‘ರಸಪ್ರಶ್ನೆ, ಕಾಗುಣಿತ ಉಕ್ತಲೇಖನ (ಡಿಕ್ಟೇಷನ್), ಉಲ್ಲೇಖಗಳನ್ನು ಬರೆಯುವುದು, ಪ್ರಬಂಧ, ಆಶುಭಾಷಣ ಹಾಗೂ ಚರ್ಚಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಜ.28ರ ಒಳಗಾಗಿ ಹೆಸರು ನೋಂದಾಯಿಸಲು ತಿಳಿಸಲಾಗಿತ್ತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ಸಂಬಂಧಿಸಿದ ಸಂಘಟನೆಗಳವರನ್ನು ಸಂಪರ್ಕಿಸಿದರೂ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಯಾರೂ ಮುಂದೆ ಬಂದಿಲ್ಲ’ ಎಂದು ಸಮ್ಮೇಳನದ ಕೋಶಾಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಶರತ್ ಬಿ. ‘ಪ್ರಜಾವಾಣಿ’ಗೆ ತಿಳಿಸಿದರು.