<p>ಕಲಬುರಗಿ: ನಗರದ ನೆಹರೂ ಗಂಜ್ ಪ್ರದೇಶದ ದರ್ಬಾರ್ ಹೋಟೆಲ್ ಎದುರಿನ ಬ್ಯಾಂಕ್ ಕಾಲೊನಿ ರಸ್ತೆಯ ಎಸ್.ಆರ್.ಕೆ ಕಲ್ಯಾಣ ಮಂಟಪದಲ್ಲಿ ಏಪ್ರಿಲ್ 9 ಹಾಗೂ 10ರಂದು ಟೆಕ್ನಿಕಲ್ ಕ್ಲಿನಿಕ್ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.</p>.<p>ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದಿಂದ ಆಯೋಜಿಸಿರುವ ಈ ಕಾರ್ಯಾಗಾರವು ಏಪ್ರಿಲ್ 9ರಂದು ಮಧ್ಯಾಹ್ನ 2ರಿಂದ ಸಂಜೆ 6 ಗಂಟೆ ವರೆಗೆ ಹಾಗೂ ಏಪ್ರಿಲ್ 10ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿದೆ.</p>.<p>ನಗರದ ಕಪನೂರು ಕೈಗಾರಿಕಾ ವಸಾಹತು ಪ್ರದೇಶದ 3ನೇ ಹಂತದಲ್ಲಿ ಆಟೊ ಪಾರ್ಕ್ ಸ್ಥಾಪನೆಗೆ ಸುಮಾರು 20 ಎಕರೆ ಭೂಮಿ ಕಾಯ್ದಿರಿಸಲಾಗಿದೆ. ಆಟೊ ನಗರ ಸ್ಥಾಪನೆ ಸಂಬಂಧ ವಿವಿಧ ವಿಷಯಗಳ ಕುರಿತು ಈ ಕಾರ್ಯಾಗಾರದಲ್ಲಿ ಸಮಗ್ರವಾಗಿ ಅರಿವು ಮೂಡಿಸಲಾಗುವುದು. ಜಿಲ್ಲೆಯ ಆಟೊ ಮೊಬೈಲ್ ಸೇವೆ ನೀಡುವ ಮಾಲೀಕರು, ಕಾರ್ಮಿಕರು ಭಾಗವಹಿಸಬೇಕು’ ಎಂದು ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಅಬ್ದುಲ್ ಅಜೀಮ್ ಅವರುಕೋರಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-34-410496366</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ನಗರದ ನೆಹರೂ ಗಂಜ್ ಪ್ರದೇಶದ ದರ್ಬಾರ್ ಹೋಟೆಲ್ ಎದುರಿನ ಬ್ಯಾಂಕ್ ಕಾಲೊನಿ ರಸ್ತೆಯ ಎಸ್.ಆರ್.ಕೆ ಕಲ್ಯಾಣ ಮಂಟಪದಲ್ಲಿ ಏಪ್ರಿಲ್ 9 ಹಾಗೂ 10ರಂದು ಟೆಕ್ನಿಕಲ್ ಕ್ಲಿನಿಕ್ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.</p>.<p>ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದಿಂದ ಆಯೋಜಿಸಿರುವ ಈ ಕಾರ್ಯಾಗಾರವು ಏಪ್ರಿಲ್ 9ರಂದು ಮಧ್ಯಾಹ್ನ 2ರಿಂದ ಸಂಜೆ 6 ಗಂಟೆ ವರೆಗೆ ಹಾಗೂ ಏಪ್ರಿಲ್ 10ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿದೆ.</p>.<p>ನಗರದ ಕಪನೂರು ಕೈಗಾರಿಕಾ ವಸಾಹತು ಪ್ರದೇಶದ 3ನೇ ಹಂತದಲ್ಲಿ ಆಟೊ ಪಾರ್ಕ್ ಸ್ಥಾಪನೆಗೆ ಸುಮಾರು 20 ಎಕರೆ ಭೂಮಿ ಕಾಯ್ದಿರಿಸಲಾಗಿದೆ. ಆಟೊ ನಗರ ಸ್ಥಾಪನೆ ಸಂಬಂಧ ವಿವಿಧ ವಿಷಯಗಳ ಕುರಿತು ಈ ಕಾರ್ಯಾಗಾರದಲ್ಲಿ ಸಮಗ್ರವಾಗಿ ಅರಿವು ಮೂಡಿಸಲಾಗುವುದು. ಜಿಲ್ಲೆಯ ಆಟೊ ಮೊಬೈಲ್ ಸೇವೆ ನೀಡುವ ಮಾಲೀಕರು, ಕಾರ್ಮಿಕರು ಭಾಗವಹಿಸಬೇಕು’ ಎಂದು ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಅಬ್ದುಲ್ ಅಜೀಮ್ ಅವರುಕೋರಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-34-410496366</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>