<p>ಕಲಬುರಗಿ: ‘ಕ್ಷಯರೋಗದ ಕುರಿತು ಸಮಾಜದಲ್ಲಿ ತಪ್ಪು ತಿಳಿವಳಿಕೆ ಇದೆ. ಅದನ್ನು ಹೋಗಲಾಡಿಸಲು ಅರಿವು ಮೂಡಿಸುವುದು ಅಗತ್ಯ’ ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಹೇಳಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕಚೇರಿಯ ಸಂಯುಕ್ತಾಶ್ರಯದಲ್ಲಿ ನಗರದ ಹಳೆಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕ್ಷಯರೋಗ ಗುಣಪಡಿಸಬಹುದಾದ ಕಾಯಿಲೆಯಾಗಿದೆ. ರೋಗಿಯನ್ನು ಮುಟ್ಟಿದ ತಕ್ಷಣ ಇದು ಹರಡುವುದಿಲ್ಲ. ಪೂರ್ವಗ್ರಹಗಳನ್ನು ಬಿಡಬೇಕು. ಚಿಕಿತ್ಸೆ ಪಡೆಯಬೇಕು. ಕನಿಷ್ಠ 6 ತಿಂಗಳು ಪೌಷ್ಟಿಕ ಆಹಾರ ಸೇವಿಸಬೇಕು’ ಎಂದರು.</p>.<p>‘ಜಿಲ್ಲೆಯಲ್ಲಿ ಕಳೆದ 3 ವರ್ಷಗಳಲ್ಲಿ 80 ಗ್ರಾಮ ಪಂಚಾಯಿತಿಗಳು ಟಿಬಿ ಮುಕ್ತವಾಗಿರುವುದು ಶ್ಲಾಘನೀಯ. ಟಿಬಿ ಮುಕ್ತ ವಾರ್ಡ್ ಮಾಡುವ ಕಡೆಗೆ ಗಮನಕೊಡಬೇಕು. ರೋಗಿಗಳನ್ನು ದತ್ತು ಪಡೆದುಕೊಂಡು ಅವರಿಗೆ ಪೌಷ್ಟಿಕ ಆಹಾರ ಒದಗಿಸುತ್ತಿರುವ ದಾನಿಗಳು ಅಭಿನಂದನೆಗೆ ಅರ್ಹರು’ ಎಂದರು.</p>.<p>ಜಿ.ಪಂ ಸಿಇಒ ಭಂವರ್ ಸಿಂಗ್ ಮೀನಾ ಮಾತನಾಡಿ, ‘ಮೂರು ವರ್ಷಗಳಿಂದ ಜಿಲ್ಲೆಯಲ್ಲಿ ಟಿಬಿ ಮುಕ್ತ ಗ್ರಾಮ ಪಂಚಾಯಿತಿಗಳನ್ನು ಘೋಷಣೆ ಮಾಡುತ್ತಿದ್ದೇವೆ. 87,183 ಜನರನ್ನು ಪರೀಕ್ಷೆಗೆ ಒಳಪಡಿಸಿದ್ದೇವೆ’ ಎಂದರು.</p>.<p>‘ಜಿಲ್ಲೆಯ ಕೆಲವೊಂದು ಗ್ರಾಮಗಳನ್ನು ತಲುಪಲಾಗಿಲ್ಲ. ತಾಲ್ಲೂಕು ಆರೋಗ್ಯ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ, ಆ ಗ್ರಾಮಗಳಿಗೆ ತೆರಳಿ ಲಕ್ಷಣಗಳಿರುವ ಜನರನ್ನು ಪರೀಕ್ಷೆಗೆ ಒಳಪಡಿಸಬೇಕು. ರೋಗಿಯ ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೆ ಪೌಷ್ಟಿಕ ಆಹಾರ ಬಹಳ ಮುಖ್ಯ. ಆದ್ದರಿಂದ ಗ್ರಾಮ ಪಂಚಾಯಿತಿಯ ಅನುದಾನದಲ್ಲಿ ಪೌಷ್ಟಿಕ ಆಹಾರ ಒದಗಿಸುವ ಚಿಂತನೆ ಇದೆ’ ಎಂದು ಹೇಳಿದರು.</p>.