<p><strong>ಸೇಡಂ(ಕಲಬುರಗಿ)</strong>: ತಾಲ್ಲೂಕಿನ ಮಲ್ಕಾಪಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಚಾವಣಿ ಕುಸಿದು ವಿದ್ಯಾರ್ಥಿಗಳ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಪಾಲಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. </p><p>ಶಾಲೆಯನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರಿಸಬೇಕು ಹಾಗೂ ಆ ಶಾಲಾ ಕಟ್ಟಡಕ್ಕೆ ಹೋಗಲು ಸಂಪರ್ಕ ರಸ್ತೆ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಶಾಲಾ ಆವರಣದಲ್ಲಿ ಜಮಖಾನೆ ಹಾಸಿ ಧರಣಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ.</p><p>ಶುಕ್ರವಾರ ಶಾಲೆಯ ಛತ್ತಿನ ಸಿಮೆಂಟ್ ಪದರು ಉದುರಿ ಕೆಲವು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಅದೃಷ್ಟವಶಾತ್ ಬಹುತೇಕ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಾಲೆಯ ಕಟ್ಟಡವೇ ಬಿದ್ದರೆ ಪರಿಸ್ಥಿತಿ ಗಂಭೀರವಾಗುತ್ತಿತ್ತು. ಇದಕ್ಕೆಲ್ಲಾ ಯಾರೂ ಜವಾಬ್ದಾರಾಗುತ್ತಾರೆ ಎಂದು ಪಾಲಕರು ಆಕ್ರೋಶ ಹೊರ ಹಾಕಿದ್ದಾರೆ.</p><p>ಕೂಡಲೇ ನೂತನ ಶಾಲಾ ಕಟ್ಟಡಕ್ಕೆ ಶಾಲೆಯನ್ನು ಸ್ಥಳಾಂತರಿಸಬೇಕು. ಶಾಲೆಗೆ ತೆರಳುವ ರಸ್ತೆ ಸಮಸ್ಯೆಯನ್ನು ಇತ್ಯರ್ಥಪಡಿಸಿ, ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ. </p>.<h2><strong>ಶಾಲೆಗೆ ಮಕ್ಕಳ ಕಳಿಸಲು ಪಾಲಕರ ಹಿಂದೇಟು:</strong></h2><p>ಶಾಲೆಯ ಚಾವಣಿಯ ಸಿಮೆಂಟ್ ಪದರು ಕುಸಿದು ವಿದ್ಯಾರ್ಥಿಗಳು ಗಾಯಗೊಂಡಿದ್ದರಿಂದ ಪಾಲಕರು ಆತಂಕಕ್ಕೆ ಒಳಗಾಗಿದ್ದಾರೆ. ಶನಿವಾರ ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಕಳಿಸುವಲ್ಲಿ ಹಿಂದೇಟು ಹಾಕಿದ್ದಾರೆ. 256 ವಿದ್ಯಾರ್ಥಿಗಳ ಪೈಕಿ 60 ವಿದ್ಯಾರ್ಥಿಗಳು ಮಾತ್ರ ಶನಿವಾರ ಶಾಲೆಗೆ ಹಾಜರಿದ್ದರು ಎನ್ನಲಾಗಿದೆ. </p>.<h3><strong>ಶಾಲೆಗೆ ಕಳಿಸಿದ್ರೆ ಮಕ್ಕಳನ್ನು ಎಲ್ಲಿ ಕೂಡಿಸ್ತಿರಿ?:</strong></h3><p>ಶಾಲೆಗೆ ಶನಿವಾರ ಭೇಟಿ ನೀಡಿದ ವಿದ್ಯಾರ್ಥಿಗಳ ಪಾಲಕರು ಮುಖ್ಯಶಿಕ್ಷಕರ ಜೊತೆಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ನಮ್ಮ ಮಕ್ಕಳನ್ನು ಶಾಲೆಗೆ ಕಳಿಸಿದ್ರೆ ಕೂಡಿಸಲು ಸ್ಥಳವಿಲ್ಲ. ಈಗಾಗಲೇ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಚಾವಣಿಯ ಸಿಮೆಂಟ್ ಬಿದ್ದ ಶಾಲೆಯಲ್ಲಿ ಕುಳಿತುಕೊಳ್ಳಲು ಆಗುವುದಿಲ್ಲ. ಮತ್ತೆ ಸ್ಥಳವೆಲ್ಲಿದೆ ? ಎಂದು ಪಾಲಕರು ಪ್ರಶ್ನಿಸಿದರು.</p>.<p>ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ನವಾದರೆಡ್ಡಿ, ವೆಂಕಟರೆಡ್ಡಿ ಪೋತುಲ್, ಬಸಿರೆಡ್ಡಿ ಮುನಕನಪಲ್ಲಿ, ಶಿವಾರೆಡ್ಡಿ ಅಂಡೆಡಿ, ರಾಜಶೇಖರ ಗೌಡ , ವಿನೋದ ಕುಮಾರ, ನರಸರೆಡ್ಡಿ ಮುನಕನಪಲ್ಲಿ, ವೀರೇಶ ಸಜ್ಜನ, ಗುಂಡಪ್ಪ ಸಜ್ಜನ, ಭೀಮು ತಿಪಡಮಪಲ್ಲಿ, ವೆಂಕಟಪ್ಪ, ನರಸಿಂಹಲು ಕಾವಲಿ, ರಾಜು ಸಿದ್ದಾಪುರ, ಬಸವರಾಜ ಯಾದವ, ಕಾಶಪ್ಪ, ಶೇಖರ ಸೇರಿದಂತೆ ಇನ್ನಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೇಡಂ(ಕಲಬುರಗಿ)</strong>: