳಿಸಿದ. ಬಂದು ನೋಡಿದಾಗ ಕಳವಾಗಿರುವುದು ಗೊತ್ತಾಗಿದೆ’ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಶರಣಬಸಪ್ಪ ತಿಳಿಸಿದ್ದಾರೆ.</p>.<p>ಈ ಕುರಿತು ಸಬರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<h2>ವಿದ್ಯುತ್ ಶಾಕ್ ಹೊಡೆದು ಗಾಯ</h2>.<p>ಕಲಬುರಗಿ: ತಾಲ್ಲೂಕಿನ ಹಾರುತಿ ಹಡಗಿಲ್ ಕ್ರಾಸ್ ಸಮೀಪ ವಿದ್ಯುತ್ ಕಂಬ ಏರಿ ವೈಯರ್ ಜೋಡಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ.</p>.<p>ಮಿಣಜಗಿ ಗ್ರಾಮದ ಹುಸೇನ್ ಪಟೇಲ್ ಗಾಯಾಳು. ಚಿಕಿತ್ಸೆಗಾಗಿ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<h2>ಇಸ್ಪೀಟ್ ಜೂಜಾಟ</h2>.<p>ಕಲಬುರಗಿ ತಾಲ್ಲೂಕಿನ ನಾಗನಹಳ್ಳಿ ಗ್ರಾಮದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿದ ವಿಶ್ವವಿದ್ಯಾಲಯ ಠಾಣೆ ಪೊಲೀಸರು, ಏಳು ಮಂದಿ ವಿರುದ್ಧ ಕ್ರಮಕೈಗೊಂಡಿದ್ದಾರೆ.</p>.<p>ಜೂಜಾಟದ ಸ್ಥಳದಲ್ಲಿ ₹ 2,300 ಸೇರಿದಂತೆ ಒಟ್ಟು ₹ 12,100 ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.</p>.<p>ಇನ್ನು, ಕಲಬುರಗಿ ತಾಲ್ಲೂಕಿನ ಅವರಾದ (ಬಿ) ಗ್ರಾಮದ ಬಸ್ನಿಲ್ದಾಣದ ಸಮೀಪ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿದ ಸಿಸಿಬಿ ಇನ್ಸ್ಪೆಕ್ಟರ್ ಅರುಣಕುಮಾರ ಅವರ ತಂಡವು, ಏಳು ಮಂದಿ ವಿರುದ್ಧ ಕ್ರಮ ಕೈಗೊಂಡಿದೆ.</p>.<p>ಜೂಜಾಟದ ಸ್ಥಳದಲ್ಲಿ ₹ 5 ಸಾವಿರ ಸೇರಿದಂತೆ ಒಟ್ಟು ₹ 19,500 ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಸಬರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ನಗರದ ಕಪನೂರು ಪ್ರದೇಶದಲ್ಲಿ ಮನೆಗೆ ಹಾಕಿದ್ದ ಕೀಲಿ ಒಡೆದ ಕಳ್ಳರು 70 ಗ್ರಾಂ ಚಿನ್ನಾಭರಣ ಹಾಗೂ ₹ 12 ಸಾವಿರ ನಗದು ಕಟ್ಟು ಪರಾರಿಯಾಗಿದ್ದಾರೆ. ಚಿನ್ನಾಭರಣದ ಒಟ್ಟು ಮೌಲ್ಯ ₹ 4 ಲಕ್ಷ ಎಂದು ಅಂದಾಜಿಸಲಾಗಿದೆ.</p>.<p>ಶರಣಬಸಪ್ಪ ಜಗತಿ ಚಿನ್ನಾಭರಣ ಕಳೆದುಕೊಂಡವರು.</p>.<p>‘ಅನಾರೋಗ್ಯಕ್ಕೀಡಾಗಿದ್ದ ನಮ್ಮ ಮಾವನವರ (ಹೆಂಡತಿಯ ತಂದೆ) ಆರೋಗ್ಯ ವಿಚಾರಿಸಲು ಜನವರಿ 4ರಂದು ಬೆಳಿಗ್ಗೆ ಜಂಬಗಾ ಗ್ರಾಮಕ್ಕೆ ಕುಟುಂಬ ಸಮೇತ ಹೋಗಿದ್ದೆವು. ಅವರು ಮೃತಪಟ್ಟಿದ್ದರಿಂದ ಅಲ್ಲೇ ಉಳಿದೆವು. ಜನವರಿ 7ರಂದು 8 ಗಂಟೆಗೆ ನಮ್ಮ ಅಣ್ಣನ ಮಗ ಮನೆಯ ಬಾಗಿಲು ಕೊಂಡಿ ಮುರಿದಿದೆ ಎಂದು ತಿಳಿಸಿದ. ಬಂದು ನೋಡಿದಾಗ ಕಳವಾಗಿರುವುದು ಗೊತ್ತಾಗಿದೆ’ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಶರಣಬಸಪ್ಪ ತಿಳಿಸಿದ್ದಾರೆ.</p>.<p>ಈ ಕುರಿತು ಸಬರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<h2>ವಿದ್ಯುತ್ ಶಾಕ್ ಹೊಡೆದು ಗಾಯ</h2>.<p>ಕಲಬುರಗಿ: ತಾಲ್ಲೂಕಿನ ಹಾರುತಿ ಹಡಗಿಲ್ ಕ್ರಾಸ್ ಸಮೀಪ ವಿದ್ಯುತ್ ಕಂಬ ಏರಿ ವೈಯರ್ ಜೋಡಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ.</p>.<p>ಮಿಣಜಗಿ ಗ್ರಾಮದ ಹುಸೇನ್ ಪಟೇಲ್ ಗಾಯಾಳು. ಚಿಕಿತ್ಸೆಗಾಗಿ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<h2>ಇಸ್ಪೀಟ್ ಜೂಜಾಟ</h2>.<p>ಕಲಬುರಗಿ ತಾಲ್ಲೂಕಿನ ನಾಗನಹಳ್ಳಿ ಗ್ರಾಮದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿದ ವಿಶ್ವವಿದ್ಯಾಲಯ ಠಾಣೆ ಪೊಲೀಸರು, ಏಳು ಮಂದಿ ವಿರುದ್ಧ ಕ್ರಮಕೈಗೊಂಡಿದ್ದಾರೆ.</p>.<p>ಜೂಜಾಟದ ಸ್ಥಳದಲ್ಲಿ ₹ 2,300 ಸೇರಿದಂತೆ ಒಟ್ಟು ₹ 12,100 ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.</p>.<p>ಇನ್ನು, ಕಲಬುರಗಿ ತಾಲ್ಲೂಕಿನ ಅವರಾದ (ಬಿ) ಗ್ರಾಮದ ಬಸ್ನಿಲ್ದಾಣದ ಸಮೀಪ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿದ ಸಿಸಿಬಿ ಇನ್ಸ್ಪೆಕ್ಟರ್ ಅರುಣಕುಮಾರ ಅವರ ತಂಡವು, ಏಳು ಮಂದಿ ವಿರುದ್ಧ ಕ್ರಮ ಕೈಗೊಂಡಿದೆ.</p>.<p>ಜೂಜಾಟದ ಸ್ಥಳದಲ್ಲಿ ₹ 5 ಸಾವಿರ ಸೇರಿದಂತೆ ಒಟ್ಟು ₹ 19,500 ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಸಬರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>