<p>ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಚಂದ್ರಕಾಂತ ನರಬೋಳಿ ಮಾತನಾಡಿ, ‘ಟಿಬಿ ಸಾಂಕ್ರಾಮಿಕ ರೋಗವಾಗಿದೆ. ಮರಣ ಪ್ರಮಾಣ ಶೇ 10ಕ್ಕೂ ಹೆಚ್ಚು ಇದೆ. ಪರೀಕ್ಷೆ ಹಾಗೂ ಚಿಕಿತ್ಸೆ ಬಹಳ ಮುಖ್ಯ’ ಎಂದರು.</p>.<p>‘ಜಿಲ್ಲೆಯಲ್ಲಿ ಬಡತನ, ವಲಸೆ, ಕೈಗಾರಿಕೆಗಳು, ಸಣ್ಣ ಮನೆಗಳು ಹೆಚ್ಚಿನ ಪ್ರಮಾಣದಲ್ಲಿರುವ ಕಾರಣ ಟಿಬಿ ಪ್ರಕರಣಗಳ ಸಂಖ್ಯೆ ಹೆಚ್ಚಿದೆ. ಖಾಸಗಿ ಆಸ್ಪತ್ರೆಗಳ ಸಹಕಾರದಿಂದ ತಪಾಸಣೆ ಚುರುಕುಗೊಳಿಸಿದ್ದೇವೆ. ರೋಗಿಗಳ ಸಂಪರ್ಕಕ್ಕೆ ಬಂದವರನ್ನೂ ತಪಾಸಣೆಗೆ ಒಳಪಡಿಸುತ್ತಿದ್ದೇವೆ’ ಎಂದು ತಿಳಿಸಿದರು.</p>.<p>ಈ ವರ್ಷ ಕ್ಷಯ ಮುಕ್ತವಾಗಿರುವ 43 ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು, ಉತ್ತಮ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರಿಗೆ ಪ್ರಮಾಣಪತ್ರ ನೀಡಿ ಸನ್ಮಾನಿಸಲಾಯಿತು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶರಣಬಸಪ್ಪ ಕ್ಯಾತನಾಳ ಅಧ್ಯಕ್ಷತೆ ವಹಿಸಿದ್ದರು.</p>.<p>ಆರೋಗ್ಯ ಮತ್ತು ಕುಟುಂಬ ಸೇವೆಗಳ ವಿಭಾಗೀಯ ಜಂಟಿ ನಿರ್ದೇಶಕರ ಕಚೇರಿಯ ಸಹ ನಿರ್ದೇಶಕ ಡಾ.ಶಂಕ್ರಪ್ಪ ಮೈಲಾರಿ, ಉಪನಿರ್ದೇಶಕರಾದ ಡಾ.ಎ.ಎಸ್. ರುದ್ರವಾಡಿ ಮತ್ತು ಡಾ.ಶರಣಬಸಪ್ಪ ಗಣಜಲಖೇಡ, ಡಾ.ರುಖಯಾ ಅಸ್ನ ರಬಾ ಹಾಗೂ ಇ.ಎಸ್.ಐ.ಸಿಯ ಕ್ಷಯರೋಗ ನೋಡಲ್ ಅಧಿಕಾರಿ ಡಾ.ಲಾವಣ್ಯ ಪೀಟರ್ ಹಾಜರಿದ್ದರು.</p>.<p>ಜಾಥಾ: ನಗರದ ಜಿಲ್ಲಾಸ್ಪತ್ರೆಯಿಂದ ಹಳೆಯ ಜಿಲ್ಲಾ ಪಂಚಾಯಿತಿ ಸಭಾಂಗಣದವರೆಗೂ ಜಾಥಾ ನಡೆಯಿತು. ಬೆಳಿಗ್ಗೆ 9ಕ್ಕೆ ಜಿಲ್ಲಾಸ್ಪತ್ರೆ ಬಳಿ ಜಾಥಾಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ಚಾಲನೆ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-34-1102524681</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ‘ಕ್ಷಯರೋಗದ ಕುರಿತು ಸಮಾಜದಲ್ಲಿ ತಪ್ಪು ತಿಳಿವಳಿಕೆ ಇದೆ. ಅದನ್ನು ಹೋಗಲಾಡಿಸಲು ಅರಿವು ಮೂಡಿಸುವುದು ಅಗತ್ಯ’ ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಹೇಳಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕಚೇರಿಯ ಸಂಯುಕ್ತಾಶ್ರಯದಲ್ಲಿ ನಗರದ ಹಳೆಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕ್ಷಯರೋಗ ಗುಣಪಡಿಸಬಹುದಾದ ಕಾಯಿಲೆಯಾಗಿದೆ. ರೋಗಿಯನ್ನು ಮುಟ್ಟಿದ ತಕ್ಷಣ ಇದು ಹರಡುವುದಿಲ್ಲ. ಪೂರ್ವಗ್ರಹಗಳನ್ನು ಬಿಡಬೇಕು. ಚಿಕಿತ್ಸೆ ಪಡೆಯಬೇಕು. ಕನಿಷ್ಠ 6 ತಿಂಗಳು ಪೌಷ್ಟಿಕ ಆಹಾರ ಸೇವಿಸಬೇಕು’ ಎಂದರು.</p>.<p>‘ಜಿಲ್ಲೆಯಲ್ಲಿ ಕಳೆದ 3 ವರ್ಷಗಳಲ್ಲಿ 80 ಗ್ರಾಮ ಪಂಚಾಯಿತಿಗಳು ಟಿಬಿ ಮುಕ್ತವಾಗಿರುವುದು ಶ್ಲಾಘನೀಯ. ಟಿಬಿ ಮುಕ್ತ ವಾರ್ಡ್ ಮಾಡುವ ಕಡೆಗೆ ಗಮನಕೊಡಬೇಕು. ರೋಗಿಗಳನ್ನು ದತ್ತು ಪಡೆದುಕೊಂಡು ಅವರಿಗೆ ಪೌಷ್ಟಿಕ ಆಹಾರ ಒದಗಿಸುತ್ತಿರುವ ದಾನಿಗಳು ಅಭಿನಂದನೆಗೆ ಅರ್ಹರು’ ಎಂದರು.</p>.<p>ಜಿ.ಪಂ ಸಿಇಒ ಭಂವರ್ ಸಿಂಗ್ ಮೀನಾ ಮಾತನಾಡಿ, ‘ಮೂರು ವರ್ಷಗಳಿಂದ ಜಿಲ್ಲೆಯಲ್ಲಿ ಟಿಬಿ ಮುಕ್ತ ಗ್ರಾಮ ಪಂಚಾಯಿತಿಗಳನ್ನು ಘೋಷಣೆ ಮಾಡುತ್ತಿದ್ದೇವೆ. 87,183 ಜನರನ್ನು ಪರೀಕ್ಷೆಗೆ ಒಳಪಡಿಸಿದ್ದೇವೆ’ ಎಂದರು.</p>.<p>‘ಜಿಲ್ಲೆಯ ಕೆಲವೊಂದು ಗ್ರಾಮಗಳನ್ನು ತಲುಪಲಾಗಿಲ್ಲ. ತಾಲ್ಲೂಕು ಆರೋಗ್ಯ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ, ಆ ಗ್ರಾಮಗಳಿಗೆ ತೆರಳಿ ಲಕ್ಷಣಗಳಿರುವ ಜನರನ್ನು ಪರೀಕ್ಷೆಗೆ ಒಳಪಡಿಸಬೇಕು. ರೋಗಿಯ ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೆ ಪೌಷ್ಟಿಕ ಆಹಾರ ಬಹಳ ಮುಖ್ಯ. ಆದ್ದರಿಂದ ಗ್ರಾಮ ಪಂಚಾಯಿತಿಯ ಅನುದಾನದಲ್ಲಿ ಪೌಷ್ಟಿಕ ಆಹಾರ ಒದಗಿಸುವ ಚಿಂತನೆ ಇದೆ’ ಎಂದು ಹೇಳಿದರು.</p>.