<p><strong>ಸೇಡಂ (ಕಲಬುರಗಿ ಜಿಲ್ಲೆ):</strong> ಎರಡು ಬೈಕ್ಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟ ಘಟನೆ ತಾಲ್ಲೂಕಿನ ತೆಲ್ಕೂರ–ಹಾಬಾಳ ರಸ್ತೆ ಮಾರ್ಗ ಮಧ್ಯದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.</p><p>ತಾಲ್ಲೂಕಿನ ಹಾಬಾಳ (ಟಿ) ಗ್ರಾಮದ ಮಲ್ಲಿಕಾರ್ಜುನ ರೇವಣಸಿದ್ದಪ್ಪ (20), ಸಿದ್ದು ಕಿಶನ್ ಗುಡಿಸಿ (25) ಸ್ಥಳದಲ್ಲಿಯೇ ಮೃತಪಟ್ಟರೆ ಪ್ರಕಾಶ ತಿಪ್ಪಣ್ಣ (19), ಸುರೇಶ ಪುಂಡರೆಡ್ಡಿ (20) ಕಲಬುರಗಿಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಪ್ರಾಥಮಿಕ ಚಿಕಿತ್ಸೆಗಾಗಿ ಸೇಡಂ ಸರ್ಕಾರಿ ಆಸ್ಪತ್ತೆಗೆ ಕರೆದೊಯ್ಯಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬೈಕ್ಳ ಭಾರಿ ವೇಗಕ್ಕೆ ಎರಡು ಬೈಕುಗಳು ನುಜ್ಜುಗುಜ್ಜಾಗಿದ್ದು ರಸ್ತೆಯಿಂದ ದೂರದಲ್ಲಿ ಬಿದ್ದಿವೆ. ಟೈರ್ಗಳು ಬಿಚ್ಚಿ ಬೇರೆಡೆ ಬಿದ್ದಿವೆ.</p><p>ಸ್ಥಳಕ್ಕೆ ಪಿಎಸ್ಐ ಮಂಜುನಾಥರೆಡ್ಡಿ, ಪೊಲೀಸ್ ಕಾನ್ಸ್ಟೆಬಲ್ಗಳಾದ ಹೊನ್ನಪ್ಪ, ನಾಗರಾಜ ಭೇಟಿ ನೀಡಿದ್ದಾರೆ. ಈ ಕುರಿತು ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೇಡಂ (ಕಲಬುರಗಿ ಜಿಲ್ಲೆ):</strong> ಎರಡು ಬೈಕ್ಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟ ಘಟನೆ ತಾಲ್ಲೂಕಿನ ತೆಲ್ಕೂರ–ಹಾಬಾಳ ರಸ್ತೆ ಮಾರ್ಗ ಮಧ್ಯದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.</p><p>ತಾಲ್ಲೂಕಿನ ಹಾಬಾಳ (ಟಿ) ಗ್ರಾಮದ ಮಲ್ಲಿಕಾರ್ಜುನ ರೇವಣಸಿದ್ದಪ್ಪ (20), ಸಿದ್ದು ಕಿಶನ್ ಗುಡಿಸಿ (25) ಸ್ಥಳದಲ್ಲಿಯೇ ಮೃತಪಟ್ಟರೆ ಪ್ರಕಾಶ ತಿಪ್ಪಣ್ಣ (19), ಸುರೇಶ ಪುಂಡರೆಡ್ಡಿ (20) ಕಲಬುರಗಿಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಪ್ರಾಥಮಿಕ ಚಿಕಿತ್ಸೆಗಾಗಿ ಸೇಡಂ ಸರ್ಕಾರಿ ಆಸ್ಪತ್ತೆಗೆ ಕರೆದೊಯ್ಯಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬೈಕ್ಳ ಭಾರಿ ವೇಗಕ್ಕೆ ಎರಡು ಬೈಕುಗಳು ನುಜ್ಜುಗುಜ್ಜಾಗಿದ್ದು ರಸ್ತೆಯಿಂದ ದೂರದಲ್ಲಿ ಬಿದ್ದಿವೆ. ಟೈರ್ಗಳು ಬಿಚ್ಚಿ ಬೇರೆಡೆ ಬಿದ್ದಿವೆ.</p><p>ಸ್ಥಳಕ್ಕೆ ಪಿಎಸ್ಐ ಮಂಜುನಾಥರೆಡ್ಡಿ, ಪೊಲೀಸ್ ಕಾನ್ಸ್ಟೆಬಲ್ಗಳಾದ ಹೊನ್ನಪ್ಪ, ನಾಗರಾಜ ಭೇಟಿ ನೀಡಿದ್ದಾರೆ. ಈ ಕುರಿತು ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>