ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿ: ಚಂದ್ರಂಪಳ್ಳಿ ಜಲಾಶಯದಲ್ಲಿ ಯುವಕ ಕಣ್ಮರೆ

Last Updated 17 ಡಿಸೆಂಬರ್ 2020, 14:14 IST
ಅಕ್ಷರ ಗಾತ್ರ

ಚಿಂಚೋಳಿ (ಕಲಬುರ್ಗಿ ಜಿಲ್ಲೆ): ತಾಲ್ಲೂಕಿನ ಚಂದ್ರಂಪಳ್ಳಿ ಜಲಾಶಯದಲ್ಲಿ ಈಜಾಡಲು ತೆರಳಿದ್ದ ಹೈದರಾಬಾದ್‌ನ ಸಯ್ಯದ್ ಅಹ್ಮದ್ (17) ಎಂಬ ಯುವಕಕಣ್ಮರೆಯಾಗಿದ್ದಾನೆ.

8 ಜನರು ಮದುವೆ ಸಮಾರಂಭವೊಂದರಲ್ಲಿ ಪಾಲ್ಗೊಳ್ಳಲು ಹೈದರಾಬಾದ್‌ನಿಂದ ಬಂದಿದ್ದರು. ಜಲಾಶಯ ವೀಕ್ಷಿಸಲು ಸಂಜೆ 5ಕ್ಕೆ ಬಂದಿದ್ದಾರೆ. ಈ ಸಂದರ್ಭದಲ್ಲಿ ಈಜಾಡಲು ಜಲಾಶಯಕ್ಕೆ ಇಳಿದಿದ್ದ ಮೂವರ ಪೈಕಿ ಇಬ್ಬರು ಈಜಿಕೊಂಡು ದಡ ಸೇರಿದ್ದು, ಸಯ್ಯದ್ ಅಹ್ಮದ್ ನೀರಿನಲ್ಲಿ ಕಣ್ಮರೆಯಾಗಿದ್ದಾನೆ.

ಅಗ್ನಿ ಶಾಮಕ ಠಾಣೆಯ ಅಧಿಕಾರಿ ಸೂರ್ಯಕಾಂತ ಬಿರಾದಾರ ನೇತೃತ್ವದಲ್ಲಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಸ್ಥಳೀಯರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT