ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಗ್ಗಿದ ನೀರು: ಮಳಖೇಡ ಸೇತುವೆ ಪ್ರಯಾಣಕ್ಕೆ ಮುಕ್ತ

Last Updated 19 ಸೆಪ್ಟೆಂಬರ್ 2020, 6:43 IST
ಅಕ್ಷರ ಗಾತ್ರ

ಸೇಡಂ (ಕಲಬುರ್ಗಿ ಜಿಲ್ಲೆ): ಭಾರಿ ಮಳೆ ಹಾಗೂ ಕಾಗಿಣಾ ನದಿ ನೀರಿನ ಹರಿವು ಹೆಚ್ಚಿದ ಪರಿಣಾಮ ಕಳೆದ ನಾಲ್ಕು ದಿನಗಳಿಂದ ಸ್ಥಗಿತಗೊಂಡಿದ್ದ ಕಲಬುರ್ಗಿ–ಸೇಡಂ ಸಂಪರ್ಕ ಸೇತುವೆ ಮೇಲೆ ಹರಿಯುತ್ತಿದ್ದ ನೀರು ತಗ್ಗಿದ್ದರಿಂದ ಶನಿವಾರ ಬೆಳಿಗ್ಗೆ ಪುನರಾರಂಭಗೊಂಡಿದೆ.

ರಾಜ್ಯ ಹೆದ್ದಾರಿ ಕಲಬುರ್ಗಿ–ರಿಬ್ಬನಪಲ್ಲಿ ಮಧ್ಯದ ಮಳಖೇಡ (ರಾಷ್ಟ್ರಕೂಟರ ರಾಜಧಾನಿಯಾಗಿದ್ದ ಪಟ್ಟಣ) ಸೇತುವೆ ನಾಲ್ಕು ದಿನಗಳ ಕಾಲ ತುಂಬಿ ಹರಿದಿತ್ತು. ಇದರಿಂದಾಗಿ ಸೇಡಂ–ಕಲಬುರ್ಗಿ ನೇರ ಸಂಪರ್ಕ ಕಡಿತಗೊಂಡು ಪ್ರಯಾಣಿಕರು ತೊಂದರೆ ಅನುಭವಿಸಿದ್ದರು. ಕಾಗಿಣಾ ನದಿ ನೀರಿನ ಹರಿವು ಇಳಿಮುಖವಾಗಿದ್ದರಿಂದ ಸಂಚಾರ ಆರಂಭಗೊಂಡಿದೆ. ಇದರಿಂದಾಗಿ ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಗಿದೆ.

ಸೇತುವೆಯಿಂದ ಮೂರ್ನಾಲ್ಕು ಅಡಿ ನೀರು ಕೆಳಗಡೆ ಹರಿಯುತ್ತಿರುವುದರಿಂದ ಪ್ರಯಾಣಿಕರು ನಿರ್ಭಯದಿಂದ ತೆರಳುತ್ತಿದ್ದಾರೆ. ನಾಲ್ಕು ದಿನಗಳಿಂದ ರಸ್ತೆ ಪಕ್ಕದಲ್ಲೇ ಬಿಡಾರ ಹೂಡಿದ್ದ ಗುಜರಾತ್ ಹಾಗೂ ಮಹಾರಾಷ್ಟ್ರದಿಂದ ಸರಕು ಸಾಗಾಣಿಕೆ ಲಾರಿಗಳು ಸೇತುವೆ ದಾಟಿ ತೆಲಂಗಾಣದ ಮೂಲಕ ಚೆನ್ನೈನತ್ತ ತೆರಳಿದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT