<p><strong>ಕಲಬುರಗಿ:</strong> ‘ಮಹಿಳಾ ಬಂದಿಗಳಿಗೆ ಕರಕುಶಲ, ಕೌಶಲಾಧಾರಿತ ತರಬೇತಿ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅವರ ಮನ ಪರಿವರ್ತನೆ ಮಾಡಲು ಪ್ರಯತ್ನಿಸಲಾಗುತ್ತಿದೆ’ ಎಂದು ಜಿಲ್ಲಾ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಕೆ.ಸುರೇಶ ತಿಳಿಸಿದರು.</p>.<p>ಕೇಂದ್ರ ಕಾರಾಗೃಹ ಹಾಗೂ ಕಡಗಂಚಿಯ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ನ ಸಹಯೋಗದಲ್ಲಿ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ‘ಬಂದಿಗಳು ಈ ಕಾರ್ಯಕ್ರಮದ ಸದುಪಯೋಗ ಪಡೆಯಬೇಕು’ ಎಂದರು.</p>.<p>ಫಾದರ್ ಮ್ಯಾಕ್ಸಿಮ್ ಮಾತನಾಡಿ, ‘ಕಾರಾಗೃಹದ ಬಂದಿಗಳಿಗೆ ಮನ ಪರಿವರ್ತನೆಗಾಗಿ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ತಾವೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾನಸಿಕ, ದೈಹಿಕವಾಗಿ ಸದೃಢರಾಗಿ ಇಲ್ಲಿಂದ ಬಿಡುಗಡೆಯಾಗಿ ತಮ್ಮ ಕುಟುಂಬದೊಂದಿಗೆ ಒಳ್ಳೆಯ ಜೀವನ ನಡೆಸಬೇಕು’ ಎಂದರು.</p>.<p>ವಿವಿಧ ಆಟೋಟಗಳಲ್ಲಿ ವಿಜೇತರಾದ ಬಂದಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಮಹಿಳಾ ಬಂದಿ ವಿಭಾಗಕ್ಕೆ ವಾಟರ್ ಕೂಲರ್ ದೇಣಿಗೆಯಾಗಿ ನೀಡಲಾಯಿತು.</p>.<p>ಕಾರಾಗೃಹದ ಅಧೀಕ್ಷಕ ರಾಕೇಶ ಕಾಂಬಳೆ, ಸಹಾಯಕ ಅಧೀಕ್ಷಕ ಸುರೇಶ ಬಿ., ಚನ್ನಪ್ಪ, ಟ್ರಸ್ಟ್ ಕಾರ್ಯದರ್ಶಿ ಫಾದರ್ ವಿಲಿಯಂ ಮಿರಂಡಾ, ಬ್ರದರ್ ಫ್ಲೇಮಿಂಗ್, ಜೀಜಾ, ಅನಿತಾ, ಜೈಲರ್ಗಳಾದ ಸಾಗರ್ ಪಾಟೀಲ, ಶ್ರೀಮಂತಗೌಡ ಪಾಟೀಲ ಉಪಸ್ಥಿತರಿದ್ದರು.</p>.<p>ಕಾರಾಗೃಹದ ಶಿಕ್ಷಕ ನಾಗರಾಜ ಮೂಲಗೆ ಸ್ವಾಗತಿಸಿದರು. ಸಿಸ್ಟರ್ ಡೈನಾ ನಿರೂಪಿಸಿದರು. ಸಿಸ್ಟರ್ ವಸಂತಾ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260319-34-140906649</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ‘ಮಹಿಳಾ ಬಂದಿಗಳಿಗೆ ಕರಕುಶಲ, ಕೌಶಲಾಧಾರಿತ ತರಬೇತಿ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅವರ ಮನ ಪರಿವರ್ತನೆ ಮಾಡಲು ಪ್ರಯತ್ನಿಸಲಾಗುತ್ತಿದೆ’ ಎಂದು ಜಿಲ್ಲಾ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಕೆ.ಸುರೇಶ ತಿಳಿಸಿದರು.</p>.<p>ಕೇಂದ್ರ ಕಾರಾಗೃಹ ಹಾಗೂ ಕಡಗಂಚಿಯ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ನ ಸಹಯೋಗದಲ್ಲಿ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ‘ಬಂದಿಗಳು ಈ ಕಾರ್ಯಕ್ರಮದ ಸದುಪಯೋಗ ಪಡೆಯಬೇಕು’ ಎಂದರು.</p>.<p>ಫಾದರ್ ಮ್ಯಾಕ್ಸಿಮ್ ಮಾತನಾಡಿ, ‘ಕಾರಾಗೃಹದ ಬಂದಿಗಳಿಗೆ ಮನ ಪರಿವರ್ತನೆಗಾಗಿ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ತಾವೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾನಸಿಕ, ದೈಹಿಕವಾಗಿ ಸದೃಢರಾಗಿ ಇಲ್ಲಿಂದ ಬಿಡುಗಡೆಯಾಗಿ ತಮ್ಮ ಕುಟುಂಬದೊಂದಿಗೆ ಒಳ್ಳೆಯ ಜೀವನ ನಡೆಸಬೇಕು’ ಎಂದರು.</p>.<p>ವಿವಿಧ ಆಟೋಟಗಳಲ್ಲಿ ವಿಜೇತರಾದ ಬಂದಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಮಹಿಳಾ ಬಂದಿ ವಿಭಾಗಕ್ಕೆ ವಾಟರ್ ಕೂಲರ್ ದೇಣಿಗೆಯಾಗಿ ನೀಡಲಾಯಿತು.</p>.<p>ಕಾರಾಗೃಹದ ಅಧೀಕ್ಷಕ ರಾಕೇಶ ಕಾಂಬಳೆ, ಸಹಾಯಕ ಅಧೀಕ್ಷಕ ಸುರೇಶ ಬಿ., ಚನ್ನಪ್ಪ, ಟ್ರಸ್ಟ್ ಕಾರ್ಯದರ್ಶಿ ಫಾದರ್ ವಿಲಿಯಂ ಮಿರಂಡಾ, ಬ್ರದರ್ ಫ್ಲೇಮಿಂಗ್, ಜೀಜಾ, ಅನಿತಾ, ಜೈಲರ್ಗಳಾದ ಸಾಗರ್ ಪಾಟೀಲ, ಶ್ರೀಮಂತಗೌಡ ಪಾಟೀಲ ಉಪಸ್ಥಿತರಿದ್ದರು.</p>.<p>ಕಾರಾಗೃಹದ ಶಿಕ್ಷಕ ನಾಗರಾಜ ಮೂಲಗೆ ಸ್ವಾಗತಿಸಿದರು. ಸಿಸ್ಟರ್ ಡೈನಾ ನಿರೂಪಿಸಿದರು. ಸಿಸ್ಟರ್ ವಸಂತಾ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260319-34-140906649</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>