<p><strong>ವಾಡಿ (ಕಲಬುರಗಿ ಜಿಲ್ಲೆ):</strong> ಚಿತ್ತಾಪುರ ತಾಲ್ಲೂಕಿನ ಹಲಕರ್ಟಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಗುರುವಾರ ಸಂಜೆ ಆಟೊ ಹಾಗೂ ಬೂದಿ ಹೊತ್ತ ಟ್ಯಾಂಕರ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂರು ತಿಂಗಳ ಮಗು ಸೇರಿ ಒಂದೇ ಕುಟುಂಬದ ಆರು ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.</p><p>ಮೃತರು ಚಿತ್ತಾಪುರ ತಾಲ್ಲೂಕಿನ ನಾಲವಾರ ಗ್ರಾಮದ ನಿವಾಸಿಗಳಾಗಿದ್ದು, ಆಧಾರ್ ತಿದ್ದುಪಡಿಗಾಗಿ ಚಿತ್ತಾಪುರಕ್ಕೆ ಹೋಗಿ ಮರಳಿ ನಾಲವಾರ ಗ್ರಾಮಕ್ಕೆ ಮರಳುತ್ತಿದ್ದಾಗ ಅಪಘಾತ ಸಂಭವಿಸಿದೆ.</p><p>ಡಿಕ್ಕಿ ಹೊಡೆದ ನಂತರ ಸುಮಾರು 100 ಅಡಿಗೂ ಅಧಿಕ ದೂರದವರೆಗೆ ಲಾರಿಯು ಆಟೊವನ್ನು ಎಳೆದುಕೊಂಡು ಹೋಗಿದ್ದು, ದೇಹಗಳು ಛಿದ್ರಗೊಂಡು ಹೆದ್ದಾರಿ ತುಂಬಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.</p><p>ನಾಜ್ಮೀನ್ ಬೇಗಂ ಮಂಜುರ್ (28), ನಾಜ್ಮೀನ್ ಮಕ್ಕಳಾದ ಫಾತಿಮಾ ಮಂಜುರ್ (12), ಅಬೂಬಕ್ಕರ್ ಮಂಜುರ್ (4), ಬೀಬಿ ಮರಿಯಮ್ ಮಂಜುರ್ ( 3 ತಿಂಗಳು), ನಾಜ್ಮೀನ್ ಮೈದುನ ಮಹ್ಮದ್ ಪಾಷಾ ಮುಸ್ತಾಕ್ (20) ಹಾಗೂ ಆಟೋ ಚಾಲಕ ಬಾಬಾ (35) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.</p><p>10 ವರ್ಷದ ಬಾಲಕ ಮಹ್ಮದ್ ಹುಸೇನ್ ಮಂಜುರ್ ಗಾಯಗೊಂಡಿದ್ದಾನೆ.</p><p>ಮೃತರು ನಾಲವಾರ ಗ್ರಾಮದ ವಾರ್ಡ್ ನಂ.1ರ ಅಕಾನಿ ಮಸೀದಿ ಹತ್ತಿರದ ನಿವಾಸಿಗಳಾಗಿದ್ದಾರೆ.</p><p>ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿಕೊಟ್ಟರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಡಿ (ಕಲಬುರಗಿ ಜಿಲ್ಲೆ):</strong> ಚಿತ್ತಾಪುರ ತಾಲ್ಲೂಕಿನ ಹಲಕರ್ಟಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಗುರುವಾರ ಸಂಜೆ ಆಟೊ ಹಾಗೂ ಬೂದಿ ಹೊತ್ತ ಟ್ಯಾಂಕರ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂರು ತಿಂಗಳ ಮಗು ಸೇರಿ ಒಂದೇ ಕುಟುಂಬದ ಆರು ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.</p><p>ಮೃತರು ಚಿತ್ತಾಪುರ ತಾಲ್ಲೂಕಿನ ನಾಲವಾರ ಗ್ರಾಮದ ನಿವಾಸಿಗಳಾಗಿದ್ದು, ಆಧಾರ್ ತಿದ್ದುಪಡಿಗಾಗಿ ಚಿತ್ತಾಪುರಕ್ಕೆ ಹೋಗಿ ಮರಳಿ ನಾಲವಾರ ಗ್ರಾಮಕ್ಕೆ ಮರಳುತ್ತಿದ್ದಾಗ ಅಪಘಾತ ಸಂಭವಿಸಿದೆ.</p><p>ಡಿಕ್ಕಿ ಹೊಡೆದ ನಂತರ ಸುಮಾರು 100 ಅಡಿಗೂ ಅಧಿಕ ದೂರದವರೆಗೆ ಲಾರಿಯು ಆಟೊವನ್ನು ಎಳೆದುಕೊಂಡು ಹೋಗಿದ್ದು, ದೇಹಗಳು ಛಿದ್ರಗೊಂಡು ಹೆದ್ದಾರಿ ತುಂಬಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.</p><p>ನಾಜ್ಮೀನ್ ಬೇಗಂ ಮಂಜುರ್ (28), ನಾಜ್ಮೀನ್ ಮಕ್ಕಳಾದ ಫಾತಿಮಾ ಮಂಜುರ್ (12), ಅಬೂಬಕ್ಕರ್ ಮಂಜುರ್ (4), ಬೀಬಿ ಮರಿಯಮ್ ಮಂಜುರ್ ( 3 ತಿಂಗಳು), ನಾಜ್ಮೀನ್ ಮೈದುನ ಮಹ್ಮದ್ ಪಾಷಾ ಮುಸ್ತಾಕ್ (20) ಹಾಗೂ ಆಟೋ ಚಾಲಕ ಬಾಬಾ (35) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.</p><p>10 ವರ್ಷದ ಬಾಲಕ ಮಹ್ಮದ್ ಹುಸೇನ್ ಮಂಜುರ್ ಗಾಯಗೊಂಡಿದ್ದಾನೆ.</p><p>ಮೃತರು ನಾಲವಾರ ಗ್ರಾಮದ ವಾರ್ಡ್ ನಂ.1ರ ಅಕಾನಿ ಮಸೀದಿ ಹತ್ತಿರದ ನಿವಾಸಿಗಳಾಗಿದ್ದಾರೆ.</p><p>ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿಕೊಟ್ಟರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>