<p><strong>ಕಲಬುರಗಿ:</strong> ‘ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಆಂದೋಲಾ ಗ್ರಾಮದಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗಿದ್ದು, ಜಿಲ್ಲಾಡಳಿತ 5 ದಿನಗಳಲ್ಲಿ ಪರಿಹಾರ ಒದಗಿಸದಿದ್ದರೆ ಬೀದರ್–ಬೆಂಗಳೂರು ಹೆದ್ದಾರಿಯಲ್ಲಿ ಹೋರಾಟ ನಡೆಸಲಾಗುವುದು’ ಎಂದು ಶಿವಸೇನಾ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಎಚ್ಚರಿಸಿದರು.</p>.<p>‘ಆಂದೋಲಾದಲ್ಲಿ ಸುಮಾರು 10 ಸಾವಿರ ಜನಸಂಖ್ಯೆ ಇದೆ. ಗ್ರಾಮದಲ್ಲಿ ಹಲವು ವರ್ಷಗಳಿಂದ ನೀರಿನ ಸಮಸ್ಯೆ ಇದೆ. 25 ದಿನಕ್ಕೊಮ್ಮೆ ನಲ್ಲಿಯಲ್ಲಿ ನೀರು ಬರುತ್ತದೆ. ಪಿಡಿಒ 15 ದಿನಕ್ಕೊಮ್ಮೆ ಪಂಚಾಯಿತಿಗೆ ಬರುತ್ತಾರೆ. ಹಿಂದಿನ ಪಿಡಿಒ ರಾಜಶೇಖರ ನೆಲೋಗಿ ₹12 ಲಕ್ಷ ಲೂಟಿ ಮಾಡಿದ್ದು, ವಸೂಲಿಗಾಗಿ ಆದೇಶ ಮಾಡಿ ವರ್ಷ ಕಳೆದರೂ ಹಣ ಪಾವತಿಸಿಲ್ಲ. ಪಂಚಾಯತ್ ರಾಜ್ ಸಚಿವರು ಇತ್ತ ಗಮನ ಹರಿಸಬೇಕು’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>‘ಜೆಜೆಎಂ ಕಾಮಗಾರಿ ಮುಗಿದು 2 ವರ್ಷ ಕಳೆದರೂ ಭೀಮಾ ನದಿಯಿಂದ ನೀರು ಸರಬರಾಜು ಆಗುತ್ತಿಲ್ಲ. ಕಳೆದ ಡಿಸೆಂಬರ್ನಲ್ಲಿ ಗ್ರಾಮಸ್ಥರು ಮತ್ತು ನಾವು ಜೀವರ್ಗಿ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿದಾಗ 15 ದಿನಗಳಲ್ಲಿ ನೀರು ಸರಬರಾಜು ಮಾಡುವುದಾಗಿ ಅಧಿಕಾರಿಗಳು ಹೇಳಿದ್ದರು. 5 ತಿಂಗಳಾದರೂ ನೀರಿಲ್ಲ. ಕೇಳಿದರೆ ಫಂಡ್ ಇಲ್ಲ ಎನ್ನುತ್ತಾರೆ’ ಎಂದು ದೂರಿದರು.</p>.<p>‘ಶಾಸಕ ಅಜಯ್ಸಿಂಗ್ ಅವರು ಗ್ರಾಮದ ಮೂಲಸೌಕರ್ಯಗಳ ಬಗ್ಗೆ ಲಕ್ಷ್ಯವಹಿಸುತ್ತಿಲ್ಲ. ಕೆಲ್ಲೂರ–ಆಂದೋಲಾ ರಸ್ತೆ ಹಾಳಾಗಿ 5 ವರ್ಷಗಳಾಗಿದೆ. ಶಾಸಕರು ಜನರ ಜೀವದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ. ಕಳೆದ 30ರಂದು ಕಾಂಗ್ರೆಸ್ ಮುಖಂಡರೊಬ್ಬರು ಅಕ್ರಮವಾಗಿ ಮುರುಮ್ ಸಾಗಿಸುತ್ತಿದ್ದ ವಾಹನವನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದರೆ, ಅವರು ಯಾವುದೇ ಕ್ರಮ ಜರುಗಿಸದೆ ಬಿಟ್ಟು ಕಳಿಸಿದ್ದಾರೆ’ ಎಂದು ಆರೋಪಿಸಿದರು.