<p>ಕಲಬುರಗಿ: ನಗರದ ಆಳಂದ ಚೆಕ್ಪೋಸ್ಟ್ನಲ್ಲಿ ಸಿಮೆಂಟ್ ಟ್ಯಾಂಕರ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಪಾದಚಾರಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಎಂಎಸ್ಕೆ ಮಿಲ್ ಪ್ರದೇಶದ ನಿವಾಸಿ, ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದ ಖೈರುನ್ಬೀ ಪಟೇಲ್ (53) ಮೃತರು.</p>.<p>ಮಹಿಳೆಯು ಎಂದಿನಂತೆ ಹೋಟೆಲ್ ಕೆಲಸಕ್ಕೆ ಹೋಗುತ್ತಿದ್ದರು. ಈ ವೇಳೆ ಆಳಂದ ಕಡೆಯಿಂದ ಬಂದ ಟ್ಯಾಂಕರ್ ಹುಮಾನಾಬಾದ್ ಕಡೆಗೆ ತಿರುಗುತ್ತಿದ್ದಾಗ ಅವಘಡ ಸಂಭವಿಸಿದೆ.</p>.<p>ಕಲಬುರಗಿ ಸಂಚಾರ ಠಾಣೆ–2ರಲ್ಲಿ ಪ್ರಕರಣ ದಾಖಲಾಗಿದೆ.</p>.<p>ಕಲಬುರಗಿ: ನಗರದ ಸಂತೋಷ ಕಾಲೊನಿಯಲ್ಲಿ ಯುವಕರ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಚಾಕು ಹಾಗೂ ತಲ್ವಾರ್ನಿಂದ ಹೊಡೆದಾಡಿಕೊಂಡಿದ್ದಾರೆ.</p>.<p>ಈ ಕುರಿತು ಎರಡೂ ಗುಂಪಿನವರು ಅಶೋಕನಗರ ಪೊಲೀಸ್ ಠಾಣೆಯಲ್ಲಿ ದೂರು–ಪ್ರತಿದೂರು ದಾಖಲಿಸಿದ್ದಾರೆ.</p>.<p>ಪರ್ವೇಜ್ ನದಾಫ್ ನೀಡಿದ ದೂರಿನನ್ವಯ ಮೂವರ ವಿರುದ್ಧ ಹಾಗೂ ಸುನೀಲ ಶಿರಕೆ ನೀಡಿದ ದೂರಿನನ್ವಯ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-34-131732218</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ನಗರದ ಆಳಂದ ಚೆಕ್ಪೋಸ್ಟ್ನಲ್ಲಿ ಸಿಮೆಂಟ್ ಟ್ಯಾಂಕರ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಪಾದಚಾರಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಎಂಎಸ್ಕೆ ಮಿಲ್ ಪ್ರದೇಶದ ನಿವಾಸಿ, ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದ ಖೈರುನ್ಬೀ ಪಟೇಲ್ (53) ಮೃತರು.</p>.<p>ಮಹಿಳೆಯು ಎಂದಿನಂತೆ ಹೋಟೆಲ್ ಕೆಲಸಕ್ಕೆ ಹೋಗುತ್ತಿದ್ದರು. ಈ ವೇಳೆ ಆಳಂದ ಕಡೆಯಿಂದ ಬಂದ ಟ್ಯಾಂಕರ್ ಹುಮಾನಾಬಾದ್ ಕಡೆಗೆ ತಿರುಗುತ್ತಿದ್ದಾಗ ಅವಘಡ ಸಂಭವಿಸಿದೆ.</p>.<p>ಕಲಬುರಗಿ ಸಂಚಾರ ಠಾಣೆ–2ರಲ್ಲಿ ಪ್ರಕರಣ ದಾಖಲಾಗಿದೆ.</p>.<p>ಕಲಬುರಗಿ: ನಗರದ ಸಂತೋಷ ಕಾಲೊನಿಯಲ್ಲಿ ಯುವಕರ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಚಾಕು ಹಾಗೂ ತಲ್ವಾರ್ನಿಂದ ಹೊಡೆದಾಡಿಕೊಂಡಿದ್ದಾರೆ.</p>.<p>ಈ ಕುರಿತು ಎರಡೂ ಗುಂಪಿನವರು ಅಶೋಕನಗರ ಪೊಲೀಸ್ ಠಾಣೆಯಲ್ಲಿ ದೂರು–ಪ್ರತಿದೂರು ದಾಖಲಿಸಿದ್ದಾರೆ.</p>.<p>ಪರ್ವೇಜ್ ನದಾಫ್ ನೀಡಿದ ದೂರಿನನ್ವಯ ಮೂವರ ವಿರುದ್ಧ ಹಾಗೂ ಸುನೀಲ ಶಿರಕೆ ನೀಡಿದ ದೂರಿನನ್ವಯ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-34-131732218</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>