<p>ಕಲಬುರಗಿ: ಜಿಲ್ಲೆಯ ಕಾಳಗಿ ತಾಲ್ಲೂಕಿನ ಕೊಡದೂರ ಗ್ರಾಮದ ಕಂಠಿಬಸವೇಶ್ವರ ಜಾತ್ರೆ ಹಾಗೂ ಮರಗಮ್ಮ ದೇವಿ ಕಾರ್ಯದ ಅಂಗವಾಗಿ ಏಪ್ರಿಲ್ 18ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಕಂಠಿಬಸವೇಶ್ವರ ದೇವಸ್ಥಾನ ಟ್ರಸ್ಟ್ ಸಮಿತಿ ಅಧ್ಯಕ್ಷ ಭೀಮಾಶಂಕರ ಮಾಲಿಪಾಟೀಲ ಹೇಳಿದರು.</p>.<p>‘ಏಪ್ರಿಲ್ 21ರಂದು ಬೆಳಿಗ್ಗೆ 7 ಗಂಟೆ ಕಂಠಿಬಸವೇಶ್ವರ ದೇವರಿಗೆ ರುದ್ರಾಭಿಷೇಕ ನಡೆಯಲಿದೆ. ಬಳಿಕ ಎಲೆ ಪೂಜೆ, ಉಡಿ ತುಂಬುವ ಕಾರ್ಯಕ್ರಮ ಜರುಲಿವೆ. ಬೆಳಿಗ್ಗೆ 11.30ರಿಂದ ಸಂಜ 6 ಗಂಟೆ ತನಕ ಅನ್ನದಾಸೋಹ ನಡೆಯಲಿದೆ’ ಎಂದು ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.</p>.<p>‘ಏಪ್ರಿಲ್ 22ರಂದು ಬೆಳಿಗ್ಗೆ 9.30ಕ್ಕೆ ಪುರವಂತರ ಸೇವೆ ಹಾಗೂ ಅಗ್ನಿ ಪ್ರವೇಶ ನಡೆಯಲಿದೆ. ಸಂಜೆ 6.30ಕ್ಕೆ ಮದ್ದು ಸುಡುವ ಕಾರ್ಯಕ್ರಮ ಜರುಗಲಿದೆ. ನಂತರ ಪೂರ್ಣಕುಂಭ ಮೆರವಣಿಗೆಯೊಂದಿಗೆ ರಥೋತ್ಸವ ನಡೆಯಲಿದೆ’ ಎಂದರು.</p>.<p>‘ಏಪ್ರಿಲ್ 23ರಂದು ಬೆಳಿಗ್ಗೆ 10 ಗಂಟೆ ಮರಗಮ್ಮ ದೇವಿ ನೂತನ ಸ್ವಾಗತ ಕಮಾನು ಉದ್ಘಾಟನೆ ನಡೆಯಲಿದೆ. ಮೈಸೂರು ಹಾಗೂ ಕೋಡ್ಲಾದ ಜ್ಞಾನ ಪ್ರಕಾಶ ಸ್ವಾಮೀಜಿ ಉದ್ಘಾಟಿಸುವರು. ಸಂಜೆ 6 ಗಂಟೆಗೆ ಮರಗಮ್ಮ ದೇವಿ ಮೂರ್ತಿಯ ಭವ್ಯ ಮೆರವಣಿಗೆ ನಡೆಯಲಿದೆ. ಬಳಿಕ ಮದ್ದು ಸುಡುವ ಕಾರ್ಯಕ್ರಮ ಜರುಗಲಿದೆ. ಏಪ್ರಿಲ್ 24ರಂದು ಮರಗಮ್ಮ ದೇವಿಯ ಉಡಿ ತುಂಬುವ ಹಾಗೂ ನೈವೇದ್ಯ ನೀಡುವ ಕಾರ್ಯಕ್ರಮ ನಡೆಯಲಿದೆ. ಸಂಜೆ 4 ಗಂಟೆಗೆ ಜಂಗಿ ಕುಸ್ತಿಗಳು ಜರುಗಲಿವೆ’ ಎಂದು ಮಾಹಿತಿ ನೀಡಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮರಗಮ್ಮ ದೇವಿ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ನಾಗರಾಜ ಚಿನ್ನ, ಮುಖಂಡರಾದ ಸಿದ್ದಣಗೌಡ ಪೊಲೀಸ್ಪಾಟೀಲ, ಗಣಪತಿ, ಶರಣು ಚಂದ, ರಮೇಶ ಜನಗೊಂಡ, ನಾಗರಾಜ ಚಿಂದಿ, ಶರಣು ಮಜಗಿ, ಅವಿನಾಶ ಮೂಲಿಮನಿ, ನಾಗೇಂದ್ರ ಪೆಚ್ಚಟ್ಟಿ, ಆನಂದ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-34-675849236</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ಜಿಲ್ಲೆಯ ಕಾಳಗಿ ತಾಲ್ಲೂಕಿನ ಕೊಡದೂರ ಗ್ರಾಮದ ಕಂಠಿಬಸವೇಶ್ವರ ಜಾತ್ರೆ ಹಾಗೂ ಮರಗಮ್ಮ ದೇವಿ ಕಾರ್ಯದ ಅಂಗವಾಗಿ ಏಪ್ರಿಲ್ 18ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಕಂಠಿಬಸವೇಶ್ವರ ದೇವಸ್ಥಾನ ಟ್ರಸ್ಟ್ ಸಮಿತಿ ಅಧ್ಯಕ್ಷ ಭೀಮಾಶಂಕರ ಮಾಲಿಪಾಟೀಲ ಹೇಳಿದರು.</p>.<p>‘ಏಪ್ರಿಲ್ 21ರಂದು ಬೆಳಿಗ್ಗೆ 7 ಗಂಟೆ ಕಂಠಿಬಸವೇಶ್ವರ ದೇವರಿಗೆ ರುದ್ರಾಭಿಷೇಕ ನಡೆಯಲಿದೆ. ಬಳಿಕ ಎಲೆ ಪೂಜೆ, ಉಡಿ ತುಂಬುವ ಕಾರ್ಯಕ್ರಮ ಜರುಲಿವೆ. ಬೆಳಿಗ್ಗೆ 11.30ರಿಂದ ಸಂಜ 6 ಗಂಟೆ ತನಕ ಅನ್ನದಾಸೋಹ ನಡೆಯಲಿದೆ’ ಎಂದು ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.</p>.<p>‘ಏಪ್ರಿಲ್ 22ರಂದು ಬೆಳಿಗ್ಗೆ 9.30ಕ್ಕೆ ಪುರವಂತರ ಸೇವೆ ಹಾಗೂ ಅಗ್ನಿ ಪ್ರವೇಶ ನಡೆಯಲಿದೆ. ಸಂಜೆ 6.30ಕ್ಕೆ ಮದ್ದು ಸುಡುವ ಕಾರ್ಯಕ್ರಮ ಜರುಗಲಿದೆ. ನಂತರ ಪೂರ್ಣಕುಂಭ ಮೆರವಣಿಗೆಯೊಂದಿಗೆ ರಥೋತ್ಸವ ನಡೆಯಲಿದೆ’ ಎಂದರು.</p>.<p>‘ಏಪ್ರಿಲ್ 23ರಂದು ಬೆಳಿಗ್ಗೆ 10 ಗಂಟೆ ಮರಗಮ್ಮ ದೇವಿ ನೂತನ ಸ್ವಾಗತ ಕಮಾನು ಉದ್ಘಾಟನೆ ನಡೆಯಲಿದೆ. ಮೈಸೂರು ಹಾಗೂ ಕೋಡ್ಲಾದ ಜ್ಞಾನ ಪ್ರಕಾಶ ಸ್ವಾಮೀಜಿ ಉದ್ಘಾಟಿಸುವರು. ಸಂಜೆ 6 ಗಂಟೆಗೆ ಮರಗಮ್ಮ ದೇವಿ ಮೂರ್ತಿಯ ಭವ್ಯ ಮೆರವಣಿಗೆ ನಡೆಯಲಿದೆ. ಬಳಿಕ ಮದ್ದು ಸುಡುವ ಕಾರ್ಯಕ್ರಮ ಜರುಗಲಿದೆ. ಏಪ್ರಿಲ್ 24ರಂದು ಮರಗಮ್ಮ ದೇವಿಯ ಉಡಿ ತುಂಬುವ ಹಾಗೂ ನೈವೇದ್ಯ ನೀಡುವ ಕಾರ್ಯಕ್ರಮ ನಡೆಯಲಿದೆ. ಸಂಜೆ 4 ಗಂಟೆಗೆ ಜಂಗಿ ಕುಸ್ತಿಗಳು ಜರುಗಲಿವೆ’ ಎಂದು ಮಾಹಿತಿ ನೀಡಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮರಗಮ್ಮ ದೇವಿ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ನಾಗರಾಜ ಚಿನ್ನ, ಮುಖಂಡರಾದ ಸಿದ್ದಣಗೌಡ ಪೊಲೀಸ್ಪಾಟೀಲ, ಗಣಪತಿ, ಶರಣು ಚಂದ, ರಮೇಶ ಜನಗೊಂಡ, ನಾಗರಾಜ ಚಿಂದಿ, ಶರಣು ಮಜಗಿ, ಅವಿನಾಶ ಮೂಲಿಮನಿ, ನಾಗೇಂದ್ರ ಪೆಚ್ಚಟ್ಟಿ, ಆನಂದ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-34-675849236</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>