<p>ಕಲಬುರಗಿ: ಎಸ್ಬಿಐ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯ ನವೀಕೃತ ಕಟ್ಟಡವನ್ನು ಜಿಲ್ಲಾ ಪಂಚಾಯಿತಿ ಸಿಇಒ ಭವಂರ್ ಸಿಂಗ್ ಮೀನಾ ಉದ್ಘಾಟಿಸಿದರು.</p>.<p>ಬಳಿಕ ಮಾತನಾಡಿದ ಅವರು, ‘ಎಸ್ಬಿಐ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯ ಗ್ರಾಮೀಣ ಯುವಕರ ಜೀವನದಲ್ಲಿ ಮಹತ್ವದ ಬದಲಾವಣೆ ತರುತ್ತಿದೆ. ಇಲ್ಲಿ ತರಬೇತಿ ಪಡೆದವರು ಉದ್ಯೋಗ ಹುಡುಕುವ ಬದಲು ಉದ್ಯೋಗ ಸೃಷ್ಟಿಸುವವರಾಗುತ್ತಿದ್ದಾರೆ’ ಎಂದು ಹೇಳಿದರು.</p>.<p>ಎಸ್ಬಿಐ ಪ್ರಾದೇಶಿಕ ವ್ಯವಸ್ಥಾಪಕ ದೇವಕಿನಂದನ್ ಖಂಡೇಲ್ವಾಲ್ ಮಾಡನಾಡಿ, ‘ತರಬೇತಿ ನೀಡುವುದಷ್ಟೇ ನಮ್ಮ ಉದ್ದೇಶವಲ್ಲ, ಗ್ರಾಮೀಣ ಯುವಕರನ್ನು ಆತ್ಮನಿರ್ಭರ ಉದ್ಯಮಿಗಳಾಗಿ ರೂಪಿಸುವುದು ನಮ್ಮ ಧ್ಯೇಯ’ ಎಂದರು.</p>.<p>‘1997ರಲ್ಲಿ ಸ್ಥಾಪನೆಯಾದ ಸಂಸ್ಥೆ ಇಂದಿನವರೆಗೆ 25,000ಕ್ಕೂ ಹೆಚ್ಚು ಗ್ರಾಮೀಣ ಯುವಕರಿಗೆ ವಿವಿಧ ಕೌಶಲಾಭಿವೃದ್ಧಿ ತರಬೇತಿ ನೀಡಿದೆ. ಬಹುತೇಕರು ಸ್ವಂತ ಉದ್ಯಮ ಆರಂಭಿಸಿ ಆರ್ಥಿಕವಾಗಿ ಸದೃಢರಾಗಿದ್ದಾರೆ. 70ಕ್ಕೂ ಹೆಚ್ಚು ತರಬೇತಿ ಕಾರ್ಯಕ್ರಮಗಳು ಲಭ್ಯ ಇವೆ’ ಎಂದು ಮಾಹಿತಿ ನೀಡಿದರು.</p>.<p>ನಬಾರ್ಡ್ ಡಿಡಿಎಂ ಲೋಹಿತ್ ಪಿ. ಮಾತನಾಡಿ, ‘ಕೌಶಲಾಭಿವೃದ್ಧಿಯ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧ್ಯ, ಈ ದಿಶೆಯಲ್ಲಿ ಆರ್ಸೆಟಿ ಶ್ಲಾಘನೀಯ ಕಾರ್ಯ ಮಾಡುತ್ತಿದೆ’ ಎಂದು ಹೇಳಿದರು.</p>.<p>ಲೀಡ್ ಜಿಲ್ಲಾ ವ್ಯವಸ್ಥಾಪಕ ರವಿಗೌಡ, ಜಿ.ಪಂ ಯೋಜನಾ ನಿರ್ದೇಶಕ ಜಗದೇವ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-34-247975432</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ಎಸ್ಬಿಐ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯ ನವೀಕೃತ ಕಟ್ಟಡವನ್ನು ಜಿಲ್ಲಾ ಪಂಚಾಯಿತಿ ಸಿಇಒ ಭವಂರ್ ಸಿಂಗ್ ಮೀನಾ ಉದ್ಘಾಟಿಸಿದರು.</p>.<p>ಬಳಿಕ ಮಾತನಾಡಿದ ಅವರು, ‘ಎಸ್ಬಿಐ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯ ಗ್ರಾಮೀಣ ಯುವಕರ ಜೀವನದಲ್ಲಿ ಮಹತ್ವದ ಬದಲಾವಣೆ ತರುತ್ತಿದೆ. ಇಲ್ಲಿ ತರಬೇತಿ ಪಡೆದವರು ಉದ್ಯೋಗ ಹುಡುಕುವ ಬದಲು ಉದ್ಯೋಗ ಸೃಷ್ಟಿಸುವವರಾಗುತ್ತಿದ್ದಾರೆ’ ಎಂದು ಹೇಳಿದರು.</p>.<p>ಎಸ್ಬಿಐ ಪ್ರಾದೇಶಿಕ ವ್ಯವಸ್ಥಾಪಕ ದೇವಕಿನಂದನ್ ಖಂಡೇಲ್ವಾಲ್ ಮಾಡನಾಡಿ, ‘ತರಬೇತಿ ನೀಡುವುದಷ್ಟೇ ನಮ್ಮ ಉದ್ದೇಶವಲ್ಲ, ಗ್ರಾಮೀಣ ಯುವಕರನ್ನು ಆತ್ಮನಿರ್ಭರ ಉದ್ಯಮಿಗಳಾಗಿ ರೂಪಿಸುವುದು ನಮ್ಮ ಧ್ಯೇಯ’ ಎಂದರು.</p>.<p>‘1997ರಲ್ಲಿ ಸ್ಥಾಪನೆಯಾದ ಸಂಸ್ಥೆ ಇಂದಿನವರೆಗೆ 25,000ಕ್ಕೂ ಹೆಚ್ಚು ಗ್ರಾಮೀಣ ಯುವಕರಿಗೆ ವಿವಿಧ ಕೌಶಲಾಭಿವೃದ್ಧಿ ತರಬೇತಿ ನೀಡಿದೆ. ಬಹುತೇಕರು ಸ್ವಂತ ಉದ್ಯಮ ಆರಂಭಿಸಿ ಆರ್ಥಿಕವಾಗಿ ಸದೃಢರಾಗಿದ್ದಾರೆ. 70ಕ್ಕೂ ಹೆಚ್ಚು ತರಬೇತಿ ಕಾರ್ಯಕ್ರಮಗಳು ಲಭ್ಯ ಇವೆ’ ಎಂದು ಮಾಹಿತಿ ನೀಡಿದರು.</p>.<p>ನಬಾರ್ಡ್ ಡಿಡಿಎಂ ಲೋಹಿತ್ ಪಿ. ಮಾತನಾಡಿ, ‘ಕೌಶಲಾಭಿವೃದ್ಧಿಯ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧ್ಯ, ಈ ದಿಶೆಯಲ್ಲಿ ಆರ್ಸೆಟಿ ಶ್ಲಾಘನೀಯ ಕಾರ್ಯ ಮಾಡುತ್ತಿದೆ’ ಎಂದು ಹೇಳಿದರು.</p>.<p>ಲೀಡ್ ಜಿಲ್ಲಾ ವ್ಯವಸ್ಥಾಪಕ ರವಿಗೌಡ, ಜಿ.ಪಂ ಯೋಜನಾ ನಿರ್ದೇಶಕ ಜಗದೇವ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-34-247975432</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>