<p>ಕಲಬುರಗಿ: ನಗರದ ಹೊರವಲಯದ ಜೇವರ್ಗಿ ರಸ್ತೆಯಲ್ಲಿರುವ ಕಟ್ಟಿಸಂಗಾವಿ ಸೇತುವೆಗೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಫರಹತಾಬಾದ್ ಗ್ರಾಮದ ನಿವಾಸಿ ಪ್ರಭುದೇವ ಹೊಸಮನಿ (35) ಮೃತರು. ಕೃಷಿ ಮಾಡುತ್ತಿದ್ದ ಪ್ರಭುದೇವ ಬ್ಯಾಂಕ್ನಲ್ಲಿ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲಾಗದೇ ನೊಂದುಕೊಂಡಿದ್ದರು ಎನ್ನಲಾಗಿದೆ. ಈ ಸಂಬಂಧ ಡೆತ್ನೋಟ್ ಕೂಡ ಪತ್ತೆಯಾಗಿದೆ ಎಂದು ಮೂಲಗಳು ಹೇಳಿವೆ.</p>.<p>ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಫರಹತಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ವ್ಯಕ್ತಿ ಶವ ಪತ್ತೆ: ಆತ್ಮಹತ್ಯೆ ಶಂಕೆ?</p>.<p>ಕಲಬುರಗಿ: ನಗರದ ಧರಿಯಾಪುರ ಬಡಾವಣೆಯ ಕಾಡಾ ಕಚೇರಿ ಸಮೀಪದ ಪಾಳು ಕಟ್ಟಡದ ಪ್ರದೇಶದಲ್ಲಿ ಅಂದಾಜು 30 ವರ್ಷದ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ.</p>.<p>ಸ್ಥಳಕ್ಕೆ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ‘ವ್ಯಕ್ತಿ ಪಾಳುಬಿದ್ದ ಕಟ್ಟಡದಿಂದ ಬಿದ್ದು ಮೃತಪಟ್ಟಿರುವ ಶಂಕೆ ಇದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಈ ಕುರಿತು ವಿಶ್ವವಿದ್ಯಾಲಯ ಠಾಣೆಯಲ್ಲಿ ‘ಅಸಹಜ ಸಾವು’ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-35-1780971469</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ನಗರದ ಹೊರವಲಯದ ಜೇವರ್ಗಿ ರಸ್ತೆಯಲ್ಲಿರುವ ಕಟ್ಟಿಸಂಗಾವಿ ಸೇತುವೆಗೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಫರಹತಾಬಾದ್ ಗ್ರಾಮದ ನಿವಾಸಿ ಪ್ರಭುದೇವ ಹೊಸಮನಿ (35) ಮೃತರು. ಕೃಷಿ ಮಾಡುತ್ತಿದ್ದ ಪ್ರಭುದೇವ ಬ್ಯಾಂಕ್ನಲ್ಲಿ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲಾಗದೇ ನೊಂದುಕೊಂಡಿದ್ದರು ಎನ್ನಲಾಗಿದೆ. ಈ ಸಂಬಂಧ ಡೆತ್ನೋಟ್ ಕೂಡ ಪತ್ತೆಯಾಗಿದೆ ಎಂದು ಮೂಲಗಳು ಹೇಳಿವೆ.</p>.<p>ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಫರಹತಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ವ್ಯಕ್ತಿ ಶವ ಪತ್ತೆ: ಆತ್ಮಹತ್ಯೆ ಶಂಕೆ?</p>.<p>ಕಲಬುರಗಿ: ನಗರದ ಧರಿಯಾಪುರ ಬಡಾವಣೆಯ ಕಾಡಾ ಕಚೇರಿ ಸಮೀಪದ ಪಾಳು ಕಟ್ಟಡದ ಪ್ರದೇಶದಲ್ಲಿ ಅಂದಾಜು 30 ವರ್ಷದ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ.</p>.<p>ಸ್ಥಳಕ್ಕೆ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ‘ವ್ಯಕ್ತಿ ಪಾಳುಬಿದ್ದ ಕಟ್ಟಡದಿಂದ ಬಿದ್ದು ಮೃತಪಟ್ಟಿರುವ ಶಂಕೆ ಇದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಈ ಕುರಿತು ವಿಶ್ವವಿದ್ಯಾಲಯ ಠಾಣೆಯಲ್ಲಿ ‘ಅಸಹಜ ಸಾವು’ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-35-1780971469</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>