ತಾಲ್ಲೂಕಿನ ಮಲ್ಕಾಪಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಚಾವಣಿ ಕುಸಿದು ವಿದ್ಯಾರ್ಥಿಗಳ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಪಾಲಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. </p><p>ಶಾಲೆಯನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರಿಸಬೇಕು ಹಾಗೂ ಆ ಶಾಲಾ ಕಟ್ಟಡಕ್ಕೆ ಹೋಗಲು ಸಂಪರ್ಕ ರಸ್ತೆ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಶಾಲಾ ಆವರಣದಲ್ಲಿ ಜಮಖಾನೆ ಹಾಸಿ ಧರಣಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ.</p><p>ಶುಕ್ರವಾರ ಶಾಲೆಯ ಛತ್ತಿನ ಸಿಮೆಂಟ್ ಪದರು ಉದುರಿ ಕೆಲವು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಅದೃಷ್ಟವಶಾತ್ ಬಹುತೇಕ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಾಲೆಯ ಕಟ್ಟಡವೇ ಬಿದ್ದರೆ ಪರಿಸ್ಥಿತಿ ಗಂಭೀರವಾಗುತ್ತಿತ್ತು. ಇದಕ್ಕೆಲ್ಲಾ ಯಾರೂ ಜವಾಬ್ದಾರಾಗುತ್ತಾರೆ ಎಂದು ಪಾಲಕರು ಆಕ್ರೋಶ ಹೊರ ಹಾಕಿದ್ದಾರೆ.</p><p>ಕೂಡಲೇ ನೂತನ ಶಾಲಾ ಕಟ್ಟಡಕ್ಕೆ ಶಾಲೆಯನ್ನು ಸ್ಥಳಾಂತರಿಸಬೇಕು. ಶಾಲೆಗೆ ತೆರಳುವ ರಸ್ತೆ ಸಮಸ್ಯೆಯನ್ನು ಇತ್ಯರ್ಥಪಡಿಸಿ, ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ. </p>.<h2><strong>ಶಾಲೆಗೆ ಮಕ್ಕಳ ಕಳಿಸಲು ಪಾಲಕರ ಹಿಂದೇಟು:</strong></h2><p>ಶಾಲೆಯ ಚಾವಣಿಯ ಸಿಮೆಂಟ್ ಪದರು ಕುಸಿದು ವಿದ್ಯಾರ್ಥಿಗಳು ಗಾಯಗೊಂಡಿದ್ದರಿಂದ ಪಾಲಕರು ಆತಂಕಕ್ಕೆ ಒಳಗಾಗಿದ್ದಾರೆ. ಶನಿವಾರ ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಕಳಿಸುವಲ್ಲಿ ಹಿಂದೇಟು ಹಾಕಿದ್ದಾರೆ. 256 ವಿದ್ಯಾರ್ಥಿಗಳ ಪೈಕಿ 60 ವಿದ್ಯಾರ್ಥಿಗಳು ಮಾತ್ರ ಶನಿವಾರ ಶಾಲೆಗೆ ಹಾಜರಿದ್ದರು ಎನ್ನಲಾಗಿದೆ. </p>.<h3><strong>ಶಾಲೆಗೆ ಕಳಿಸಿದ್ರೆ ಮಕ್ಕಳನ್ನು ಎಲ್ಲಿ ಕೂಡಿಸ್ತಿರಿ?:</strong></h3><p>ಶಾಲೆಗೆ ಶನಿವಾರ ಭೇಟಿ ನೀಡಿದ ವಿದ್ಯಾರ್ಥಿಗಳ ಪಾಲಕರು ಮುಖ್ಯಶಿಕ್ಷಕರ ಜೊತೆಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ನಮ್ಮ ಮಕ್ಕಳನ್ನು ಶಾಲೆಗೆ ಕಳಿಸಿದ್ರೆ ಕೂಡಿಸಲು ಸ್ಥಳವಿಲ್ಲ. ಈಗಾಗಲೇ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಚಾವಣಿಯ ಸಿಮೆಂಟ್ ಬಿದ್ದ ಶಾಲೆಯಲ್ಲಿ ಕುಳಿತುಕೊಳ್ಳಲು ಆಗುವುದಿಲ್ಲ. ಮತ್ತೆ ಸ್ಥಳವೆಲ್ಲಿದೆ ? ಎಂದು ಪಾಲಕರು ಪ್ರಶ್ನಿಸಿದರು.</p>.<p>ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ನವಾದರೆಡ್ಡಿ, ವೆಂಕಟರೆಡ್ಡಿ ಪೋತುಲ್, ಬಸಿರೆಡ್ಡಿ ಮುನಕನಪಲ್ಲಿ, ಶಿವಾರೆಡ್ಡಿ ಅಂಡೆಡಿ, ರಾಜಶೇಖರ ಗೌಡ , ವಿನೋದ ಕುಮಾರ, ನರಸರೆಡ್ಡಿ ಮುನಕನಪಲ್ಲಿ, ವೀರೇಶ ಸಜ್ಜನ, ಗುಂಡಪ್ಪ ಸಜ್ಜನ, ಭೀಮು ತಿಪಡಮಪಲ್ಲಿ, ವೆಂಕಟಪ್ಪ, ನರಸಿಂಹಲು ಕಾವಲಿ, ರಾಜು ಸಿದ್ದಾಪುರ, ಬಸವರಾಜ ಯಾದವ, ಕಾಶಪ್ಪ, ಶೇಖರ ಸೇರಿದಂತೆ ಇನ್ನಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>