ಈ ವೇಳೆ ಮಾತನಾಡಿದ ಸಂಸದ ಜಾಧವ, ‘ಕಲಬುರಗಿಯಿಂದ ನೇರವಾಗಿ ಬೆಂಗಳೂರಿಗೆ ರೈಲು ಸೇವೆ ಕಲ್ಪಿಸಬೇಕೆಂಬ ದಶಕಗಳ ಬೇಡಿಕೆ ಈಡೇರಿಸಲಾಗಿದೆ. ಮಾರ್ಚ್ 12ರಿಂದ ಕಲಬುರಗಿ– ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲು ಸೇವೆ ಆರಂಭವಾಗಲಿದೆ. ಕಲಬುರಗಿಯಿಂದ ಬೆಳಿಗ್ಗೆ 5.15ಕ್ಕೆ ಹೊರಟು ಮಧ್ಯಾಹ್ನ 2ಕ್ಕೆ ಬೆಂಗಳೂರು ತಲುಪಲಿದೆ. ಬೆಂಗಳೂರಿನಿಂದ ಮಧ್ಯಾಹ್ನ 2.40ಕ್ಕೆ ಹೊರಟು ರಾತ್ರಿ 11.30ಕ್ಕೆ ಕಲಬುರಗಿ ಮುಟ್ಟಲಿದೆ. ರಾಯಚೂರು, ಮಂತ್ರಾಲಯಂ ರೋಡ್, ಗುಂತಕಲ್, ಅನಂತಪುರ ಮತ್ತು ಯಲಹಂಕ ನಡುವೆ ನಿಲುಗಡೆಯಾಗಲಿದೆ. ವಾರದಲ್ಲಿ ಆರು ದಿನ ಓಡಾಡಲಿದೆ’ ಎಂದರು.