<p>ಕಲಬುರಗಿ: ‘ಸಚಿವ ಎಂ.ಬಿ.ಪಾಟೀಲ ಪ್ರಗತಿಪರ ಚಿಂತಕ, ಅಭಿವೃದ್ಧಿಯ ಹರಿಕಾರರಾಗಿದ್ದು, ಅವರನ್ನು ಪಕ್ಷದ ವರಿಷ್ಠರು ಮುಖ್ಯಮಂತ್ರಿ ಮಾಡಬೇಕು’ ಎಂದು ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ಆಗ್ರಹಿಸಿದೆ.</p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಹಾಸಭಾ ಜಿಲ್ಲಾಧ್ಯಕ್ಷ ಆರ್.ಜಿ. ಶೆಟಗಾರ, ‘ರಾಜ್ಯದಲ್ಲಿ ಲಿಂಗಾಯತ ಧರ್ಮೀಯರು ಬಹುಸಂಖ್ಯಾತರಿದ್ದಾರೆ. ರಾಜ್ಯಕ್ಕೆ ಲಿಂಗಾಯತರ ಕೊಡುಗೆ ಅಪಾರವಾಗಿದೆ. ಕರ್ನಾಟಕದಲ್ಲಿ ವೀರೇಂದ್ರ ಪಾಟೀಲ ಸಿಎಂ ಆದ ನಂತರ ಲಿಂಗಾಯತರಿಗೆ ಕಾಂಗ್ರೆಸ್ ಪಕ್ಷ ಇಲ್ಲಿಯವರೆಗೆ ಮುಖ್ಯಮಂತ್ರಿ ಪಟ್ಟ ನೀಡಿಲ್ಲ. ಈಗ ಕಾಲ ಕೂಡಿಬಂದಿದೆ’ ಎಂದರು.</p>.<p>‘ಲಿಂಗಾಯತ ಧರ್ಮೀಯರಾದ ಬಿ.ಡಿ. ಜತ್ತಿ, ಎಸ್.ನಿಜಲಿಂಗಪ್ಪ, ವೀರೇಂದ್ರ ಪಾಟೀಲ ಅವರು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ವೀರೇಂದ್ರ ಪಾಟೀಲ ಮುಖ್ಯಮಂತ್ರಿ ಆಗಿದ್ದಾಗ ಅನಾರೋಗ್ಯದ ನೆಪವೊಡ್ಡಿ ಪೂರ್ಣಾವಧಿ ಪೂರೈಸಲು ಅವಕಾಶ ಕೊಡದೆ ಸಿಎಂ ಸ್ಥಾನದಿಂದ ಕೆಳಗಿಳಿಸಲಾಯಿತು. ಕಾಂಗ್ರೆಸ್ ಪಕ್ಷಕ್ಕೆ ಸರ್ಕಾರ ರಚಿಸುವಲ್ಲಿ ಲಿಂಗಾಯತರ ಮತಗಳು ಬೇಕು. ಆದರೆ, ಅಧಿಕಾರದಿಂದ ದೂರವಿಡುವುದು ಪಕ್ಷದ ನೀತಿಯಾಗಿದೆ’ ಎಂದು ದೂರಿದರು.</p>.<p>ಸ್ಥಳೀಯವಾಗಿ ಡಾ.ಶರಣಪ್ರಕಾಶ ಪಾಟೀಲ ಮತ್ತು ಬಿ.ಆರ್. ಪಾಟೀಲ ಇದ್ದಾರೆ. ಅವರಿಗೆ ಸ್ಥಾನಮಾನ ನೀಡುವ ಬಗ್ಗೆ ಮಾತನಾಡುತ್ತಿಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ, ‘ಎಂ.ಬಿ. ಪಾಟೀಲ ಅವರು ಎಲ್ಲಾ ಆಯಾಮಗಳಿಂದಲೂ ಸಿಎಂ ಸ್ಥಾನಕ್ಕೆ ಅರ್ಹರಿದ್ದಾರೆ. ಅವರು ಮುಖ್ಯಮಂತ್ರಿಯಾದರೆ ಈ ಭಾಗದ ಎಲ್ಲರಿಗೂ ಒಳ್ಳೆಯ ಸ್ಥಾನಮಾನ ಸಿಗಲಿವೆ’ ಎಂದು ಉತ್ತರಿಸಿದರು.</p>.<p>ಮಹಾಸಭಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ ಘೂಳಿ, ಹಣಮಂತರಾವ ಪಾಟೀಲ ಕುಸನೂರ ಇತರರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-34-1373920891</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ‘ಸಚಿವ ಎಂ.