</p>.<p>‘ಪಶ್ಚಿಮ ಬಂಗಾಳದಲ್ಲಿರುವ ಬಾಂಗ್ಲಾ ದೇಶದ ನುಸುಳುಕೋರರು ಬಂಗಾಳ ತೊರೆದು ಕಾಂಗ್ರೆಸ್ ಸರ್ಕಾರ ಇರುವ ಕರ್ನಾಟಕ, ತೆಲಂಗಾಣ, ಕೇರಳಕ್ಕೆ ಬರುತ್ತಿದ್ದಾರೆನ್ನುವ ವಿಷಯ ಹರಿದಾಡುತ್ತಿದೆ. ಪೊಲೀಸ್ ಇಲಾಖೆ ರೈಲು ನಿಲ್ದಾಣಗಳಲ್ಲಿ ತಪಾಸಣೆ ಕೇಂದ್ರಗಳನ್ನು ತೆರೆದು ವಾಪಸ್ ಕಳಿಸಬೇಕು’ ಎಂದು ಆಗ್ರಹಿಸಿದರು.</p>.<p>ಶಿವಸೇನಾ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಗುರುಶಾಂತ ಟೆಂಗಳಿ, ಶಿವರಾಜ ಬಾಳಿ, ಮಲ್ಕಣ್ಣ ಹಿರೇಪೂಜಾರಿ, ರಾಕೇಶ್ ಜಮಾದರ, ರೋಹಿತ್ ಪಿಸ್ಕೆ, ಪ್ರಭಾಕರ ವಿಶ್ವಕರ್ಮ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-34-2076554745</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ‘ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಆಂದೋಲಾ ಗ್ರಾಮದಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗಿದ್ದು, ಜಿಲ್ಲಾಡಳಿತ 5 ದಿನಗಳಲ್ಲಿ ಪರಿಹಾರ ಒದಗಿಸದಿದ್ದರೆ ಬೀದರ್–ಬೆಂಗಳೂರು ಹೆದ್ದಾರಿಯಲ್ಲಿ ಹೋರಾಟ ನಡೆಸಲಾಗುವುದು’ ಎಂದು ಶಿವಸೇನಾ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಎಚ್ಚರಿಸಿದರು.</p>.<p>‘ಆಂದೋಲಾದಲ್ಲಿ ಸುಮಾರು 10 ಸಾವಿರ ಜನಸಂಖ್ಯೆ ಇದೆ. ಗ್ರಾಮದಲ್ಲಿ ಹಲವು ವರ್ಷಗಳಿಂದ ನೀರಿನ ಸಮಸ್ಯೆ ಇದೆ. 25 ದಿನಕ್ಕೊಮ್ಮೆ ನಲ್ಲಿಯಲ್ಲಿ ನೀರು ಬರುತ್ತದೆ. ಪಿಡಿಒ 15 ದಿನಕ್ಕೊಮ್ಮೆ ಪಂಚಾಯಿತಿಗೆ ಬರುತ್ತಾರೆ. ಹಿಂದಿನ ಪಿಡಿಒ ರಾಜಶೇಖರ ನೆಲೋಗಿ ₹12 ಲಕ್ಷ ಲೂಟಿ ಮಾಡಿದ್ದು, ವಸೂಲಿಗಾಗಿ ಆದೇಶ ಮಾಡಿ ವರ್ಷ ಕಳೆದರೂ ಹಣ ಪಾವತಿಸಿಲ್ಲ. ಪಂಚಾಯತ್ ರಾಜ್ ಸಚಿವರು ಇತ್ತ ಗಮನ ಹರಿಸಬೇಕು’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>‘ಜೆಜೆಎಂ ಕಾಮಗಾರಿ ಮುಗಿದು 2 ವರ್ಷ ಕಳೆದರೂ ಭೀಮಾ ನದಿಯಿಂದ ನೀರು ಸರಬರಾಜು ಆಗುತ್ತಿಲ್ಲ. ಕಳೆದ ಡಿಸೆಂಬರ್ನಲ್ಲಿ ಗ್ರಾಮಸ್ಥರು ಮತ್ತು ನಾವು ಜೀವರ್ಗಿ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿದಾಗ 15 ದಿನಗಳಲ್ಲಿ ನೀರು ಸರಬರಾಜು ಮಾಡುವುದಾಗಿ ಅಧಿಕಾರಿಗಳು ಹೇಳಿದ್ದರು. 5 ತಿಂಗಳಾದರೂ ನೀರಿಲ್ಲ. ಕೇಳಿದರೆ ಫಂಡ್ ಇಲ್ಲ ಎನ್ನುತ್ತಾರೆ’ ಎಂದು ದೂರಿದರು.</p>.<p>‘ಶಾಸಕ ಅಜಯ್ಸಿಂಗ್ ಅವರು ಗ್ರಾಮದ ಮೂಲಸೌಕರ್ಯಗಳ ಬಗ್ಗೆ ಲಕ್ಷ್ಯವಹಿಸುತ್ತಿಲ್ಲ. ಕೆಲ್ಲೂರ–ಆಂದೋಲಾ ರಸ್ತೆ ಹಾಳಾಗಿ 5 ವರ್ಷಗಳಾಗಿದೆ. ಶಾಸಕರು ಜನರ ಜೀವದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ. ಕಳೆದ 30ರಂದು ಕಾಂಗ್ರೆಸ್ ಮುಖಂಡರೊಬ್ಬರು ಅಕ್ರಮವಾಗಿ ಮುರುಮ್ ಸಾಗಿಸುತ್ತಿದ್ದ ವಾಹನವನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದರೆ, ಅವರು ಯಾವುದೇ ಕ್ರಮ ಜರುಗಿಸದೆ ಬಿಟ್ಟು ಕಳಿಸಿದ್ದಾರೆ’ ಎಂದು ಆರೋಪಿಸಿದರು.</p>.<p>‘ಪಶ್ಚಿಮ ಬಂಗಾಳದಲ್ಲಿರುವ ಬಾಂಗ್ಲಾ ದೇಶದ ನುಸುಳುಕೋರರು ಬಂಗಾಳ ತೊರೆದು ಕಾಂಗ್ರೆಸ್ ಸರ್ಕಾರ ಇರುವ ಕರ್ನಾಟಕ, ತೆಲಂಗಾಣ, ಕೇರಳಕ್ಕೆ ಬರುತ್ತಿದ್ದಾರೆನ್ನುವ ವಿಷಯ ಹರಿದಾಡುತ್ತಿದೆ. ಪೊಲೀಸ್ ಇಲಾಖೆ ರೈಲು ನಿಲ್ದಾಣಗಳಲ್ಲಿ ತಪಾಸಣೆ ಕೇಂದ್ರಗಳನ್ನು ತೆರೆದು ವಾಪಸ್ ಕಳಿಸಬೇಕು’ ಎಂದು ಆಗ್ರಹಿಸಿದರು.</p>.<p>ಶಿವಸೇನಾ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಗುರುಶಾಂತ ಟೆಂಗಳಿ, ಶಿವರಾಜ ಬಾಳಿ, ಮಲ್ಕಣ್ಣ ಹಿರೇಪೂಜಾರಿ, ರಾಕೇಶ್ ಜಮಾದರ, ರೋಹಿತ್ ಪಿಸ್ಕೆ, ಪ್ರಭಾಕರ ವಿಶ್ವಕರ್ಮ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-34-2076554745</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>