<p><strong>ಕಲಬುರಗಿ</strong>: ಜಿಲ್ಲೆಯ ಚಿತ್ತಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ದಿಗ್ಗಾಂವ್ ಗ್ರಾಮದಿಂದ ಬೆನಕನಹಳ್ಳಿ ಕಡೆಗೆ ಹೋಗುವ ರಸ್ತೆಯ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುವ ವೇಳೆ ಸಿಕ್ಕಿಬಿದ್ದಿದ್ದ ಪೊಲೀಸರಿಬ್ಬರನ್ನು ಕಲಬುರಗಿ ಪೊಲೀಸ್ ಕಮಿಷನರ್ ಶರಣಪ್ಪ<br>ಎಸ್.ಡಿ. ಇಲಾಖಾ ವಿಚಾರಣೆ ಬಾಕಿ ಇರಿಸಿ ಗುರುವಾರ<br>ಅಮಾನತುಗೊಳಿಸಿದ್ದಾರೆ.</p><p>ಕಲಬುರಗಿ ನಗರದ ಎಂ.ಬಿ. ನಗರ ಪೊಲೀಸ್ ಠಾಣೆಯ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಗುರುನಾಥ ಹಾಗೂ ನಗರದ ಸಶಸ್ತ್ರ ಮೀಸಲು ಘಟಕದ ಕಾನ್ಸ್ಟೆಬಲ್ ಮಡಿವಾಳಪ್ಪ ಅಮಾನತುಗೊಂಡವರು.</p><p>ಇವರು ಫೆಬ್ರುವರಿ 17ರಂದು ಇಸ್ಪೀಟ್ ಜೂಜಾಟದ ವೇಳೆಗೆ ಚಿತ್ತಾಪುರ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದರು. ಈ ಕುರಿತು ಜಿಲ್ಲಾ ಎಸ್ಪಿ ಅಡ್ಡೂರು ಶ್ರೀನಿವಾಸುಲು ಅವರ ವರದಿಯ ಅನ್ವಯ ಪೊಲೀಸ್ ಕಮಿಷನರ್ ಈ ಕ್ರಮ ಜರುಗಿಸಿದ್ದಾರೆ.</p>
<p><strong>ಕಲಬುರಗಿ</strong>: ಜಿಲ್ಲೆಯ ಚಿತ್ತಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ದಿಗ್ಗಾಂವ್ ಗ್ರಾಮದಿಂದ ಬೆನಕನಹಳ್ಳಿ ಕಡೆಗೆ ಹೋಗುವ ರಸ್ತೆಯ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುವ ವೇಳೆ ಸಿಕ್ಕಿಬಿದ್ದಿದ್ದ ಪೊಲೀಸರಿಬ್ಬರನ್ನು ಕಲಬುರಗಿ ಪೊಲೀಸ್ ಕಮಿಷನರ್ ಶರಣಪ್ಪ<br>ಎಸ್.ಡಿ. ಇಲಾಖಾ ವಿಚಾರಣೆ ಬಾಕಿ ಇರಿಸಿ ಗುರುವಾರ<br>ಅಮಾನತುಗೊಳಿಸಿದ್ದಾರೆ.</p><p>ಕಲಬುರಗಿ ನಗರದ ಎಂ.ಬಿ. ನಗರ ಪೊಲೀಸ್ ಠಾಣೆಯ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಗುರುನಾಥ ಹಾಗೂ ನಗರದ ಸಶಸ್ತ್ರ ಮೀಸಲು ಘಟಕದ ಕಾನ್ಸ್ಟೆಬಲ್ ಮಡಿವಾಳಪ್ಪ ಅಮಾನತುಗೊಂಡವರು.</p><p>ಇವರು ಫೆಬ್ರುವರಿ 17ರಂದು ಇಸ್ಪೀಟ್ ಜೂಜಾಟದ ವೇಳೆಗೆ ಚಿತ್ತಾಪುರ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದರು. ಈ ಕುರಿತು ಜಿಲ್ಲಾ ಎಸ್ಪಿ ಅಡ್ಡೂರು ಶ್ರೀನಿವಾಸುಲು ಅವರ ವರದಿಯ ಅನ್ವಯ ಪೊಲೀಸ್ ಕಮಿಷನರ್ ಈ ಕ್ರಮ ಜರುಗಿಸಿದ್ದಾರೆ.</p>