ಬಿ.ಪಾಟೀಲ ಪ್ರಗತಿಪರ ಚಿಂತಕ, ಅಭಿವೃದ್ಧಿಯ ಹರಿಕಾರರಾಗಿದ್ದು, ಅವರನ್ನು ಪಕ್ಷದ ವರಿಷ್ಠರು ಮುಖ್ಯಮಂತ್ರಿ ಮಾಡಬೇಕು’ ಎಂದು ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ಆಗ್ರಹಿಸಿದೆ.</p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಹಾಸಭಾ ಜಿಲ್ಲಾಧ್ಯಕ್ಷ ಆರ್.ಜಿ. ಶೆಟಗಾರ, ‘ರಾಜ್ಯದಲ್ಲಿ ಲಿಂಗಾಯತ ಧರ್ಮೀಯರು ಬಹುಸಂಖ್ಯಾತರಿದ್ದಾರೆ. ರಾಜ್ಯಕ್ಕೆ ಲಿಂಗಾಯತರ ಕೊಡುಗೆ ಅಪಾರವಾಗಿದೆ. ಕರ್ನಾಟಕದಲ್ಲಿ ವೀರೇಂದ್ರ ಪಾಟೀಲ ಸಿಎಂ ಆದ ನಂತರ ಲಿಂಗಾಯತರಿಗೆ ಕಾಂಗ್ರೆಸ್ ಪಕ್ಷ ಇಲ್ಲಿಯವರೆಗೆ ಮುಖ್ಯಮಂತ್ರಿ ಪಟ್ಟ ನೀಡಿಲ್ಲ. ಈಗ ಕಾಲ ಕೂಡಿಬಂದಿದೆ’ ಎಂದರು.</p>.<p>‘ಲಿಂಗಾಯತ ಧರ್ಮೀಯರಾದ ಬಿ.ಡಿ. ಜತ್ತಿ, ಎಸ್.ನಿಜಲಿಂಗಪ್ಪ, ವೀರೇಂದ್ರ ಪಾಟೀಲ ಅವರು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ವೀರೇಂದ್ರ ಪಾಟೀಲ ಮುಖ್ಯಮಂತ್ರಿ ಆಗಿದ್ದಾಗ ಅನಾರೋಗ್ಯದ ನೆಪವೊಡ್ಡಿ ಪೂರ್ಣಾವಧಿ ಪೂರೈಸಲು ಅವಕಾಶ ಕೊಡದೆ ಸಿಎಂ ಸ್ಥಾನದಿಂದ ಕೆಳಗಿಳಿಸಲಾಯಿತು. ಕಾಂಗ್ರೆಸ್ ಪಕ್ಷಕ್ಕೆ ಸರ್ಕಾರ ರಚಿಸುವಲ್ಲಿ ಲಿಂಗಾಯತರ ಮತಗಳು ಬೇಕು. ಆದರೆ, ಅಧಿಕಾರದಿಂದ ದೂರವಿಡುವುದು ಪಕ್ಷದ ನೀತಿಯಾಗಿದೆ’ ಎಂದು ದೂರಿದರು.</p>.<p>ಸ್ಥಳೀಯವಾಗಿ ಡಾ.ಶರಣಪ್ರಕಾಶ ಪಾಟೀಲ ಮತ್ತು ಬಿ.ಆರ್. ಪಾಟೀಲ ಇದ್ದಾರೆ. ಅವರಿಗೆ ಸ್ಥಾನಮಾನ ನೀಡುವ ಬಗ್ಗೆ ಮಾತನಾಡುತ್ತಿಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ, ‘ಎಂ.ಬಿ. ಪಾಟೀಲ ಅವರು ಎಲ್ಲಾ ಆಯಾಮಗಳಿಂದಲೂ ಸಿಎಂ ಸ್ಥಾನಕ್ಕೆ ಅರ್ಹರಿದ್ದಾರೆ. ಅವರು ಮುಖ್ಯಮಂತ್ರಿಯಾದರೆ ಈ ಭಾಗದ ಎಲ್ಲರಿಗೂ ಒಳ್ಳೆಯ ಸ್ಥಾನಮಾನ ಸಿಗಲಿವೆ’ ಎಂದು ಉತ್ತರಿಸಿದರು.</p>.<p>ಮಹಾಸಭಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ ಘೂಳಿ, ಹಣಮಂತರಾವ ಪಾಟೀಲ ಕುಸನೂರ ಇತರರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-34-1373920891</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>