ಮೈನುದ್ದೀನ್ ಅವರಿಂದ ಲಂಚದ ಹಣ ಪಡೆದ ಸಂತೋಷ್ ಬಳಿಕ ಶ್ರೀಧರ್ ಅವರಿಗೆ ಕರೆ ಮಾಡಿ ಹಣ ತಲುಪಿದ್ದಾಗಿ ತಿಳಿಸಿದರು. ಆ ಹಣವನ್ನು ಘಾಟಗೆ ಲೇಔಟ್ನಲ್ಲಿರುವ ತಮ್ಮ ಮನೆಗೆ ತರುವಂತೆ ಸೂಚನೆ ನೀಡಿದ್ದಾರೆ. ಸಂತೋಷ್ ಮನೆಗೆ ತೆರಳುತ್ತಿದ್ದಂತೆಯೇ ಅವರನ್ನು ಹಿಂಬಾಲಿಸಿದ ಎಸಿಬಿ ಎಸ್ಪಿ ವಿ.ಎಂ. ಜ್ಯೋತಿ ನೇತೃತ್ವದ ಅಧಿಕಾರಿಗಳ ತಂಡವು, ಹಣ ಪಡೆಯುವ ಸಂದರ್ಭದಲ್ಲಿ ದಾಳಿ ನಡೆಸಿ ಶ್ರೀಧರ್ ಹಾಗೂ ಸಂತೋಷ್ ಅವರನ್ನು ವಶಕ್ಕೆ ಪಡೆದಿದೆ.