<p>ಕಲಬುರಗಿ: ‘ವಿಧಾನ ಪರಿಷತ್ ಸ್ಥಾನವನ್ನು ಕೋಲಿ, ಕಬ್ಬಲಿಗ ಸಮುದಾಯದ ನಾಯಕರಿಗೆ ನೀಡಬೇಕು’ ಎಂದು ರಾಜ್ಯ ಕೋಲಿ ಸಂಘರ್ಷ ಸಮಿತಿ ಸಂಸ್ಥಾಪಕ ಅಧ್ಯಕ್ಷ ಸುಭಾಷ ಜಮಾದಾರ ಆಗ್ರಹಿಸಿದರು.</p>.<p>ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರ ಅವಧಿ ಮುಕ್ತಾಯದ ಹಂತಕ್ಕೆ ಬಂದಿದೆ. ಈ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಲ್ಲಿ ಹಲವು ವರ್ಷಗಳಿಂದ ಶ್ರಮಿಸುತ್ತಿರುವ ಶರಣಪ್ಪ ಮಾನೇಗಾರ, ಭೀಮಣ್ಣಾ ಸಾಲಿ, ರಾಜಗೋಪಾಲರೆಡ್ಡಿ, ಹುಲಿಗೆಪ್ಪ ಕನಕಗಿರಿ ಇವರಲ್ಲಿ ಯಾರಾದರೂ ಒಬ್ಬರಿಗೆ ಅವಕಾಶ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>‘ಅಲ್ಲದೆ ನಿಜಶರಣ ಅಂಬಿಗರ ಚೌಡಯ್ಯ ನಿಗಮ ಮಂಡಳಿ ಅಧ್ಯಕ್ಷ ಬಾಬುರಾವ್ ಚಿಂಚನಸೂರ ಹಾಗೂ ಮೀನುಗಾರಿಕೆ ನಿಗಮದ ಅಧ್ಯಕ್ಷೆ ಮಾಲಾ ನಾರಾಯಣರಾವ್ ಅವರನ್ನು ಕೈ ಬಿಟ್ಟು, ಇವರ ಸ್ಥಾನದಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಅವಕಾಶ ನೀಡಬೇಕು’ ಎಂದರು.</p>.<p>ರಾಜ್ಯ ಉಪಾಧ್ಯಕ್ಷ ಕಲ್ಯಾಣ ನಾಟೀಕಾರ್, ರಾಜ್ಯ ಕಾರ್ಯದರ್ಶಿ ದತ್ತಪ್ಪ ಟಿ.ಜಮಾದಾರ, ಗಣಪತರಾವ ಎ. ಅಂಕಲಗಿ, ಮಲ್ಲಿಕಾರ್ಜುನ ಎಸ್.ಕೋಡ್ಲಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-34-1792073335</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ‘ವಿಧಾನ ಪರಿಷತ್ ಸ್ಥಾನವನ್ನು ಕೋಲಿ, ಕಬ್ಬಲಿಗ ಸಮುದಾಯದ ನಾಯಕರಿಗೆ ನೀಡಬೇಕು’ ಎಂದು ರಾಜ್ಯ ಕೋಲಿ ಸಂಘರ್ಷ ಸಮಿತಿ ಸಂಸ್ಥಾಪಕ ಅಧ್ಯಕ್ಷ ಸುಭಾಷ ಜಮಾದಾರ ಆಗ್ರಹಿಸಿದರು.</p>.<p>ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರ ಅವಧಿ ಮುಕ್ತಾಯದ ಹಂತಕ್ಕೆ ಬಂದಿದೆ. ಈ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಲ್ಲಿ ಹಲವು ವರ್ಷಗಳಿಂದ ಶ್ರಮಿಸುತ್ತಿರುವ ಶರಣಪ್ಪ ಮಾನೇಗಾರ, ಭೀಮಣ್ಣಾ ಸಾಲಿ, ರಾಜಗೋಪಾಲರೆಡ್ಡಿ, ಹುಲಿಗೆಪ್ಪ ಕನಕಗಿರಿ ಇವರಲ್ಲಿ ಯಾರಾದರೂ ಒಬ್ಬರಿಗೆ ಅವಕಾಶ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>‘ಅಲ್ಲದೆ ನಿಜಶರಣ ಅಂಬಿಗರ ಚೌಡಯ್ಯ ನಿಗಮ ಮಂಡಳಿ ಅಧ್ಯಕ್ಷ ಬಾಬುರಾವ್ ಚಿಂಚನಸೂರ ಹಾಗೂ ಮೀನುಗಾರಿಕೆ ನಿಗಮದ ಅಧ್ಯಕ್ಷೆ ಮಾಲಾ ನಾರಾಯಣರಾವ್ ಅವರನ್ನು ಕೈ ಬಿಟ್ಟು, ಇವರ ಸ್ಥಾನದಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಅವಕಾಶ ನೀಡಬೇಕು’ ಎಂದರು.</p>.<p>ರಾಜ್ಯ ಉಪಾಧ್ಯಕ್ಷ ಕಲ್ಯಾಣ ನಾಟೀಕಾರ್, ರಾಜ್ಯ ಕಾರ್ಯದರ್ಶಿ ದತ್ತಪ್ಪ ಟಿ.ಜಮಾದಾರ, ಗಣಪತರಾವ ಎ. ಅಂಕಲಗಿ, ಮಲ್ಲಿಕಾರ್ಜುನ ಎಸ್.ಕೋಡ್ಲಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-34-1792073335</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>