ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿ: ಸಾಕು ನಾಯಿ ವಿಚಾರಕ್ಕೆ ಜಗಳ, ಕಲ್ಲಿನಿಂದ ಜಜ್ಜಿ ವ್ಯಕ್ತಿ ಕೊಲೆ

Last Updated 24 ಸೆಪ್ಟೆಂಬರ್ 2021, 7:24 IST
ಅಕ್ಷರ ಗಾತ್ರ

ಕಲಬುರ್ಗಿ: ಇಲ್ಲಿನ ಅಕ್ಕಮಹಾದೇವಿ ಕಾಲೊನಿಯಲ್ಲಿ, ಹೈಕೋರ್ಟ್ ಮುಂಭಾಗ ಗುರುವಾರ ತಡರಾತ್ರಿ ವ್ಯಕ್ತಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ.

ಗುರುರಾಜ್ ಕುಲಕರ್ಣಿ (35) ಕೊಲೆಯಾದವರು. ಪವನ್ ಜಹಾಗೀರದಾರ್ ಆರೋಪಿ.

'ಗುರುರಾಜ ಅವರು ಸಾಕಿದ್ದ ನಾಯಿಗೆ ಪವನ್ ಪದೇ ಪದೇ ಕಲ್ಲು ಹೊಡೆಯುತ್ತಿದ್ದರು. ಇದೇ ಕಾರಣಕ್ಕೆ ಇಬ್ಬರ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಕೊಲೆಗೆ ಇದೇ ಕಾರಣವಿರಬಹುದು ಎಂದು ಮೇಲ್ನೋಟಕ್ಕೆ ಕಂಡುಬಂದಿದೆ' ಎಂದು ಪೊಲೀಸರು ತಿಳಿಸಿದ್ದಾರೆ.

'ಎರಡು ದಿನಗಳ ಹಿಂದೆ ಕೂಡ ಇದೇ ಕಾರಣಕ್ಕೆ ಮತ್ತೆ ಇಬ್ಬರ ಮಧ್ಯೆ ಜಗಳವಾಗಿದೆ. ಈ ವಿಚಾರವಾಗಿ ಸಂಧಾನ ಮಾಡಿಕೊಳ್ಳೋಣ ಬಾ ಎಂದು ಪವನ್ ಹಾಗೂ ಆತನ ಗೆಳೆಯರು ಗುರುರಾಜ ಅವರನ್ನು ಕರೆದಿದ್ದರು. ಗುರುವಾರ ರಾತ್ರಿ ಮಾತುಕತೆ ನಡೆದ ಸಂದರ್ಭ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಹೊಡೆದಾಡುವ ವೇಳೆ ಗುರುರಾಜ ಮೇಲೆ ಪವನ್ ಕಲ್ಲಿನಿಂದ ಹಲ್ಲೆ ಮಾಡಿದ. ತೀವ್ರ ರಕ್ತಸ್ರಾವದಿಂದ ಗುರುರಾಜ ಸ್ಥಳದಲ್ಲೇ ಮೃತಪಟ್ಟರು' ಎಂದು ಗ್ರಾಮೀಣ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT