<p><strong>ಕಲಬುರಗಿ: ಇ</strong>ಲ್ಲಿನ ಸಿಟಿ ಬಸ್ ನಿಲ್ದಾಣ ಮುಂಭಾಗದಲ್ಲಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯ ಕೈಯಲ್ಲಿದ್ದ ಖಡ್ಗವನ್ನು ಕಿಡಿಗೇಡಿಗಳು ಭಾನುವಾರ ವಿರೂಪಗೊಳಿಸಿದ್ದು, ಈ ಸಂಬಂಧ ಮಾನಸಿಕ ಅಸ್ವಸ್ಥನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ನಾಲ್ಕು ವರ್ಷಗಳ ಹಿಂದೆಯೇ ರಾಯಣ್ಣನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು. ಮೂರ್ತಿಯ ಖಡ್ಗವನ್ನು ಮಾನಸಿಕ ಅಸ್ವಸ್ಥ ವಿರೂಪಗೊಳಿಸಿ ಹಾನಿ ಮಾಡಿದ್ದ. ಇದರಿಂದ ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದು, ಬಿಗುವಿನ ವಾತಾವರಣ ಉಂಟಾಯಿತು.</p>.<p>ಮೂರ್ತಿ ಪಕ್ಕದ ಅಪ್ಪನ ಕೆರೆಯ ಬದಿಯಲ್ಲಿ ಅರೆ ಬೆತ್ತಲೆಯಾಗಿ ಓಡಾಡುತ್ತಿದ್ದ 25ರ ಆಸುಪಾಸಿನ ಮಾನಸಿಕ ಅಸ್ವಸ್ಥನನ್ನು ಬ್ರಹ್ಮಪುರ ಠಾಣೆಯ ಪೊಲೀಸರು ವಶಕ್ಕೆ ಪಡೆದರು. ಮೂರ್ತಿಯನ್ನು ಬಟ್ಟೆಯಿಂದ ಮುಚ್ಚಲಾಗಿದ್ದು, ಸ್ಥಳದಲ್ಲಿ ಪೊಲೀಸರು ನಿಯೋಜನೆ ಮಾಡಲಾಗಿದೆ.</p>.<p>ಟೈರ್ಗೆ ಬೆಂಕಿ ಹಚ್ಚಿ ಕುರುಬ ಸಮುದಾಯದ ಮುಖಂಡರು, ರಾಯಣ್ಣನ ಅಭಿಮಾನಿಗಳು ಪ್ರತಿಭಟನೆ ನಡೆಸಿದರು. ಮೂರ್ತಿಯ ಸುತ್ತ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಭದ್ರತೆ ಒದಗಿಸಬೇಕು. ವಿರೂಪ ತಡೆಯುವಲ್ಲಿ ವಿಫಲವಾದ ಬೀಟ್ನಲ್ಲಿದ್ದ ಪೊಲೀಸರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ: ಇ</strong>ಲ್ಲಿನ ಸಿಟಿ ಬಸ್ ನಿಲ್ದಾಣ ಮುಂಭಾಗದಲ್ಲಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯ ಕೈಯಲ್ಲಿದ್ದ ಖಡ್ಗವನ್ನು ಕಿಡಿಗೇಡಿಗಳು ಭಾನುವಾರ ವಿರೂಪಗೊಳಿಸಿದ್ದು, ಈ ಸಂಬಂಧ ಮಾನಸಿಕ ಅಸ್ವಸ್ಥನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ನಾಲ್ಕು ವರ್ಷಗಳ ಹಿಂದೆಯೇ ರಾಯಣ್ಣನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು. ಮೂರ್ತಿಯ ಖಡ್ಗವನ್ನು ಮಾನಸಿಕ ಅಸ್ವಸ್ಥ ವಿರೂಪಗೊಳಿಸಿ ಹಾನಿ ಮಾಡಿದ್ದ. ಇದರಿಂದ ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದು, ಬಿಗುವಿನ ವಾತಾವರಣ ಉಂಟಾಯಿತು.</p>.<p>ಮೂರ್ತಿ ಪಕ್ಕದ ಅಪ್ಪನ ಕೆರೆಯ ಬದಿಯಲ್ಲಿ ಅರೆ ಬೆತ್ತಲೆಯಾಗಿ ಓಡಾಡುತ್ತಿದ್ದ 25ರ ಆಸುಪಾಸಿನ ಮಾನಸಿಕ ಅಸ್ವಸ್ಥನನ್ನು ಬ್ರಹ್ಮಪುರ ಠಾಣೆಯ ಪೊಲೀಸರು ವಶಕ್ಕೆ ಪಡೆದರು. ಮೂರ್ತಿಯನ್ನು ಬಟ್ಟೆಯಿಂದ ಮುಚ್ಚಲಾಗಿದ್ದು, ಸ್ಥಳದಲ್ಲಿ ಪೊಲೀಸರು ನಿಯೋಜನೆ ಮಾಡಲಾಗಿದೆ.</p>.<p>ಟೈರ್ಗೆ ಬೆಂಕಿ ಹಚ್ಚಿ ಕುರುಬ ಸಮುದಾಯದ ಮುಖಂಡರು, ರಾಯಣ್ಣನ ಅಭಿಮಾನಿಗಳು ಪ್ರತಿಭಟನೆ ನಡೆಸಿದರು. ಮೂರ್ತಿಯ ಸುತ್ತ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಭದ್ರತೆ ಒದಗಿಸಬೇಕು. ವಿರೂಪ ತಡೆಯುವಲ್ಲಿ ವಿಫಲವಾದ ಬೀಟ್ನಲ್ಲಿದ್ದ ಪೊಲೀಸರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>