<p><strong>ಚಿಂಚೋಳಿ (ಕಲಬುರಗಿ ಜಿಲ್ಲೆ):</strong> ತಾಲ್ಲೂಕಿನ ಮಿರಿಯಾಣ ಪೊಲೀಸ್ ಠಾಣೆಯ ಹೆಡ್ ಕಾನಸ್ಟೆಬಲ್ ಆನಂದ ಬಸರಕೋಡ (58) ಹೃದಯಾಘಾತದಿಂದ ಗುರುವಾರ ನಿಧನರಾಗಿದ್ದಾರೆ.</p><p>ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ನಿವಾಸಿ ಆನಂದ ಅವರು ಭಾರತೀಯ ಸೇನೆಯಲ್ಲಿ18 ವರ್ಷ ಸೇವೆ ಸಲ್ಲಿಸಿ ನಂತರ ರಾಜ್ಯದಲ್ಲಿ ಪೊಲೀಸ್ ಇಲಾಖೆ ಸೇರಿದ್ದರು.</p><p>ಕಲಬುರಗಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದ ಅವರು, ಕಳೆದ 5 ವರ್ಷಗಳಿಂದ ಮಿರಿಯಾಣ ಠಾಣೆಯಲ್ಲಿ ಹೆಡ್ ಕಾನಸ್ಟೆಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೃತರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿ ಇದ್ದಾರೆ.</p><p>‘ಬುಧವಾರ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆ ತನಕ ರಾತ್ರಿ ಪಾಳಿ ಕೆಲಸ ಮಾಡಿದ್ದರು. ಬಳಿಕ ಠಾಣೆ ಎದುರಿನ ಶೆಡ್ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ಬೆಳಿಗ್ಗೆ 6 ಗಂಟೆಯಿಂದ 6.30ರ ನಡುವೆ ಮೃತಪಟ್ಟಿದ್ದಾರೆ. ಮೃತದೇಹ ಚಂದಾಪುರದ ತಾಲ್ಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ಶುಕ್ರವಾರ ಬೆಳಿಗ್ಗೆ 11 ಗಂಟೆ ಅಂತ್ರಕ್ರಿಯೆ ನಡೆಯಲಿದೆ’ ಎಂದು ಮೂಲಗಳು ಹೇಳಿವೆ. </p><p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು, ಹೆಚ್ಚುವರಿ ಎಸ್ಪಿ ಮಹೇಶ ಮೇಘಣ್ಣವರ, ಡಿವೈಎಸ್ಪಿ ಸಂಗಮನಾಥ ಹಿರೇಮಠ, ಸರ್ಕಲ್ ಇನ್ಸ್ಪೆಕ್ಟರ್ ಕಪಿಲದೇವ, ಸಬ್ ಇನಸ್ಪೆಕ್ಟರ್ ಮಡಿವಾಳಪ್ಪ ಬಾಗೋಡಿ ಭೇಟಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ (ಕಲಬುರಗಿ ಜಿಲ್ಲೆ):</strong> ತಾಲ್ಲೂಕಿನ ಮಿರಿಯಾಣ ಪೊಲೀಸ್ ಠಾಣೆಯ ಹೆಡ್ ಕಾನಸ್ಟೆಬಲ್ ಆನಂದ ಬಸರಕೋಡ (58) ಹೃದಯಾಘಾತದಿಂದ ಗುರುವಾರ ನಿಧನರಾಗಿದ್ದಾರೆ.</p><p>ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ನಿವಾಸಿ ಆನಂದ ಅವರು ಭಾರತೀಯ ಸೇನೆಯಲ್ಲಿ18 ವರ್ಷ ಸೇವೆ ಸಲ್ಲಿಸಿ ನಂತರ ರಾಜ್ಯದಲ್ಲಿ ಪೊಲೀಸ್ ಇಲಾಖೆ ಸೇರಿದ್ದರು.</p><p>ಕಲಬುರಗಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದ ಅವರು, ಕಳೆದ 5 ವರ್ಷಗಳಿಂದ ಮಿರಿಯಾಣ ಠಾಣೆಯಲ್ಲಿ ಹೆಡ್ ಕಾನಸ್ಟೆಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೃತರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿ ಇದ್ದಾರೆ.</p><p>‘ಬುಧವಾರ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆ ತನಕ ರಾತ್ರಿ ಪಾಳಿ ಕೆಲಸ ಮಾಡಿದ್ದರು. ಬಳಿಕ ಠಾಣೆ ಎದುರಿನ ಶೆಡ್ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ಬೆಳಿಗ್ಗೆ 6 ಗಂಟೆಯಿಂದ 6.30ರ ನಡುವೆ ಮೃತಪಟ್ಟಿದ್ದಾರೆ. ಮೃತದೇಹ ಚಂದಾಪುರದ ತಾಲ್ಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ಶುಕ್ರವಾರ ಬೆಳಿಗ್ಗೆ 11 ಗಂಟೆ ಅಂತ್ರಕ್ರಿಯೆ ನಡೆಯಲಿದೆ’ ಎಂದು ಮೂಲಗಳು ಹೇಳಿವೆ. </p><p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು, ಹೆಚ್ಚುವರಿ ಎಸ್ಪಿ ಮಹೇಶ ಮೇಘಣ್ಣವರ, ಡಿವೈಎಸ್ಪಿ ಸಂಗಮನಾಥ ಹಿರೇಮಠ, ಸರ್ಕಲ್ ಇನ್ಸ್ಪೆಕ್ಟರ್ ಕಪಿಲದೇವ, ಸಬ್ ಇನಸ್ಪೆಕ್ಟರ್ ಮಡಿವಾಳಪ್ಪ ಬಾಗೋಡಿ ಭೇಟಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>