<p>ಕಲಬುರಗಿ: ನಿವೃತ್ತ ಪ್ರಾಧ್ಯಾಪಕರೊಬ್ಬರ ಮೊಬೈಲ್ ಕದ್ದು ಅದರಲ್ಲಿನ ಫೋನ್ಪೆ ಮೂಲಕ ₹1 ಲಕ್ಷವನ್ನು ಲೂಟಿ ಮಾಡಿದ ಕುರಿತು ಸಬರ್ಬನ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.</p>.<p>ಇಲ್ಲಿನ ಶಿವಲಿಂಗ ನಗರದ ನಿವೃತ್ತ ಪ್ರಾಧ್ಯಾಪಕ ಶಿವಬಸಪ್ಪ ಇಸ್ರಾಜಿ ಮೊಬೈಲ್ ಮತ್ತು ಹಣ ಕಳೆದುಕೊಂಡವರು.</p>.<p>‘ಕಳೆದ ಡಿಸೆಂಬರ್ 2ರಂದು ಬೆಳಿಗ್ಗೆ ಸ್ವಗ್ರಾಮ ಆಳಂದ ತಾಲ್ಲೂಕಿನ ಕೊತನಹಿಪ್ಪರಗಾಕ್ಕೆ ತೆರಳಲು ನಗರದ ಆಳಂದ ಚೆಕ್ಪೋಸ್ಟ್ ಹತ್ತಿರ ಬಸ್ ಹತ್ತುವಾಗ ಜೇಬಿನಲ್ಲಿದ್ದ ಮೊಬೈಲ್ ಕಳವಾಗಿದೆ. ನಂತರ ಅದೇ ದಿನ ಬ್ಯಾಂಕಿನ ಸ್ಟೇಟ್ಮೆಂಟ್ ನೋಡಿದಾಗ ಫೋನ್ಪೆ ಮೂಲಕ ₹50 ಸಾವಿರದಂತೆ ಎರಡು ಸಲ ಹಣ ತೆಗೆದುಕೊಂಡಿರುವುದು ಗೊತ್ತಾಗಿದೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.</p>.<p>ಕಲಬುರಗಿ: ಇಲ್ಲಿನ ಶಾಂತಿ ನಗರದಲ್ಲಿರುವ ವೈದ್ಯೆಯೊಬ್ಬರ ಮನೆಯ ಕಾಂಪೌಂಡ್ ಒಳಗಡೆ ನಿಲ್ಲಿಸಿದ್ದ ಸ್ಕೂಟಿ ಕಳವು ಆಗಿದೆ.</p>.<p>ನಮ್ರತಾ ಸುಭಾಷ ಪಾಟೀಲ ಸ್ಕೂಟಿ ಕಳೆದುಕೊಂಡವರು. ಜಯದೇವ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಅವರು, ಏ.16ರಂದು ರಾತ್ರಿ ಎಂದಿನಂತೆ ಕೆಲಸ ಮುಗಿಸಿಕೊಂಡು ಬಂದು ತಮ್ಮ ಮನೆಯ ಕಾಂಪೌಂಡ್ ಒಳಗಡೆ ಸ್ಕೂಟಿ ನಿಲ್ಲಿಸಿದ್ದಾರೆ. ಮರುದಿನ ಬೆಳಿಗ್ಗೆ ನೋಡಿದಾಗ ಸ್ಕೂಟಿ ಕಾಣೆಯಾಗಿದೆ. ಈ ಕುರಿತು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-34-153427246</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ನಿವೃತ್ತ ಪ್ರಾಧ್ಯಾಪಕರೊಬ್ಬರ ಮೊಬೈಲ್ ಕದ್ದು ಅದರಲ್ಲಿನ ಫೋನ್ಪೆ ಮೂಲಕ ₹1 ಲಕ್ಷವನ್ನು ಲೂಟಿ ಮಾಡಿದ ಕುರಿತು ಸಬರ್ಬನ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.</p>.<p>ಇಲ್ಲಿನ ಶಿವಲಿಂಗ ನಗರದ ನಿವೃತ್ತ ಪ್ರಾಧ್ಯಾಪಕ ಶಿವಬಸಪ್ಪ ಇಸ್ರಾಜಿ ಮೊಬೈಲ್ ಮತ್ತು ಹಣ ಕಳೆದುಕೊಂಡವರು.</p>.<p>‘ಕಳೆದ ಡಿಸೆಂಬರ್ 2ರಂದು ಬೆಳಿಗ್ಗೆ ಸ್ವಗ್ರಾಮ ಆಳಂದ ತಾಲ್ಲೂಕಿನ ಕೊತನಹಿಪ್ಪರಗಾಕ್ಕೆ ತೆರಳಲು ನಗರದ ಆಳಂದ ಚೆಕ್ಪೋಸ್ಟ್ ಹತ್ತಿರ ಬಸ್ ಹತ್ತುವಾಗ ಜೇಬಿನಲ್ಲಿದ್ದ ಮೊಬೈಲ್ ಕಳವಾಗಿದೆ. ನಂತರ ಅದೇ ದಿನ ಬ್ಯಾಂಕಿನ ಸ್ಟೇಟ್ಮೆಂಟ್ ನೋಡಿದಾಗ ಫೋನ್ಪೆ ಮೂಲಕ ₹50 ಸಾವಿರದಂತೆ ಎರಡು ಸಲ ಹಣ ತೆಗೆದುಕೊಂಡಿರುವುದು ಗೊತ್ತಾಗಿದೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.</p>.<p>ಕಲಬುರಗಿ: ಇಲ್ಲಿನ ಶಾಂತಿ ನಗರದಲ್ಲಿರುವ ವೈದ್ಯೆಯೊಬ್ಬರ ಮನೆಯ ಕಾಂಪೌಂಡ್ ಒಳಗಡೆ ನಿಲ್ಲಿಸಿದ್ದ ಸ್ಕೂಟಿ ಕಳವು ಆಗಿದೆ.</p>.<p>ನಮ್ರತಾ ಸುಭಾಷ ಪಾಟೀಲ ಸ್ಕೂಟಿ ಕಳೆದುಕೊಂಡವರು. ಜಯದೇವ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಅವರು, ಏ.16ರಂದು ರಾತ್ರಿ ಎಂದಿನಂತೆ ಕೆಲಸ ಮುಗಿಸಿಕೊಂಡು ಬಂದು ತಮ್ಮ ಮನೆಯ ಕಾಂಪೌಂಡ್ ಒಳಗಡೆ ಸ್ಕೂಟಿ ನಿಲ್ಲಿಸಿದ್ದಾರೆ. ಮರುದಿನ ಬೆಳಿಗ್ಗೆ ನೋಡಿದಾಗ ಸ್ಕೂಟಿ ಕಾಣೆಯಾಗಿದೆ. ಈ ಕುರಿತು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-34-153427246</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>