<p><strong>ಕಲಬುರಗಿ</strong>: ಸಾರ್ವಜನಿಕರಿಗೆ ಕಾಲಮಿತಿಯಲ್ಲಿಯೇ ಸರ್ಕಾರಿ ಸೇವೆ ಒದಗಿಸುವ ‘ಸಕಾಲ’ ಯೋಜನೆಯಡಿ ಕಳೆದ ಆಗಸ್ಟ್ ತಿಂಗಳ ಅರ್ಜಿ ವಿಲೇವಾರಿಯಲ್ಲಿ ಕಲಬುರಗಿ ಜಿಲ್ಲೆ ರಾಜ್ಯದಲ್ಲಿಯೇ ಮೊದಲನೇ ಸ್ಥಾನ ಗಳಿಸಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.</p>.<p>ಜುಲೈ ತಿಂಗಳಲ್ಲಿಯೂ ಜಿಲ್ಲೆ ಸಕಾಲ ಸೇವೆಗಳ ವಿಲೇವಾರಿಯಲ್ಲಿ ಪ್ರಥಮ ಸ್ಥಾನದಲ್ಲೇ ಇತ್ತು.</p>.<p>ಆಗಸ್ಟ್ ತಿಂಗಳಲ್ಲಿ ಸಲ್ಲಿಕೆಯಾದ 1,17,044 ಅರ್ಜಿಗಳಲ್ಲಿ 1,16,567 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದ್ದು, ಮಾಸಾಂತ್ಯಕ್ಕೆ ಕೇವಲ 1407 ಅರ್ಜಿಗಳು ಮಾತ್ರ ಬಾಕಿ ಉಳಿದುಕೊಂಡಿವೆ. 1,15,160 ಅರ್ಜಿಗಳನ್ನು ನಿಗದಿತ ಕಾಲಮಿತಿಯಲ್ಲೇ ವಿಲೇವಾರಿ ಮಾಡಲಾಗಿದೆ. ಶೇ 98.79ರಷ್ಟು ಸಾಧನೆ ಮಾಡಿದಂತಾಗಿದೆ. </p>.<p>ಬೆಂಗಳೂರು, ಮೈಸೂರು, ಬೆಳಗಾವಿ ಹೊರತುಪಡಿಸಿದರೆ ಕಲಬುರಗಿ ಜಿಲ್ಲೆಯಲ್ಲಿ ಹೆಚ್ಚು ಅರ್ಜಿ ಸ್ವೀಕೃತಗೊಂಡಿದ್ದು, ವಿಲೇವಾರಿಯಲ್ಲಿಯೂ ಕಲಬುರಗಿ ಜಿಲ್ಲೆ ಮುಂದಿದೆ. ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿ–ಸಿಬ್ಬಂದಿಗಳ ಪ್ರಯತ್ನದ ಫಲವಾಗಿ ಜಿಲ್ಲೆ ಇಂದು ರಾಜ್ಯದಲ್ಲಿಯೇ ಮೊದಲನೇ ಸ್ಥಾನದಲ್ಲಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಸಾರ್ವಜನಿಕರಿಗೆ ಕಾಲಮಿತಿಯಲ್ಲಿಯೇ ಸರ್ಕಾರಿ ಸೇವೆ ಒದಗಿಸುವ ‘ಸಕಾಲ’ ಯೋಜನೆಯಡಿ ಕಳೆದ ಆಗಸ್ಟ್ ತಿಂಗಳ ಅರ್ಜಿ ವಿಲೇವಾರಿಯಲ್ಲಿ ಕಲಬುರಗಿ ಜಿಲ್ಲೆ ರಾಜ್ಯದಲ್ಲಿಯೇ ಮೊದಲನೇ ಸ್ಥಾನ ಗಳಿಸಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.</p>.<p>ಜುಲೈ ತಿಂಗಳಲ್ಲಿಯೂ ಜಿಲ್ಲೆ ಸಕಾಲ ಸೇವೆಗಳ ವಿಲೇವಾರಿಯಲ್ಲಿ ಪ್ರಥಮ ಸ್ಥಾನದಲ್ಲೇ ಇತ್ತು.</p>.<p>ಆಗಸ್ಟ್ ತಿಂಗಳಲ್ಲಿ ಸಲ್ಲಿಕೆಯಾದ 1,17,044 ಅರ್ಜಿಗಳಲ್ಲಿ 1,16,567 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದ್ದು, ಮಾಸಾಂತ್ಯಕ್ಕೆ ಕೇವಲ 1407 ಅರ್ಜಿಗಳು ಮಾತ್ರ ಬಾಕಿ ಉಳಿದುಕೊಂಡಿವೆ. 1,15,160 ಅರ್ಜಿಗಳನ್ನು ನಿಗದಿತ ಕಾಲಮಿತಿಯಲ್ಲೇ ವಿಲೇವಾರಿ ಮಾಡಲಾಗಿದೆ. ಶೇ 98.79ರಷ್ಟು ಸಾಧನೆ ಮಾಡಿದಂತಾಗಿದೆ. </p>.<p>ಬೆಂಗಳೂರು, ಮೈಸೂರು, ಬೆಳಗಾವಿ ಹೊರತುಪಡಿಸಿದರೆ ಕಲಬುರಗಿ ಜಿಲ್ಲೆಯಲ್ಲಿ ಹೆಚ್ಚು ಅರ್ಜಿ ಸ್ವೀಕೃತಗೊಂಡಿದ್ದು, ವಿಲೇವಾರಿಯಲ್ಲಿಯೂ ಕಲಬುರಗಿ ಜಿಲ್ಲೆ ಮುಂದಿದೆ. ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿ–ಸಿಬ್ಬಂದಿಗಳ ಪ್ರಯತ್ನದ ಫಲವಾಗಿ ಜಿಲ್ಲೆ ಇಂದು ರಾಜ್ಯದಲ್ಲಿಯೇ ಮೊದಲನೇ ಸ್ಥಾನದಲ್ಲಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>