<p>ಕಲಬುರಗಿ: ‘ಅದ್ವೈತ, ಮಾನವಕುಲಕ್ಕೆ ಏಕತೆಯ ದಾರಿ ತೋರಿಸುವುದರ ಜೊತೆಗೆ ಸಮಾಜದಲ್ಲಿ ಜ್ಞಾನ, ಸಹಿಷ್ಣುತೆ ಮತ್ತು ಸೌಹಾರ್ದ ಬೆಳೆಸುವ ಶಕ್ತಿಯಾಗಿದೆ’ ಎಂದು ಸನಾತನ ಯುವಶಕ್ತಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಗುರುರಾಜ ಕುಲಕರ್ಣಿ ಅಭಿಪ್ರಾಯಪಟ್ಟರು.</p>.<p>ಆದಿ ಶಂಕರಾಚಾರ್ಯರ ಜಯಂತಿ ಪ್ರಯುಕ್ತ ನಗರದ ಜೈ ವೀರ ಹನುಮಾನ ದೇವಸ್ಥಾನದಲ್ಲಿ ಸನಾತನ ಯುವಶಕ್ತಿ ಚಾರಿಟಬಲ್ ಟ್ರಸ್ಟ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ‘ಶಂಕರಾಚಾರ್ಯರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ, ಉತ್ತಮ ಸಮಾಜ ನಿರ್ಮಾಣ ಸಾಧ್ಯ’ ಎಂದರು.</p>.<p>ಈ ವೇಳೆ ಅಪ್ಪನ ಕೆರೆ ಮಧ್ಯದಲ್ಲಿ ಶಂಕರಾಚಾರ್ಯರ ಪ್ರತಿಮೆ ನಿರ್ಮಿಸಬೇಕು ಎಂದು ಶಾಸಕರಿಗೆ ಮನವಿ ಸಲ್ಲಿಸಲಾಯಿತು.</p>.<p>ಶಾಸಕ ಅಲ್ಲಮಪ್ರಭು ಪಾಟೀಲ ಮಾತನಾಡಿ, ‘ಶಂಕರಾಚಾರ್ಯರು ಸಣ್ಣ ವಯಸ್ಸಿನಲ್ಲಿಯೇ ಅಪಾರ ಸಾಧನೆ ಮಾಡಿದ ಮಹಾನುಭಾವರು. ಅವರ ಪ್ರತಿಮೆ ನಿರ್ಮಾಣಕ್ಕೆ ತಮ್ಮಿಂದಾದ ಸಹಕಾರ ನೀಡಲಾಗುವುದು’ ಎಂದು ಭರವಸೆ ನೀಡಿದರು.</p>.<p>ಗೋಪಾಲ ಆಚಾರ್ಯ ಅಕಮಂಚಿ, ಯೋಗೇಶ್ ಭಟ್ ಜೋಶಿ ಮಾತನಾಡಿದರು. ದತ್ತಪ್ಪಯ್ಯ ಸ್ವಾಮಿ, ರಾಮಾಚಾರ್ಯ ಘಂಟಿ, ಪಿ.ವಿ.ಜೋಶಿ, ಮಾಜಿ ಮೇಯರ್ ಯಲ್ಲಪ್ಪ ನಾಯಕೊಡಿ, ಅವಿನಾಶ ಕುಲಕರ್ಣಿ, ಚಂದ್ರಕಾಂತ ಕುಲಕರ್ಣಿ ನಾಗೂರ್, ಅರ್ಚನಾ ಬಿರಾಳ, ಶಿವಕುಮಾರ ತೋಟನಹಳ್ಳಿ ಹಾಗೂ ವಿನೋದ ಹೊಲಗುಂಟಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-34-1381778243</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ‘ಅದ್ವೈತ, ಮಾನವಕುಲಕ್ಕೆ ಏಕತೆಯ ದಾರಿ ತೋರಿಸುವುದರ ಜೊತೆಗೆ ಸಮಾಜದಲ್ಲಿ ಜ್ಞಾನ, ಸಹಿಷ್ಣುತೆ ಮತ್ತು ಸೌಹಾರ್ದ ಬೆಳೆಸುವ ಶಕ್ತಿಯಾಗಿದೆ’ ಎಂದು ಸನಾತನ ಯುವಶಕ್ತಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಗುರುರಾಜ ಕುಲಕರ್ಣಿ ಅಭಿಪ್ರಾಯಪಟ್ಟರು.</p>.<p>ಆದಿ ಶಂಕರಾಚಾರ್ಯರ ಜಯಂತಿ ಪ್ರಯುಕ್ತ ನಗರದ ಜೈ ವೀರ ಹನುಮಾನ ದೇವಸ್ಥಾನದಲ್ಲಿ ಸನಾತನ ಯುವಶಕ್ತಿ ಚಾರಿಟಬಲ್ ಟ್ರಸ್ಟ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ‘ಶಂಕರಾಚಾರ್ಯರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ, ಉತ್ತಮ ಸಮಾಜ ನಿರ್ಮಾಣ ಸಾಧ್ಯ’ ಎಂದರು.</p>.<p>ಈ ವೇಳೆ ಅಪ್ಪನ ಕೆರೆ ಮಧ್ಯದಲ್ಲಿ ಶಂಕರಾಚಾರ್ಯರ ಪ್ರತಿಮೆ ನಿರ್ಮಿಸಬೇಕು ಎಂದು ಶಾಸಕರಿಗೆ ಮನವಿ ಸಲ್ಲಿಸಲಾಯಿತು.</p>.<p>ಶಾಸಕ ಅಲ್ಲಮಪ್ರಭು ಪಾಟೀಲ ಮಾತನಾಡಿ, ‘ಶಂಕರಾಚಾರ್ಯರು ಸಣ್ಣ ವಯಸ್ಸಿನಲ್ಲಿಯೇ ಅಪಾರ ಸಾಧನೆ ಮಾಡಿದ ಮಹಾನುಭಾವರು. ಅವರ ಪ್ರತಿಮೆ ನಿರ್ಮಾಣಕ್ಕೆ ತಮ್ಮಿಂದಾದ ಸಹಕಾರ ನೀಡಲಾಗುವುದು’ ಎಂದು ಭರವಸೆ ನೀಡಿದರು.</p>.<p>ಗೋಪಾಲ ಆಚಾರ್ಯ ಅಕಮಂಚಿ, ಯೋಗೇಶ್ ಭಟ್ ಜೋಶಿ ಮಾತನಾಡಿದರು. ದತ್ತಪ್ಪಯ್ಯ ಸ್ವಾಮಿ, ರಾಮಾಚಾರ್ಯ ಘಂಟಿ, ಪಿ.ವಿ.ಜೋಶಿ, ಮಾಜಿ ಮೇಯರ್ ಯಲ್ಲಪ್ಪ ನಾಯಕೊಡಿ, ಅವಿನಾಶ ಕುಲಕರ್ಣಿ, ಚಂದ್ರಕಾಂತ ಕುಲಕರ್ಣಿ ನಾಗೂರ್, ಅರ್ಚನಾ ಬಿರಾಳ, ಶಿವಕುಮಾರ ತೋಟನಹಳ್ಳಿ ಹಾಗೂ ವಿನೋದ ಹೊಲಗುಂಟಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-34-1381778243</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>