<p>ಕಲಬುರಗಿ: ‘ಮೇ 5ರಂದು ಬೆಳಿಗ್ಗೆ 10.30ಕ್ಕೆ ನಗರದ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.</p>.<p>ಕೆಕೆಆರ್ಡಿಬಿ ಮಾಜಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಉದ್ಘಾಟಿಸುವರು. ಕೆಕೆಸಿಸಿಐ ಅಧ್ಯಕ್ಷ ಶರಣು ಪಪ್ಪಾ, ಡಾ.ಎಸ್.ಬಿ.ಕಾಮರೆಡ್ಡಿ, ಹನುಮಂತರಾವ ದೊಡ್ಮನಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.</p>.<p>ಜಿಲ್ಲೆಯ 112 ಜನ ಲೇಖಕರ ಪುಸ್ತಕ ಪ್ರದರ್ಶನ ನಡೆಯಲಿದೆ. ಇದೇ ವೇಳೆ ಜಿಲ್ಲೆಯ ಹಿರಿಯ ಪತ್ರಕರ್ತರು, ಕಸಾಪದ ಹಿರಿಯ ಸದಸ್ಯರು, ಪ್ರಮುಖ ಲೇಖಕರು, ಸಂಚಾರ ಪೊಲೀಸ್ ಸಿಬ್ಬಂದಿಯನ್ನು ಸತ್ಕರಿಸಲಾಗುವುದು. ಸಂಗೀತ ಕಲಾವಿದರಿಂದ ಜಾನಪದ, ತತ್ವಪದ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-34-1500640921</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ‘ಮೇ 5ರಂದು ಬೆಳಿಗ್ಗೆ 10.30ಕ್ಕೆ ನಗರದ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.</p>.<p>ಕೆಕೆಆರ್ಡಿಬಿ ಮಾಜಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಉದ್ಘಾಟಿಸುವರು. ಕೆಕೆಸಿಸಿಐ ಅಧ್ಯಕ್ಷ ಶರಣು ಪಪ್ಪಾ, ಡಾ.ಎಸ್.ಬಿ.ಕಾಮರೆಡ್ಡಿ, ಹನುಮಂತರಾವ ದೊಡ್ಮನಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.</p>.<p>ಜಿಲ್ಲೆಯ 112 ಜನ ಲೇಖಕರ ಪುಸ್ತಕ ಪ್ರದರ್ಶನ ನಡೆಯಲಿದೆ. ಇದೇ ವೇಳೆ ಜಿಲ್ಲೆಯ ಹಿರಿಯ ಪತ್ರಕರ್ತರು, ಕಸಾಪದ ಹಿರಿಯ ಸದಸ್ಯರು, ಪ್ರಮುಖ ಲೇಖಕರು, ಸಂಚಾರ ಪೊಲೀಸ್ ಸಿಬ್ಬಂದಿಯನ್ನು ಸತ್ಕರಿಸಲಾಗುವುದು. ಸಂಗೀತ ಕಲಾವಿದರಿಂದ ಜಾನಪದ, ತತ್ವಪದ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-34-1500640921</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>