<p><strong>ಕಲಬುರಗಿ:</strong> ಅಧಿಕಮಾಸದ ಅಂಗವಾಗಿ ಲೋಕಕಲ್ಯಾಣ, ವಿಶ್ವಶಾಂತಿ ಹಾಗೂ ಸನಾತನ ಧರ್ಮದ ಪ್ರಚಾರದ ಉದ್ದೇಶದಿಂದ ಕರುಣೇಶ್ವರ ನಗರದ ಜೈವೀರ ಹನುಮಾನ್ ಮಂದಿರದಲ್ಲಿ ಜೂ.5ರಂದು ಪುರುಷೋತ್ತಮ ಸತ್ರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆಯೋಜಕ ರಮಾಕಾಂತ ಜೋಶಿ ತಿಳಿಸಿದ್ದಾರೆ.</p>.<p>ಕಾರ್ಯಕ್ರಮವು ಬೆಳಿಗ್ಗೆ 6 ಗಂಟೆಗೆ ಹನುಮಂತ ದೇವರಿಗೆ 33 ಕೆ.ಜಿ ಮಾವಿನ ಹಣ್ಣಿನ ಅಭಿಷೇಕದೊಂದಿಗೆ ಆರಂಭವಾಗಲಿದೆ. ಬೆಳಿಗ್ಗೆ 8 ಗಂಟೆಗೆ ಗಂವ್ಹಾರದ ಸೋಪಾನನಾಥ ಸ್ವಾಮೀಜಿ, ಆನೆಗುಂದಿಯ ಸುರೇಂದ್ರ ಸ್ವಾಮೀಜಿ ಅವರಿಂದ ಧರ್ಮಧ್ವಜಾರೋಹಣ ನಡೆಯಲಿದೆ.</p>.<p>ಬೆಳಿಗ್ಗೆ 9 ಗಂಟೆಗೆ ನಾರಾಯಣ ಅಷ್ಟಾಕ್ಷರಿ ಮಹಾಮಂತ್ರ ಜಪ ಆರಂಭವಾಗಲಿದ್ದು, ಹುಣಸಗಿಯ ಉಮಾಕಾಂತ ಮಹಾರಾಜ್ ಸಾನ್ನಿಧ್ಯದಲ್ಲಿ ಸಾವಿರಾರು ಭಕ್ತರು ಭಾಗವಹಿಸಲಿದ್ದಾರೆ.</p>.<p>ಬೆಳಿಗ್ಗೆ 11 ಗಂಟೆಗೆ ನಾರಾಯಣ ಅಷ್ಟಾಕ್ಷರಿ ಮಹಾಮಂತ್ರ ಹೋಮ ಮತ್ತು ವಿಷ್ಣು ಪಂಚಾಯತನ ಯಾಗ ನೆರವೇರಲಿದ್ದು, ಸುರಪುರ ಪಂಚಾಂಗದ ಕರ್ತೃ ಕೇದಾರನಾಥ್ ಶಾಸ್ತ್ರಿ ಯಾಳಗಿಕರ್, ಸೇಡಂನ ಸಂತೋಷ ಸ್ವಾಮಿ ಮಹಾರಾಜ್ ಸಾನ್ನಿಧ್ಯ ವಹಿಸಲಿದ್ದಾರೆ.</p>.<p>ಮಧ್ಯಾಹ್ನ 1 ಗಂಟೆಗೆ ಪೂರ್ಣಾಹುತಿ, ಮಹಾಮಂಗಳಾರತಿ ಹಾಗೂ ತೀರ್ಥಪ್ರಸಾದ ವಿತರಣೆ ನಡೆಯಲಿದೆ. ಸಂಜೆ 5 ಗಂಟೆಗೆ ಮಹಿಳೆಯರಿಂದ ಲಕ್ಷ ಕುಂಕುಮಾರ್ಚನೆ ಕಾರ್ಯಕ್ರಮ ಜರುಗಲಿದೆ ಎಂದು ಸಮಿತಿಯವರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-34-200582103</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಅಧಿಕಮಾಸದ ಅಂಗವಾಗಿ ಲೋಕಕಲ್ಯಾಣ, ವಿಶ್ವಶಾಂತಿ ಹಾಗೂ ಸನಾತನ ಧರ್ಮದ ಪ್ರಚಾರದ ಉದ್ದೇಶದಿಂದ ಕರುಣೇಶ್ವರ ನಗರದ ಜೈವೀರ ಹನುಮಾನ್ ಮಂದಿರದಲ್ಲಿ ಜೂ.5ರಂದು ಪುರುಷೋತ್ತಮ ಸತ್ರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆಯೋಜಕ ರಮಾಕಾಂತ ಜೋಶಿ ತಿಳಿಸಿದ್ದಾರೆ.</p>.<p>ಕಾರ್ಯಕ್ರಮವು ಬೆಳಿಗ್ಗೆ 6 ಗಂಟೆಗೆ ಹನುಮಂತ ದೇವರಿಗೆ 33 ಕೆ.ಜಿ ಮಾವಿನ ಹಣ್ಣಿನ ಅಭಿಷೇಕದೊಂದಿಗೆ ಆರಂಭವಾಗಲಿದೆ. ಬೆಳಿಗ್ಗೆ 8 ಗಂಟೆಗೆ ಗಂವ್ಹಾರದ ಸೋಪಾನನಾಥ ಸ್ವಾಮೀಜಿ, ಆನೆಗುಂದಿಯ ಸುರೇಂದ್ರ ಸ್ವಾಮೀಜಿ ಅವರಿಂದ ಧರ್ಮಧ್ವಜಾರೋಹಣ ನಡೆಯಲಿದೆ.</p>.<p>ಬೆಳಿಗ್ಗೆ 9 ಗಂಟೆಗೆ ನಾರಾಯಣ ಅಷ್ಟಾಕ್ಷರಿ ಮಹಾಮಂತ್ರ ಜಪ ಆರಂಭವಾಗಲಿದ್ದು, ಹುಣಸಗಿಯ ಉಮಾಕಾಂತ ಮಹಾರಾಜ್ ಸಾನ್ನಿಧ್ಯದಲ್ಲಿ ಸಾವಿರಾರು ಭಕ್ತರು ಭಾಗವಹಿಸಲಿದ್ದಾರೆ.</p>.<p>ಬೆಳಿಗ್ಗೆ 11 ಗಂಟೆಗೆ ನಾರಾಯಣ ಅಷ್ಟಾಕ್ಷರಿ ಮಹಾಮಂತ್ರ ಹೋಮ ಮತ್ತು ವಿಷ್ಣು ಪಂಚಾಯತನ ಯಾಗ ನೆರವೇರಲಿದ್ದು, ಸುರಪುರ ಪಂಚಾಂಗದ ಕರ್ತೃ ಕೇದಾರನಾಥ್ ಶಾಸ್ತ್ರಿ ಯಾಳಗಿಕರ್, ಸೇಡಂನ ಸಂತೋಷ ಸ್ವಾಮಿ ಮಹಾರಾಜ್ ಸಾನ್ನಿಧ್ಯ ವಹಿಸಲಿದ್ದಾರೆ.</p>.<p>ಮಧ್ಯಾಹ್ನ 1 ಗಂಟೆಗೆ ಪೂರ್ಣಾಹುತಿ, ಮಹಾಮಂಗಳಾರತಿ ಹಾಗೂ ತೀರ್ಥಪ್ರಸಾದ ವಿತರಣೆ ನಡೆಯಲಿದೆ. ಸಂಜೆ 5 ಗಂಟೆಗೆ ಮಹಿಳೆಯರಿಂದ ಲಕ್ಷ ಕುಂಕುಮಾರ್ಚನೆ ಕಾರ್ಯಕ್ರಮ ಜರುಗಲಿದೆ ಎಂದು ಸಮಿತಿಯವರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-34-200582103</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>