<p><strong>ಕಲಬುರಗಿ:</strong> ಹತ್ತಾರು ವರ್ಷಗಳಿಂದ ಗುಲಬರ್ಗಾ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ನೌಕರರನ್ನು ಏಜೆನ್ಸಿಯ ಟೆಂಡರ್ ಅವಧಿ ಮುಗಿದಿದೆ ಎಂಬ ಕಾರಣಕ್ಕೆ ಸೇವೆಯಿಂದ ಬಿಡುಗಡೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಧ್ಯಪ್ರವೇಶ ಮಾಡಿ ನ್ಯಾಯ ಕೊಡಿಸಬೇಕು ಎಂದು ಗುತ್ತಿಗೆ ನೌಕರರು ಶಾಸಕ ಬಸವರಾಜ ಮತ್ತಿಮಡು ಅವರನ್ನು ಆಗ್ರಹಿಸಿದರು.</p>.<p>ಸೇವೆಯಿಂದ ವಜಾಗೊಂಡ ಬೆನ್ನಲ್ಲೇ ಶಾಸಕರನ್ನು ಭೇಟಿ ಮಾಡಿದ ನೌಕರರು, ‘ಇದೇ ನೌಕರಿಯನ್ನು ನಂಬಿಕೊಂಡು ಜೀವನವನ್ನು ಕಟ್ಟಿಕೊಂಡಿದ್ದು, ಸೇವೆಯಿಂದ ತೆಗೆದು ಹಾಕಿದರೆ ಜೀವನ ನಡೆಸುವುದು ಕಷ್ಟವಾಗಲಿದೆ. ಆದ್ದರಿಂದ ವಿಶ್ವವಿದ್ಯಾಲಯವೇ ವಿಶೇಷ ಪ್ರಕರಣ ಎಂದು ಪರಿಗಣಿಸಿ ತನ್ನ ಸಂಪನ್ಮೂಲದಿಂದ ನೇರ ವೇತನ ಪಾವತಿ ಮಾಡಬೇಕು. ಅಲ್ಲದೇ, ಸೇವೆಯಿಂದ ಬಿಡುಗಡೆಗೊಳಿಸುವ ಆದೇಶವನ್ನು ಹಿಂದಕ್ಕೆ ಪಡೆಯಬೇಕು. ಯಾವುದೇ ಏಜೆನ್ಸಿ ಬಂದರೂ ಸೇವಾ ಹಿರಿತನವನ್ನು ಪರಿಗಣಿಸಿ ನಮ್ಮನ್ನೇ ಸೇರಿಸಿಕೊಳ್ಳುವಂತೆ ಕ್ರಮ ಕೈಗೊಳ್ಳಬೇಕು’ ಎಂದರು.</p>.<p>ಗುತ್ತಿಗೆ ನೌಕರರ ಬೇಡಿಕೆಗಳನ್ನು ಆಲಿಸಿದ ಶಾಸಕ ಬಸವರಾಜ ಮತ್ತಿಮಡು ಅವರು ಈ ವಿಚಾರವನ್ನು ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ಭೇಟಿ ಮಾಡಿ ಸೇವೆಯಿಂದ ಬಿಡುಗಡೆ ಮಾಡಿದ ಆದೇಶವನ್ನು ಹಿಂದಕ್ಕೆ ಪಡೆಯುವಂತೆ ಕುಲಪತಿ, ಕುಲಸಚಿವರಿಗೆ ನಿರ್ದೇಶಿಸಲು ಕೋರಿಕೊಳ್ಳುತ್ತೇನೆ ಎಂದು ಭರವಸೆ ನೀಡಿದರು.</p>.<p>ಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳಾದ ವಿಜಯ ಕೆಂಗಲ್, ಚಂದ್ರಶಾ, ನಾಗರಾಜ ಟೆಂಗಳಿ, ಅಂಬುಜಾ ಕದಂ, ಸವಿತಾ ಮಹೇಶ್ವರಿ ಇತರರು ಈ ಸಂದರ್ಭದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಹತ್ತಾರು ವರ್ಷಗಳಿಂದ ಗುಲಬರ್ಗಾ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ನೌಕರರನ್ನು ಏಜೆನ್ಸಿಯ ಟೆಂಡರ್ ಅವಧಿ ಮುಗಿದಿದೆ ಎಂಬ ಕಾರಣಕ್ಕೆ ಸೇವೆಯಿಂದ ಬಿಡುಗಡೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಧ್ಯಪ್ರವೇಶ ಮಾಡಿ ನ್ಯಾಯ ಕೊಡಿಸಬೇಕು ಎಂದು ಗುತ್ತಿಗೆ ನೌಕರರು ಶಾಸಕ ಬಸವರಾಜ ಮತ್ತಿಮಡು ಅವರನ್ನು ಆಗ್ರಹಿಸಿದರು.</p>.<p>ಸೇವೆಯಿಂದ ವಜಾಗೊಂಡ ಬೆನ್ನಲ್ಲೇ ಶಾಸಕರನ್ನು ಭೇಟಿ ಮಾಡಿದ ನೌಕರರು, ‘ಇದೇ ನೌಕರಿಯನ್ನು ನಂಬಿಕೊಂಡು ಜೀವನವನ್ನು ಕಟ್ಟಿಕೊಂಡಿದ್ದು, ಸೇವೆಯಿಂದ ತೆಗೆದು ಹಾಕಿದರೆ ಜೀವನ ನಡೆಸುವುದು ಕಷ್ಟವಾಗಲಿದೆ. ಆದ್ದರಿಂದ ವಿಶ್ವವಿದ್ಯಾಲಯವೇ ವಿಶೇಷ ಪ್ರಕರಣ ಎಂದು ಪರಿಗಣಿಸಿ ತನ್ನ ಸಂಪನ್ಮೂಲದಿಂದ ನೇರ ವೇತನ ಪಾವತಿ ಮಾಡಬೇಕು. ಅಲ್ಲದೇ, ಸೇವೆಯಿಂದ ಬಿಡುಗಡೆಗೊಳಿಸುವ ಆದೇಶವನ್ನು ಹಿಂದಕ್ಕೆ ಪಡೆಯಬೇಕು. ಯಾವುದೇ ಏಜೆನ್ಸಿ ಬಂದರೂ ಸೇವಾ ಹಿರಿತನವನ್ನು ಪರಿಗಣಿಸಿ ನಮ್ಮನ್ನೇ ಸೇರಿಸಿಕೊಳ್ಳುವಂತೆ ಕ್ರಮ ಕೈಗೊಳ್ಳಬೇಕು’ ಎಂದರು.</p>.<p>ಗುತ್ತಿಗೆ ನೌಕರರ ಬೇಡಿಕೆಗಳನ್ನು ಆಲಿಸಿದ ಶಾಸಕ ಬಸವರಾಜ ಮತ್ತಿಮಡು ಅವರು ಈ ವಿಚಾರವನ್ನು ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ಭೇಟಿ ಮಾಡಿ ಸೇವೆಯಿಂದ ಬಿಡುಗಡೆ ಮಾಡಿದ ಆದೇಶವನ್ನು ಹಿಂದಕ್ಕೆ ಪಡೆಯುವಂತೆ ಕುಲಪತಿ, ಕುಲಸಚಿವರಿಗೆ ನಿರ್ದೇಶಿಸಲು ಕೋರಿಕೊಳ್ಳುತ್ತೇನೆ ಎಂದು ಭರವಸೆ ನೀಡಿದರು.</p>.<p>ಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳಾದ ವಿಜಯ ಕೆಂಗಲ್, ಚಂದ್ರಶಾ, ನಾಗರಾಜ ಟೆಂಗಳಿ, ಅಂಬುಜಾ ಕದಂ, ಸವಿತಾ ಮಹೇಶ್ವರಿ ಇತರರು ಈ ಸಂದರ್ಭದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>