<p><strong>ಕಲಬುರಗಿ</strong>: ಮಸೀದಿಗಳಲ್ಲಿ ಹೆಚ್ಚಿಗೆ ಶಬ್ದ ಬರುವ ಮೈಕ್ ಬಳಸಿ ಆಜಾನ್ ಮಾಡುವುದಕ್ಕೆ ಪ್ರತಿಯಾಗಿ ಹನುಮಾನ್ ಮಂದಿರದ ಬಳಿ ಭಜನೆ ಮಾಡಿಕೊಂಡು ಹೊರಟಿದ್ದ ಶ್ರೀರಾಮ ಸೇನೆಯ ಕಾರ್ಯಕರ್ತರನ್ನು ಪೊಲೀಸರು ಇಲ್ಲಿನ ಜಗತ್ ವೃತ್ತದಲ್ಲಿ ವಶಕ್ಕೆ ಪಡೆದರು.</p>.<p>ಮತ್ತೊಂದೆಡೆ ಸೂಪರ್ ಮಾರ್ಕೆಟ್ ಬಳಿ ಇರುವ ಮಸೀದಿಗೆ ದಲಿತ ಸೇನೆ ಕಾರ್ಯಕರ್ತರು ಕಾವಲಾಗಿದ್ದಾರೆ.</p>.<p>ಶ್ರೀರಾಮ ಸೇನೆ ಕಾರ್ಯಕರ್ತರು ಬರುವ ಬಗ್ಗೆ ಮಾಹಿತಿ ಪಡೆದಿದ್ದ ಪೊಲೀಸರು ಸಾಕಷ್ಟು ಸಂಖ್ಯೆಯಲ್ಲಿ ಜಮಾಯಿಸಿದ್ದರು.</p>.<p>ಭಜನೆ ಶುರು ಮಾಡುತ್ತಿದ್ದಂತೆಯೇ ಪೊಲೀಸರು ವಶಕ್ಕೆ ಪಡೆದರು. ಸೂಪರ್ ಮಾರ್ಕೆಟ್ ನಲ್ಲಿರುವ ಹನುಮಾನ್ ಮಂದಿರದ ಬಳಿ ಬ್ಯಾರಿಕೇಡ್ ಹಾಕಲಾಗಿದೆ.</p>.<p>ಕೋಮು ಗಲಭೆ ಎಬ್ಬಿಸುವ ಉದ್ದೇಶದಿಂದಲೇ ಶ್ರೀರಾಮಸೇನೆ ಉದ್ದೇಶಪೂರ್ವಕವಾಗಿ ಇಂತಹ ವಿವಾದ ಸೃಷ್ಟಿಸಲು ಮುಂದಾಗಿದೆ. ಆದ್ದರಿಂದ ಶ್ರೀರಾಮ ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಆಂದೋಲಾ ಸಿದ್ದಲಿಂಗ ಸ್ವಾಮೀಜಿ ಅವರನ್ನು ಬಂಧಿಸಬೇಕು ಎಂದು ದಲಿತ ಸೇನೆಯ ಅಧ್ಯಕ್ಷ ಹಣಮಂತ ಯಳಸಂಗಿ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಮಸೀದಿಗಳಲ್ಲಿ ಹೆಚ್ಚಿಗೆ ಶಬ್ದ ಬರುವ ಮೈಕ್ ಬಳಸಿ ಆಜಾನ್ ಮಾಡುವುದಕ್ಕೆ ಪ್ರತಿಯಾಗಿ ಹನುಮಾನ್ ಮಂದಿರದ ಬಳಿ ಭಜನೆ ಮಾಡಿಕೊಂಡು ಹೊರಟಿದ್ದ ಶ್ರೀರಾಮ ಸೇನೆಯ ಕಾರ್ಯಕರ್ತರನ್ನು ಪೊಲೀಸರು ಇಲ್ಲಿನ ಜಗತ್ ವೃತ್ತದಲ್ಲಿ ವಶಕ್ಕೆ ಪಡೆದರು.</p>.<p>ಮತ್ತೊಂದೆಡೆ ಸೂಪರ್ ಮಾರ್ಕೆಟ್ ಬಳಿ ಇರುವ ಮಸೀದಿಗೆ ದಲಿತ ಸೇನೆ ಕಾರ್ಯಕರ್ತರು ಕಾವಲಾಗಿದ್ದಾರೆ.</p>.<p>ಶ್ರೀರಾಮ ಸೇನೆ ಕಾರ್ಯಕರ್ತರು ಬರುವ ಬಗ್ಗೆ ಮಾಹಿತಿ ಪಡೆದಿದ್ದ ಪೊಲೀಸರು ಸಾಕಷ್ಟು ಸಂಖ್ಯೆಯಲ್ಲಿ ಜಮಾಯಿಸಿದ್ದರು.</p>.<p>ಭಜನೆ ಶುರು ಮಾಡುತ್ತಿದ್ದಂತೆಯೇ ಪೊಲೀಸರು ವಶಕ್ಕೆ ಪಡೆದರು. ಸೂಪರ್ ಮಾರ್ಕೆಟ್ ನಲ್ಲಿರುವ ಹನುಮಾನ್ ಮಂದಿರದ ಬಳಿ ಬ್ಯಾರಿಕೇಡ್ ಹಾಕಲಾಗಿದೆ.</p>.<p>ಕೋಮು ಗಲಭೆ ಎಬ್ಬಿಸುವ ಉದ್ದೇಶದಿಂದಲೇ ಶ್ರೀರಾಮಸೇನೆ ಉದ್ದೇಶಪೂರ್ವಕವಾಗಿ ಇಂತಹ ವಿವಾದ ಸೃಷ್ಟಿಸಲು ಮುಂದಾಗಿದೆ. ಆದ್ದರಿಂದ ಶ್ರೀರಾಮ ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಆಂದೋಲಾ ಸಿದ್ದಲಿಂಗ ಸ್ವಾಮೀಜಿ ಅವರನ್ನು ಬಂಧಿಸಬೇಕು ಎಂದು ದಲಿತ ಸೇನೆಯ ಅಧ್ಯಕ್ಷ ಹಣಮಂತ ಯಳಸಂಗಿ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>