<p>ಕಲಬುರಗಿ: ನಗರದ ಗಂಜ್ ಪ್ರದೇಶದ ಹುಮನಾಬಾದ್ ರಸ್ತೆಯಲ್ಲಿರುವ ಗಾಂಧಿ ನಗರದಲ್ಲಿ ಮೇ 11ರಂದು ರೇವಣಸಿದ್ಧೇಶ್ವರ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನಡೆಯಲಿದ್ದು, ಈ ಅಂಗವಾಗಿ ಹಮ್ಮಿಕೊಂಡಿರುವ ಐದು ದಿನಗಳ ಪ್ರವಚನ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ದೊರೆತಿದೆ.</p>.<p>ದೇವಸ್ಥಾನದ ಆವರಣದಲ್ಲಿ ಗುರುವಾರ ಸಂಜೆ 7 ಗಂಟೆಗೆ ಬ್ರಹ್ಮಪುರದ ರಾಜಶೇಖರ ಶಿವಾಚಾರ್ಯ ಹಾಗೂ ಹಿರೇರೋಜಾದ ಕೆಂಚಬಸವ ಶಿವಾಚಾರ್ಯರು ಪ್ರವಚನ ಕಾರ್ಯಕ್ರಮ ಉದ್ಘಾಟಿಸಿದರು. ರಟಕಲ್ನ ಶಂಭುಲಿಂಗ ಶಾಸ್ತ್ರಿಗಳು ಪ್ರವಚನ ನೀಡಿದರು. ಮೇ11ರ ತನಕ ನಿತ್ಯ ಸಂಜೆ 7 ಗಂಟೆಗೆ ಜರುಗಲಿದೆ. ಮೇ 11ರಂದು ಬೆಳಿಗ್ಗೆ 5 ಗಂಟೆಗೆ ರೇವಣಸಿದ್ಧೇಶ್ವರ ಮೂರ್ತಿಯ ಪ್ರಾಣಪ್ರತಿಷ್ಠಾಪನೆ ನಡೆಯಲಿದೆ. ವಿವಿಧ ಸ್ವಾಮೀಜಿಗಳು ಸಾನ್ನಿಧ್ಯವಹಿಸುವರು. ಅಂದು ಬೆಳಿಗ್ಗೆ 11 ಗಂಟೆಗೆ ಧರ್ಮ ಸಭೆ ಜರುಗಲಿದೆ. ಮಧ್ಯಾಹ್ನ 12.30ರಿಂದ ಅನ್ನ ಸಂತರ್ಪಣೆ ನಡೆಯಲಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-34-1385978147</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ನಗರದ ಗಂಜ್ ಪ್ರದೇಶದ ಹುಮನಾಬಾದ್ ರಸ್ತೆಯಲ್ಲಿರುವ ಗಾಂಧಿ ನಗರದಲ್ಲಿ ಮೇ 11ರಂದು ರೇವಣಸಿದ್ಧೇಶ್ವರ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನಡೆಯಲಿದ್ದು, ಈ ಅಂಗವಾಗಿ ಹಮ್ಮಿಕೊಂಡಿರುವ ಐದು ದಿನಗಳ ಪ್ರವಚನ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ದೊರೆತಿದೆ.</p>.<p>ದೇವಸ್ಥಾನದ ಆವರಣದಲ್ಲಿ ಗುರುವಾರ ಸಂಜೆ 7 ಗಂಟೆಗೆ ಬ್ರಹ್ಮಪುರದ ರಾಜಶೇಖರ ಶಿವಾಚಾರ್ಯ ಹಾಗೂ ಹಿರೇರೋಜಾದ ಕೆಂಚಬಸವ ಶಿವಾಚಾರ್ಯರು ಪ್ರವಚನ ಕಾರ್ಯಕ್ರಮ ಉದ್ಘಾಟಿಸಿದರು. ರಟಕಲ್ನ ಶಂಭುಲಿಂಗ ಶಾಸ್ತ್ರಿಗಳು ಪ್ರವಚನ ನೀಡಿದರು. ಮೇ11ರ ತನಕ ನಿತ್ಯ ಸಂಜೆ 7 ಗಂಟೆಗೆ ಜರುಗಲಿದೆ. ಮೇ 11ರಂದು ಬೆಳಿಗ್ಗೆ 5 ಗಂಟೆಗೆ ರೇವಣಸಿದ್ಧೇಶ್ವರ ಮೂರ್ತಿಯ ಪ್ರಾಣಪ್ರತಿಷ್ಠಾಪನೆ ನಡೆಯಲಿದೆ. ವಿವಿಧ ಸ್ವಾಮೀಜಿಗಳು ಸಾನ್ನಿಧ್ಯವಹಿಸುವರು. ಅಂದು ಬೆಳಿಗ್ಗೆ 11 ಗಂಟೆಗೆ ಧರ್ಮ ಸಭೆ ಜರುಗಲಿದೆ. ಮಧ್ಯಾಹ್ನ 12.30ರಿಂದ ಅನ್ನ ಸಂತರ್ಪಣೆ ನಡೆಯಲಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-34-1385978147</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>