<p>ಕಲಬುರಗಿ: ‘ಮಾಸಾಂತ್ಯದಲ್ಲಿ ನಗರದಲ್ಲಿ ಒಂದು ದಿನದ ಜಿಲ್ಲಾ ಪ್ರಥಮ ಕವಿ ಸಮ್ಮೇಳನ ಆಯೋಜಿಸಲು ನಿರ್ಧರಿಸಲಾಗಿದೆ’ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದರು.</p>.<p>ನಗರದ ಕನ್ನಡ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಅನೇಕ ಹೊಸ ಬರಹಗಾರರು ಕಾವ್ಯ ಕೃಷಿಯಲ್ಲಿ ತೊಡಗಿದ್ದಾರೆ. ಪ್ರಸ್ತುತ ಸಮಾಜದ ಪ್ರಚಲಿತ ವಿಷಯಗಳ ಮೇಲೆ ಕಾವ್ಯ ಕಟ್ಟಿಕೊಳ್ಳಬೇಕಾಗಿದೆ. ಹೀಗಾಗಿ ಸಮ್ಮೇಳನ ಆಯೋಜಿಸಲಾಗುತ್ತಿದೆ’ ಎಂದು ಹೇಳಿದರು.</p>.<p>‘ಸಮ್ಮೇಳನದ ಯಶಸ್ವಿಗೆ ಪೂರಕವಾಗಿ ಸ್ವಾಗತ ಸಮಿತಿ ರಚನೆ, ಜಿಲ್ಲೆಯ ಹಿರಿಯ ಮತ್ತು ಅನುಭವಿ ಕವಿಯೊಬ್ಬರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಶೀಘ್ರದಲ್ಲಿಯೇ ಆಯ್ಕೆ ಮಾಡಲಾಗುವುದು’ ಎಂದರು.</p>.<p>ಜಿಲ್ಲಾ ಕಸಾಪ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್.ಧನ್ನಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ಪ್ರಮುಖರಾದ ಸಿದ್ಧಲಿಂಗ ಜಿ.ಬಾಳಿ, ಬಾಬುರಾವ ಪಾಟೀಲ, ಜಯಶ್ರೀ ಜಮಾದಾರ, ಸೈಯದ್ ನಜಿರುದ್ದೀನ್ ಮುತ್ತವಲ್ಲಿ, ರಾಜೇಂದ್ರ ಮಾಡಬೂಳ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-34-925297894</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ‘ಮಾಸಾಂತ್ಯದಲ್ಲಿ ನಗರದಲ್ಲಿ ಒಂದು ದಿನದ ಜಿಲ್ಲಾ ಪ್ರಥಮ ಕವಿ ಸಮ್ಮೇಳನ ಆಯೋಜಿಸಲು ನಿರ್ಧರಿಸಲಾಗಿದೆ’ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದರು.</p>.<p>ನಗರದ ಕನ್ನಡ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಅನೇಕ ಹೊಸ ಬರಹಗಾರರು ಕಾವ್ಯ ಕೃಷಿಯಲ್ಲಿ ತೊಡಗಿದ್ದಾರೆ. ಪ್ರಸ್ತುತ ಸಮಾಜದ ಪ್ರಚಲಿತ ವಿಷಯಗಳ ಮೇಲೆ ಕಾವ್ಯ ಕಟ್ಟಿಕೊಳ್ಳಬೇಕಾಗಿದೆ. ಹೀಗಾಗಿ ಸಮ್ಮೇಳನ ಆಯೋಜಿಸಲಾಗುತ್ತಿದೆ’ ಎಂದು ಹೇಳಿದರು.</p>.<p>‘ಸಮ್ಮೇಳನದ ಯಶಸ್ವಿಗೆ ಪೂರಕವಾಗಿ ಸ್ವಾಗತ ಸಮಿತಿ ರಚನೆ, ಜಿಲ್ಲೆಯ ಹಿರಿಯ ಮತ್ತು ಅನುಭವಿ ಕವಿಯೊಬ್ಬರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಶೀಘ್ರದಲ್ಲಿಯೇ ಆಯ್ಕೆ ಮಾಡಲಾಗುವುದು’ ಎಂದರು.</p>.<p>ಜಿಲ್ಲಾ ಕಸಾಪ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್.ಧನ್ನಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ಪ್ರಮುಖರಾದ ಸಿದ್ಧಲಿಂಗ ಜಿ.ಬಾಳಿ, ಬಾಬುರಾವ ಪಾಟೀಲ, ಜಯಶ್ರೀ ಜಮಾದಾರ, ಸೈಯದ್ ನಜಿರುದ್ದೀನ್ ಮುತ್ತವಲ್ಲಿ, ರಾಜೇಂದ್ರ ಮಾಡಬೂಳ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-34-925297894</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>