<p><strong>ಕಲಬುರಗಿ:</strong> ನಗರದ ಹೊರ ವಲಯದ ನಾಗನಹಳ್ಳಿ ರಿಂಗ್ ರಸ್ತೆಯಲ್ಲಿ ಮಂಗಳವಾರ ಬೆಳಿಗ್ಗೆ 8.30ರ ಹೊತ್ತಿಗೆ ಸಿಮೆಂಟ್ ತುಂಬಿದ್ದ ಟ್ಯಾಂಕರ್ ಹಾಗೂ ಶಾಲಾ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಆರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.</p><p>ಗಾಯಾಳುಗಳನ್ನು ಆದಿತ್ಯ (12 ವರ್ಷ), ಪ್ರೀತಂ ನಿಂಗಣ್ಣ (6 ವರ್ಷ), ಸುಪ್ರೀತ್ (9 ವರ್ಷ), ಸಾಯಿನಾಥ (13), ದಕ್ಷಿತ್ (7 ವರ್ಷ), ವಿಕ್ರಾಂತ (14 ವರ್ಷ) ಎಂದು ಗುರುತಿಸಲಾಗಿದೆ.</p><p>ಆದಿತ್ಯನನ್ನು ನಗರದ ಕಾಮರೆಡ್ಡಿ ಆಸ್ಪತ್ರೆಗೆ, ಪ್ರೀತಂನನ್ನು ಬಿಲ್ವಾ ಆಸ್ಪತ್ರೆಗೆ ಹಾಗೂ ಇನ್ನುಳಿದ ನಾಲ್ವರು ಮಕ್ಕಳನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>‘ಚಂದ್ರಕಾಂತ ಪಾಟೀಲ ಪಬ್ಲಿಕ್ ಶಾಲೆಗೆ ಸೇರಿದ ಶಾಲಾ ವಾಹನ ರಾಮಮಂದಿರ ಕಡೆಯಿಂದ ನಾಗನಹಳ್ಳಿ ರಿಂಗ್ ರಸ್ತೆಯತ್ತ ಬರುತ್ತಿತ್ತು. ವಾಡಿಯಿಂದ ಸಿಮೆಂಟ್ ತುಂಬಿಕೊಂಡು ಹೊರಟ್ಟಿದ್ದ ವೇಳೆ ಅಪಘಾತ ಸಂಭವಿಸಿದೆ’ ಎಂದು ಮೂಲಗಳು ಹೇಳಿವೆ.</p><p>ಅಪಘಾತದಲ್ಲಿ ಶಾಲಾ ವಾಹನದ ಮುಂಭಾಗ ನಜ್ಜುಗುಜ್ಜಾಗಿದ್ದು, ಮುಂದಿನ ಗಾಜು ಒಡೆದಿದೆ. ಈ ಕುರಿತು ಇನ್ನಷ್ಟೇ ಕಲಬುರಗಿ ನಗರ ಸಂಚಾರ ಪೊಲೀಸ್ ಠಾಣೆ–2ರಲ್ಲಿ ಪ್ರಕರಣ ದಾಖಲಾಗಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ನಗರದ ಹೊರ ವಲಯದ ನಾಗನಹಳ್ಳಿ ರಿಂಗ್ ರಸ್ತೆಯಲ್ಲಿ ಮಂಗಳವಾರ ಬೆಳಿಗ್ಗೆ 8.30ರ ಹೊತ್ತಿಗೆ ಸಿಮೆಂಟ್ ತುಂಬಿದ್ದ ಟ್ಯಾಂಕರ್ ಹಾಗೂ ಶಾಲಾ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಆರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.</p><p>ಗಾಯಾಳುಗಳನ್ನು ಆದಿತ್ಯ (12 ವರ್ಷ), ಪ್ರೀತಂ ನಿಂಗಣ್ಣ (6 ವರ್ಷ), ಸುಪ್ರೀತ್ (9 ವರ್ಷ), ಸಾಯಿನಾಥ (13), ದಕ್ಷಿತ್ (7 ವರ್ಷ), ವಿಕ್ರಾಂತ (14 ವರ್ಷ) ಎಂದು ಗುರುತಿಸಲಾಗಿದೆ.</p><p>ಆದಿತ್ಯನನ್ನು ನಗರದ ಕಾಮರೆಡ್ಡಿ ಆಸ್ಪತ್ರೆಗೆ, ಪ್ರೀತಂನನ್ನು ಬಿಲ್ವಾ ಆಸ್ಪತ್ರೆಗೆ ಹಾಗೂ ಇನ್ನುಳಿದ ನಾಲ್ವರು ಮಕ್ಕಳನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>‘ಚಂದ್ರಕಾಂತ ಪಾಟೀಲ ಪಬ್ಲಿಕ್ ಶಾಲೆಗೆ ಸೇರಿದ ಶಾಲಾ ವಾಹನ ರಾಮಮಂದಿರ ಕಡೆಯಿಂದ ನಾಗನಹಳ್ಳಿ ರಿಂಗ್ ರಸ್ತೆಯತ್ತ ಬರುತ್ತಿತ್ತು. ವಾಡಿಯಿಂದ ಸಿಮೆಂಟ್ ತುಂಬಿಕೊಂಡು ಹೊರಟ್ಟಿದ್ದ ವೇಳೆ ಅಪಘಾತ ಸಂಭವಿಸಿದೆ’ ಎಂದು ಮೂಲಗಳು ಹೇಳಿವೆ.</p><p>ಅಪಘಾತದಲ್ಲಿ ಶಾಲಾ ವಾಹನದ ಮುಂಭಾಗ ನಜ್ಜುಗುಜ್ಜಾಗಿದ್ದು, ಮುಂದಿನ ಗಾಜು ಒಡೆದಿದೆ. ಈ ಕುರಿತು ಇನ್ನಷ್ಟೇ ಕಲಬುರಗಿ ನಗರ ಸಂಚಾರ ಪೊಲೀಸ್ ಠಾಣೆ–2ರಲ್ಲಿ ಪ್ರಕರಣ ದಾಖಲಾಗಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>