<p><strong>ಕಲಬುರಗಿ</strong>: ವಿಶ್ವ ಶಾಂತಿ ದಿನಾಚರಣೆ ಅಂಗವಾಗಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕಲಬುರಗಿ ಘಟಕ ಹಾಗೂ ಗುಲಬರ್ಗಾ ವಿಶ್ವವಿದ್ಯಾಲಯದ ಸಹಯೋಗದಲ್ಲಿ ನಗರದ ವಿವಿಧ ಕಾಲೇಜುಗಳ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಶನಿವಾರ ವಾಕಥಾನ್ ನಡೆಸಿದರು.</p><p>ನಗರದ ಜಗತ್ ವೃತ್ತದಲ್ಲಿ ವಾಕಥಾನ್ ಗೆ ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ದಯಾನಂದ ಅಗಸರ ಚಾಲನೆ ನೀಡಿದರು. </p><p>ಬಳಿಕ ವಿದ್ಯಾರ್ಥಿಗಳು ಜಗತ್ ವೃತ್ತದಿಂದ ಅನ್ನಪೂರ್ಣ ಕ್ರಾಸ್, ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ತನಕ ಕಾಲ್ನಡಿಗೆ ಜಾಥಾ ನಡೆಸಿದರು.</p><p>'ಮಾಡಲೇಬೇಕು ಮಾಡಲೇಬೇಕು, ರಕ್ತ ದಾನ ಮಾಡಲೇಬೇಕು' </p><p>'ನಮ್ಮ ನಡೆ ಶಾಂತಿಯ ಕಡೆ' ಘೋಷಣೆ ಮೊಳಗಿಸಿದರು.</p><p>ಜಿಲ್ಲಾಧಿಕಾರಿ ಕಚೇರಿ ಎದುರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ರೆಡ್ ಕ್ರಾಸ್ ಸೊಸೈಟಿ ಕಲಬುರಗಿ ಘಟಕದ ಚೇರಮನ್ ಅರುಣಕುಮಾರ ಲೋಯಾ, ವೈಸ್ ಚೇರಮನ್ ಭಾಗ್ಯಲಕ್ಷ್ಮಿ ಹಾಗೂ ಗುಲಬರ್ಗ ವಿಶ್ವವಿದ್ಯಾಲಯದ ಬಸವರಾಜ ಸಣ್ಣಕ್ಕಿ ಮಾತನಾಡಿದರು.</p><p>ಅಪ್ಪಾರಾವ ಅಕ್ಕೋಣೆ, ರವೀಂದ್ರ ಶಾಬಾದಿ, ಪದ್ಮರಾಜ ರಾಸಣಗಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ವಿಶ್ವ ಶಾಂತಿ ದಿನಾಚರಣೆ ಅಂಗವಾಗಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕಲಬುರಗಿ ಘಟಕ ಹಾಗೂ ಗುಲಬರ್ಗಾ ವಿಶ್ವವಿದ್ಯಾಲಯದ ಸಹಯೋಗದಲ್ಲಿ ನಗರದ ವಿವಿಧ ಕಾಲೇಜುಗಳ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಶನಿವಾರ ವಾಕಥಾನ್ ನಡೆಸಿದರು.</p><p>ನಗರದ ಜಗತ್ ವೃತ್ತದಲ್ಲಿ ವಾಕಥಾನ್ ಗೆ ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ದಯಾನಂದ ಅಗಸರ ಚಾಲನೆ ನೀಡಿದರು. </p><p>ಬಳಿಕ ವಿದ್ಯಾರ್ಥಿಗಳು ಜಗತ್ ವೃತ್ತದಿಂದ ಅನ್ನಪೂರ್ಣ ಕ್ರಾಸ್, ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ತನಕ ಕಾಲ್ನಡಿಗೆ ಜಾಥಾ ನಡೆಸಿದರು.</p><p>'ಮಾಡಲೇಬೇಕು ಮಾಡಲೇಬೇಕು, ರಕ್ತ ದಾನ ಮಾಡಲೇಬೇಕು' </p><p>'ನಮ್ಮ ನಡೆ ಶಾಂತಿಯ ಕಡೆ' ಘೋಷಣೆ ಮೊಳಗಿಸಿದರು.</p><p>ಜಿಲ್ಲಾಧಿಕಾರಿ ಕಚೇರಿ ಎದುರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ರೆಡ್ ಕ್ರಾಸ್ ಸೊಸೈಟಿ ಕಲಬುರಗಿ ಘಟಕದ ಚೇರಮನ್ ಅರುಣಕುಮಾರ ಲೋಯಾ, ವೈಸ್ ಚೇರಮನ್ ಭಾಗ್ಯಲಕ್ಷ್ಮಿ ಹಾಗೂ ಗುಲಬರ್ಗ ವಿಶ್ವವಿದ್ಯಾಲಯದ ಬಸವರಾಜ ಸಣ್ಣಕ್ಕಿ ಮಾತನಾಡಿದರು.</p><p>ಅಪ್ಪಾರಾವ ಅಕ್ಕೋಣೆ, ರವೀಂದ್ರ ಶಾಬಾದಿ, ಪದ್ಮರಾಜ ರಾಸಣಗಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>