ಗ್ರಾಮದ ಬಾಬು ಅವರ ಸರ್ವೆ ನಂ. 49:1ರ ತೋಟದಲ್ಲಿ ಬೆಳೆದಿದ್ದ ಅಡಿಕೆ ಫಸಲಿಗೆ ಮೆಕ್ಕೆಜೋಳದ ಗರಿಯಿಂದ ಬೆಂಕಿ ತಗುಲಿದೆ. ಹೊನ್ನಾಳಿಯಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು.ಬೆಂಕಿ ಆಕಸ್ಮಿಕದಿಂದ ಸುಮಾರು ₹ 25 ಲಕ್ಷ ನಷ್ಟವಾಗಿದೆ ಎಂದು ಅಂದಾಜು ಮಾಡಲಾಗಿದೆ ಎಂದು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದ ಸವಳಂಗ ಗ್ರಾಮ ಲೆಕ್ಕಾಧಿಕಾರಿ ಬಸವರಾಜಪ್ಪ ಮಾಹಿತಿ ನೀಡಿದರು.