ಚಿಂಚೋಳಿ (ಕಲಬುರ್ಗಿ ಜಿಲ್ಲೆ): ತಾಲ್ಲೂಕಿನ ಚಂದ್ರಂಪಳ್ಳಿ ಜಲಾಶಯದಲ್ಲಿ ಈಜಾಡಲು ತೆರಳಿದ್ದ ಹೈದರಾಬಾದ್ನ ಸಯ್ಯದ್ ಅಹ್ಮದ್ (17) ಎಂಬ ಯುವಕಕಣ್ಮರೆಯಾಗಿದ್ದಾನೆ.
8 ಜನರು ಮದುವೆ ಸಮಾರಂಭವೊಂದರಲ್ಲಿ ಪಾಲ್ಗೊಳ್ಳಲು ಹೈದರಾಬಾದ್ನಿಂದ ಬಂದಿದ್ದರು. ಜಲಾಶಯ ವೀಕ್ಷಿಸಲು ಸಂಜೆ 5ಕ್ಕೆ ಬಂದಿದ್ದಾರೆ. ಈ ಸಂದರ್ಭದಲ್ಲಿ ಈಜಾಡಲು ಜಲಾಶಯಕ್ಕೆ ಇಳಿದಿದ್ದ ಮೂವರ ಪೈಕಿ ಇಬ್ಬರು ಈಜಿಕೊಂಡು ದಡ ಸೇರಿದ್ದು, ಸಯ್ಯದ್ ಅಹ್ಮದ್ ನೀರಿನಲ್ಲಿ ಕಣ್ಮರೆಯಾಗಿದ್ದಾನೆ.
ಅಗ್ನಿ ಶಾಮಕ ಠಾಣೆಯ ಅಧಿಕಾರಿ ಸೂರ್ಯಕಾಂತ ಬಿರಾದಾರ ನೇತೃತ್ವದಲ್ಲಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಸ್ಥಳೀಯರು ತಿಳಿಸಿದರು.