<p><strong>ಕಲಬುರ್ಗಿ</strong>: ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮಹಾಗಾಂವ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಸಭೆ ನಡೆಸಿದರು.</p>.<p>ಸದಸ್ಯರು, ಕೃಷಿಕರೊಂದಿಗೆ ಸಂವಾದ ನಡೆಸಿದ ಅವರು, ಕೇಂದ್ರ ಸರ್ಕಾರ ಕೃಷಿ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ದೃಷ್ಟಿಕೋನವನ್ನು ಇಟ್ಟುಕೊಂಡು ಕೃಷಿ ಮೂಲಸೌಕರ್ಯ ನಿಧಿಯ ಅಡಿಯಲ್ಲಿ ₹ 1 ಲಕ್ಷ ಕೋಟಿ ಅನುದಾನವನ್ನು ಮೀಸಲಿಟ್ಟಿದೆ. ಇದರ ಉಪಯೋಗವನ್ನು ಎಲ್ಲ ಕೃಷಿಕರು ಪಡೆಯುವಂತೆ ಸಲಹೆ ನೀಡಿದರು.</p>.<p>ಕಲಬುರ್ಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ ಈ ಸಂದರ್ಭದಲ್ಲಿದ್ದರು.</p>.<p>ಕಾರ್ಯಕ್ರಮ ನಿಮಿತ್ತ ಬೀದರ್ ಗೆ ತೆರಳಿದ್ದ ಅವರು ಕಲಬುರ್ಗಿಗೆ ವಾಪಸಾಗುವ ಮಾರ್ಗಮಧ್ಯದಲ್ಲಿ ಮಹಾಗಾಂವಕ್ಕೆ ಭೇಟಿ ನೀಡಿದ್ದರು.</p>.<p>ಬೆಳಿಗ್ಗೆ ನಗರದ ಹೈದರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಸಂವಾದ ನಡೆಸಬೇಕಿತ್ತು. ಆದರೆ, ಸಮಯದ ಅಭಾವದಿಂದ ಸಂವಾದ ರದ್ದುಗೊಳಿಸಿ ಬೀದರ್ ಗೆ ತೆರಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ</strong>: ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮಹಾಗಾಂವ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಸಭೆ ನಡೆಸಿದರು.</p>.<p>ಸದಸ್ಯರು, ಕೃಷಿಕರೊಂದಿಗೆ ಸಂವಾದ ನಡೆಸಿದ ಅವರು, ಕೇಂದ್ರ ಸರ್ಕಾರ ಕೃಷಿ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ದೃಷ್ಟಿಕೋನವನ್ನು ಇಟ್ಟುಕೊಂಡು ಕೃಷಿ ಮೂಲಸೌಕರ್ಯ ನಿಧಿಯ ಅಡಿಯಲ್ಲಿ ₹ 1 ಲಕ್ಷ ಕೋಟಿ ಅನುದಾನವನ್ನು ಮೀಸಲಿಟ್ಟಿದೆ. ಇದರ ಉಪಯೋಗವನ್ನು ಎಲ್ಲ ಕೃಷಿಕರು ಪಡೆಯುವಂತೆ ಸಲಹೆ ನೀಡಿದರು.</p>.<p>ಕಲಬುರ್ಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ ಈ ಸಂದರ್ಭದಲ್ಲಿದ್ದರು.</p>.<p>ಕಾರ್ಯಕ್ರಮ ನಿಮಿತ್ತ ಬೀದರ್ ಗೆ ತೆರಳಿದ್ದ ಅವರು ಕಲಬುರ್ಗಿಗೆ ವಾಪಸಾಗುವ ಮಾರ್ಗಮಧ್ಯದಲ್ಲಿ ಮಹಾಗಾಂವಕ್ಕೆ ಭೇಟಿ ನೀಡಿದ್ದರು.</p>.<p>ಬೆಳಿಗ್ಗೆ ನಗರದ ಹೈದರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಸಂವಾದ ನಡೆಸಬೇಕಿತ್ತು. ಆದರೆ, ಸಮಯದ ಅಭಾವದಿಂದ ಸಂವಾದ ರದ್ದುಗೊಳಿಸಿ ಬೀದರ್ ಗೆ ತೆರಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>