<p>ಕಲಬುರಗಿ: 2018–19ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮಂಜೂರಾದ ಮನೆ ಇನ್ನೂ ಪೂರ್ಣಗೊಳ್ಳದೇ ಇರುವ ಕುರಿತು ಫಲಾನುಭವಿ ಪ್ರಶಾಂತ ಭೀಮರಾವ ಅವರು ಉಪವಿಭಾಗಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.</p>.<p>‘ತಾರಫೈಲ್ 13ನೇ ಕ್ರಾಸ್ ನಿವಾಸಿ ರೇಣುಕಾ ಪ್ರಶಾಂತ ಅವರ ಹೆಸರಿನಲ್ಲಿ ಮನೆ ಮಂಜೂರಾಗಿದ್ದು, ಡಿ.ಡಿ ಕೂಡ ಪಾವತಿಸಲಾಗಿದೆ. ಆದರೆ, ಮನೆ ಕಾಮಗಾರಿ ಬೇಸ್ಮೆಂಟ್ ಹಂತದಲ್ಲೇ ನಿಂತಿದೆ. ಈ ಕುರಿತು ಹಲವು ಬಾರಿ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಶೀಘ್ರ ಮನೆ ಪೂರ್ಣಗೊಳಿಸುತ್ತೇವೆ ಎಂದು ಸುಳ್ಳು ಭರವಸೆ ನೀಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.</p>.<p>‘ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದಾಗ ಅಧಿಕಾರಿಗಳು ಬೇರೆ ಮನೆಯ ಛಾಯಾಚಿತ್ರ ನೀಡಿ ಮನೆ ಪೂರ್ಣಗೊಂಡಿದೆ ಎಂದು ತಪ್ಪು ಮಾಹಿತಿ ನೀಡಿದ್ದಾರೆ. ಸುಳ್ಳು ಮಾಹಿತಿ ನೀಡಿದ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದಿದ್ದಾರೆ.</p>.<p>ಸುರೇಶ ಇಟಗಿ, ಗುಂಡೇಶ ಶಿವನೂರ, ದೇವೇಂದ್ರ ಕವಳೇಕಾರ, ದತ್ತು ಹೈಯಾಳಕರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-34-1402233582</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: 2018–19ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮಂಜೂರಾದ ಮನೆ ಇನ್ನೂ ಪೂರ್ಣಗೊಳ್ಳದೇ ಇರುವ ಕುರಿತು ಫಲಾನುಭವಿ ಪ್ರಶಾಂತ ಭೀಮರಾವ ಅವರು ಉಪವಿಭಾಗಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.</p>.<p>‘ತಾರಫೈಲ್ 13ನೇ ಕ್ರಾಸ್ ನಿವಾಸಿ ರೇಣುಕಾ ಪ್ರಶಾಂತ ಅವರ ಹೆಸರಿನಲ್ಲಿ ಮನೆ ಮಂಜೂರಾಗಿದ್ದು, ಡಿ.ಡಿ ಕೂಡ ಪಾವತಿಸಲಾಗಿದೆ. ಆದರೆ, ಮನೆ ಕಾಮಗಾರಿ ಬೇಸ್ಮೆಂಟ್ ಹಂತದಲ್ಲೇ ನಿಂತಿದೆ. ಈ ಕುರಿತು ಹಲವು ಬಾರಿ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಶೀಘ್ರ ಮನೆ ಪೂರ್ಣಗೊಳಿಸುತ್ತೇವೆ ಎಂದು ಸುಳ್ಳು ಭರವಸೆ ನೀಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.</p>.<p>‘ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದಾಗ ಅಧಿಕಾರಿಗಳು ಬೇರೆ ಮನೆಯ ಛಾಯಾಚಿತ್ರ ನೀಡಿ ಮನೆ ಪೂರ್ಣಗೊಂಡಿದೆ ಎಂದು ತಪ್ಪು ಮಾಹಿತಿ ನೀಡಿದ್ದಾರೆ. ಸುಳ್ಳು ಮಾಹಿತಿ ನೀಡಿದ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದಿದ್ದಾರೆ.</p>.<p>ಸುರೇಶ ಇಟಗಿ, ಗುಂಡೇಶ ಶಿವನೂರ, ದೇವೇಂದ್ರ ಕವಳೇಕಾರ, ದತ್ತು ಹೈಯಾಳಕರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-34-1402233582</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>