<p><strong>ಕಲಬುರಗಿ:</strong> ನಗರದ ಜನತೆಗೆ ಒಳ್ಳೆಯ ವಿದ್ಯುತ್ ಸರಬರಾಜು ನೀಡುವುದು ನಮ್ಮ ಗುರಿಯಾಗಿರುವುದರಿಂದ, ವಿದ್ಯುತ್ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳಲು 33 ಕೆವಿಯ 3 ಸಬ್ ಸ್ಟೇಷನ್ಗಳ ನಿರ್ಮಾಣ ಮಾಡುವುದಾಗಿ ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ ಭರವಸೆ ನೀಡಿದರು.</p>.<p>ಕಲಬುರಗಿ ನಗರ ಮತ್ತು ನಗರದ ಆಸು ಪಾಸಿನಲ್ಲಿ ಜೆಸ್ಕಾಂ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಹಾಗೂ ಲಿಂಕ್ ಲೈನ್ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು 3 ಸಬ್ ಸ್ಟೇಷನಗಳ ನಿರ್ಮಾಣಕ್ಕಾಗಿ ಮಹಾನಗರ ಪಾಲಿಕೆಗೆ ಸಂಬಂಧಪಟ್ಟ ಅಥವಾ ಕಂದಾಯ ಭೂಮಿ, ಸ್ಥಳವನ್ನು ಗುರುತಿಸಲು ಜೆಸ್ಕಾಂ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು. </p>.<p>ಇದೇ ಸಂದರ್ಭದಲ್ಲಿ ಕಲಬುರಗಿ ಹೈಕೋರ್ಟ್ ಹಿಂದುಗಡೆ ಇರುವ 110 ಕೆವಿ ಸ್ಟೇಷನ್ ನ ಕಾರ್ಯಾಚರಣೆಯ ಪರಿಶೀಲನೆ ಮತ್ತು ನಗರದ ಹೊರಪ್ರದೇಶದಲ್ಲಿ ನಡೆಯುತ್ತಿರುವ ಸೋಲಾರ್ ಪಾರ್ಕ್ ಕಾಮಗಾರಿಯನ್ನು ವೀಕ್ಷಿಸಿದರು.</p>.<p>ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಬಾಜಪೇಯಿ ಹಾಗೂ ಜೆಸ್ಕಾಂ ಎಂಜಿನಿಯರ್ಗಳು ಈ ಸಂದರ್ಭದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ನಗರದ ಜನತೆಗೆ ಒಳ್ಳೆಯ ವಿದ್ಯುತ್ ಸರಬರಾಜು ನೀಡುವುದು ನಮ್ಮ ಗುರಿಯಾಗಿರುವುದರಿಂದ, ವಿದ್ಯುತ್ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳಲು 33 ಕೆವಿಯ 3 ಸಬ್ ಸ್ಟೇಷನ್ಗಳ ನಿರ್ಮಾಣ ಮಾಡುವುದಾಗಿ ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ ಭರವಸೆ ನೀಡಿದರು.</p>.<p>ಕಲಬುರಗಿ ನಗರ ಮತ್ತು ನಗರದ ಆಸು ಪಾಸಿನಲ್ಲಿ ಜೆಸ್ಕಾಂ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಹಾಗೂ ಲಿಂಕ್ ಲೈನ್ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು 3 ಸಬ್ ಸ್ಟೇಷನಗಳ ನಿರ್ಮಾಣಕ್ಕಾಗಿ ಮಹಾನಗರ ಪಾಲಿಕೆಗೆ ಸಂಬಂಧಪಟ್ಟ ಅಥವಾ ಕಂದಾಯ ಭೂಮಿ, ಸ್ಥಳವನ್ನು ಗುರುತಿಸಲು ಜೆಸ್ಕಾಂ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು. </p>.<p>ಇದೇ ಸಂದರ್ಭದಲ್ಲಿ ಕಲಬುರಗಿ ಹೈಕೋರ್ಟ್ ಹಿಂದುಗಡೆ ಇರುವ 110 ಕೆವಿ ಸ್ಟೇಷನ್ ನ ಕಾರ್ಯಾಚರಣೆಯ ಪರಿಶೀಲನೆ ಮತ್ತು ನಗರದ ಹೊರಪ್ರದೇಶದಲ್ಲಿ ನಡೆಯುತ್ತಿರುವ ಸೋಲಾರ್ ಪಾರ್ಕ್ ಕಾಮಗಾರಿಯನ್ನು ವೀಕ್ಷಿಸಿದರು.</p>.<p>ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಬಾಜಪೇಯಿ ಹಾಗೂ ಜೆಸ್ಕಾಂ ಎಂಜಿನಿಯರ್ಗಳು ಈ ಸಂದರ್ಭದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>