<p><strong>ಕಲಬುರಗಿ</strong>: ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಬೇಕು. ಎನ್ಟಿಎ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಇಸ್ಲಾಮಿಕ್ ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.</p>.<p>ಸಂಘಟನೆಯ ಮುಖಂಡ ಮುಬೀನ್ ಅಹಮ್ಮದ್ ಮಾತನಾಡಿ, ‘22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದ ಪರೀಕ್ಷೆಯ ಪ್ರಶ್ನೆಪತ್ರಿಕೆಗಳು ಮೊದಲೇ ಸೋರಿಕೆಯಾಗಿರುವುದು, ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಮತ್ತು ಕೇಂದ್ರ ಸರ್ಕಾರದ ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆ ಕುಸಿತ ಎತ್ತಿ ತೋರಿಸುತ್ತದೆ’ ಎಂದು ಆಪಾದಿಸಿದರು.</p>.<p>‘ಕೇಂದ್ರೀಕೃತ ಪರೀಕ್ಷೆಗಳನ್ನು ಸುರಕ್ಷಿತವಾಗಿ ನಡೆಸುವಲ್ಲಿ ಎನ್ಟಿಎ ವಿಫಲವಾಗಿದೆ. ಆದ್ದರಿಂದ, ಪರೀಕ್ಷಾ ವ್ಯವಸ್ಥೆಯ ವಿಕೇಂದ್ರೀಕರಣ ಮತ್ತು ಏಜೆನ್ಸಿಯ ರಚನೆಯಲ್ಲಿ ಸಂಪೂರ್ಣ ಸುಧಾರಣೆ ತರಬೇಕು ಎಂದು ಆಗ್ರಹಿಸಿದರು.</p>.<p>‘ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವ ಎಲ್ಲ ವ್ಯಕ್ತಿಗಳು ಮತ್ತು ಜಾಲಗಳ ವಿರುದ್ಧ ಪಾರದರ್ಶಕ ತನಿಖೆಯಾಗಬೇಕು ಹಾಗೂ ಅವರಿಗೆ ಕಠಿಣ ಶಿಕ್ಷೆ ನೀಡಬೇಕು. ನ್ಯಾಯಸಮ್ಮತ ಮತ್ತು ಸುರಕ್ಷಿತವಾಗಿ ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ ವಿಫಲವಾಗುತ್ತಿರುವ ಬಗ್ಗೆ ಕೇಂದ್ರ ಸರ್ಕಾರ ಇದಕ್ಕೆ ಉತ್ತರಿಸಬೇಕು’ ಎಂದು ಹೇಳಿದರು.</p>.<p>ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗೆ ಸಲ್ಲಿಸಲಾಯಿತು.</p>.<p>ಪ್ರತಿಭಟನೆಯಲ್ಲಿ ಅಬ್ದುಲ್ ಮಾಜೀದ್ ಖಾನ್, ಅಬ್ದುಲ್ ರೆಹಮಾನ್, ಅಬ್ದುಲ್ ನಾಸೀರ್, ಅಮ್ಮಾರ್, ಸಯ್ಯದ್ಉದ್ದೀನ್, ಮುಬೀರ್ ಅಹಮ್ಮದ್ ಸೇರಿ ಇತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-34-1960523277</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಬೇಕು. ಎನ್ಟಿಎ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಇಸ್ಲಾಮಿಕ್ ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.</p>.<p>ಸಂಘಟನೆಯ ಮುಖಂಡ ಮುಬೀನ್ ಅಹಮ್ಮದ್ ಮಾತನಾಡಿ, ‘22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದ ಪರೀಕ್ಷೆಯ ಪ್ರಶ್ನೆಪತ್ರಿಕೆಗಳು ಮೊದಲೇ ಸೋರಿಕೆಯಾಗಿರುವುದು, ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಮತ್ತು ಕೇಂದ್ರ ಸರ್ಕಾರದ ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆ ಕುಸಿತ ಎತ್ತಿ ತೋರಿಸುತ್ತದೆ’ ಎಂದು ಆಪಾದಿಸಿದರು.</p>.<p>‘ಕೇಂದ್ರೀಕೃತ ಪರೀಕ್ಷೆಗಳನ್ನು ಸುರಕ್ಷಿತವಾಗಿ ನಡೆಸುವಲ್ಲಿ ಎನ್ಟಿಎ ವಿಫಲವಾಗಿದೆ. ಆದ್ದರಿಂದ, ಪರೀಕ್ಷಾ ವ್ಯವಸ್ಥೆಯ ವಿಕೇಂದ್ರೀಕರಣ ಮತ್ತು ಏಜೆನ್ಸಿಯ ರಚನೆಯಲ್ಲಿ ಸಂಪೂರ್ಣ ಸುಧಾರಣೆ ತರಬೇಕು ಎಂದು ಆಗ್ರಹಿಸಿದರು.</p>.<p>‘ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವ ಎಲ್ಲ ವ್ಯಕ್ತಿಗಳು ಮತ್ತು ಜಾಲಗಳ ವಿರುದ್ಧ ಪಾರದರ್ಶಕ ತನಿಖೆಯಾಗಬೇಕು ಹಾಗೂ ಅವರಿಗೆ ಕಠಿಣ ಶಿಕ್ಷೆ ನೀಡಬೇಕು. ನ್ಯಾಯಸಮ್ಮತ ಮತ್ತು ಸುರಕ್ಷಿತವಾಗಿ ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ ವಿಫಲವಾಗುತ್ತಿರುವ ಬಗ್ಗೆ ಕೇಂದ್ರ ಸರ್ಕಾರ ಇದಕ್ಕೆ ಉತ್ತರಿಸಬೇಕು’ ಎಂದು ಹೇಳಿದರು.</p>.<p>ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗೆ ಸಲ್ಲಿಸಲಾಯಿತು.</p>.<p>ಪ್ರತಿಭಟನೆಯಲ್ಲಿ ಅಬ್ದುಲ್ ಮಾಜೀದ್ ಖಾನ್, ಅಬ್ದುಲ್ ರೆಹಮಾನ್, ಅಬ್ದುಲ್ ನಾಸೀರ್, ಅಮ್ಮಾರ್, ಸಯ್ಯದ್ಉದ್ದೀನ್, ಮುಬೀರ್ ಅಹಮ್ಮದ್ ಸೇರಿ ಇತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-34-1960523277</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>