<p>ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಚಂದ್ರಕಾಂತ ನರಬೋಳಿ ಮಾತನಾಡಿ, ‘ಟಿಬಿ ಸಾಂಕ್ರಾಮಿಕ ರೋಗವಾಗಿದೆ. ಮರಣ ಪ್ರಮಾಣ ಶೇ 10ಕ್ಕೂ ಹೆಚ್ಚು ಇದೆ. ಪರೀಕ್ಷೆ ಹಾಗೂ ಚಿಕಿತ್ಸೆ ಬಹಳ ಮುಖ್ಯ’ ಎಂದರು.</p>.<p>‘ಜಿಲ್ಲೆಯಲ್ಲಿ ಬಡತನ, ವಲಸೆ, ಕೈಗಾರಿಕೆಗಳು, ಸಣ್ಣ ಮನೆಗಳು ಹೆಚ್ಚಿನ ಪ್ರಮಾಣದಲ್ಲಿರುವ ಕಾರಣ ಟಿಬಿ ಪ್ರಕರಣಗಳ ಸಂಖ್ಯೆ ಹೆಚ್ಚಿದೆ. ಖಾಸಗಿ ಆಸ್ಪತ್ರೆಗಳ ಸಹಕಾರದಿಂದ ತಪಾಸಣೆ ಚುರುಕುಗೊಳಿಸಿದ್ದೇವೆ. ರೋಗಿಗಳ ಸಂಪರ್ಕಕ್ಕೆ ಬಂದವರನ್ನೂ ತಪಾಸಣೆಗೆ ಒಳಪಡಿಸುತ್ತಿದ್ದೇವೆ’ ಎಂದು ತಿಳಿಸಿದರು.</p>.<p>ಈ ವರ್ಷ ಕ್ಷಯ ಮುಕ್ತವಾಗಿರುವ 43 ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು, ಉತ್ತಮ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರಿಗೆ ಪ್ರಮಾಣಪತ್ರ ನೀಡಿ ಸನ್ಮಾನಿಸಲಾಯಿತು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶರಣಬಸಪ್ಪ ಕ್ಯಾತನಾಳ ಅಧ್ಯಕ್ಷತೆ ವಹಿಸಿದ್ದರು.</p>.<p>ಆರೋಗ್ಯ ಮತ್ತು ಕುಟುಂಬ ಸೇವೆಗಳ ವಿಭಾಗೀಯ ಜಂಟಿ ನಿರ್ದೇಶಕರ ಕಚೇರಿಯ ಸಹ ನಿರ್ದೇಶಕ ಡಾ.ಶಂಕ್ರಪ್ಪ ಮೈಲಾರಿ, ಉಪನಿರ್ದೇಶಕರಾದ ಡಾ.ಎ.ಎಸ್. ರುದ್ರವಾಡಿ ಮತ್ತು ಡಾ.ಶರಣಬಸಪ್ಪ ಗಣಜಲಖೇಡ, ಡಾ.ರುಖಯಾ ಅಸ್ನ ರಬಾ ಹಾಗೂ ಇ.ಎಸ್.ಐ.ಸಿಯ ಕ್ಷಯರೋಗ ನೋಡಲ್ ಅಧಿಕಾರಿ ಡಾ.ಲಾವಣ್ಯ ಪೀಟರ್ ಹಾಜರಿದ್ದರು.</p>.<p>ಜಾಥಾ: ನಗರದ ಜಿಲ್ಲಾಸ್ಪತ್ರೆಯಿಂದ ಹಳೆಯ ಜಿಲ್ಲಾ ಪಂಚಾಯಿತಿ ಸಭಾಂಗಣದವರೆಗೂ ಜಾಥಾ ನಡೆಯಿತು. ಬೆಳಿಗ್ಗೆ 9ಕ್ಕೆ ಜಿಲ್ಲಾಸ್ಪತ್ರೆ ಬಳಿ ಜಾಥಾಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ಚಾಲನೆ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-34-1102524681</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>