<p><strong>ಕಮಲಾಪುರ</strong>: ಆಳಂದ ತಾಲ್ಲೂಕಿನ ಕಮಲಾನಗರ ಗ್ರಾಮದಲ್ಲಿ ಪ್ರವಾಹದ ನೀರು ಹೊಕ್ಕು ಜೋಡೆತ್ತು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ.</p>.<p>ರೈತ ಕಲ್ಯಾಣಿ ಬಸವರಾಜ ಕೆರುಳ್ಳಿ ಎಂಬುವವರ ಎರಡು ಎತ್ತುಗಳು ಮೃತಪಟ್ಟು ಕೃಷಿ ಪರಿಕರಗಳು ಕೊಚ್ಚಿಹೋಗಿವೆ. ಸುಮಾರು ₹1.50 ಲಕ್ಷ ಹಾನಿಯಾಗಿದೆ.</p>.<p>ಕಲ್ಯಾಣಿ ಅವರು ಮಂಗಳವಾರ ಸಂಜೆ ತಮ್ಮ ಜಮೀನಿನ ಕೊಟ್ಟಿಗೆಯಲ್ಲಿ ಎತ್ತುಗಳನ್ನು ಕಟ್ಟಿ ಮನೆಗೆ ಬಂದಿದ್ದರು. ರಾತ್ರಿಯಿಡೀ ರಭಸದಿಂದ ಮಳೆ ಸುರಿದಿದೆ. ಕಮಲಾನಗರ ಬೆಡಜುರ್ಗಿ ಮಧ್ಯದ ಗಡಿಹಳ್ಳಕ್ಕೆ ಪ್ರವಾಹ ಉಂಟಾಗಿದೆ. ಪ್ರವಾಹದ ನೀರು ದನದ ಕೊಟ್ಟಿಗೆಗೆ ಹೊಕ್ಕಿ ಉಸಿರು ಗಟ್ಟಿ ಸ್ಥಳದಲ್ಲೇ ಮೃತಪಟ್ಟಿವೆ.</p>.<p>‘ಸುಮಾರು ₹1 ಲಕ್ಷ ಮೌಲ್ಯದ ಎತ್ತು ಹಾಗೂ ₹50 ಸಾವಿರ ಮೌಲ್ಯದ ಪಂಪ್ಸೆಟ್, ಸ್ಪಿಂಕ್ಲರ್ ಪೈಪ್ ಕೊಚ್ಚಿ ಹೋಗಿವೆ’ ಎಂದು ರೈತ ಕಲ್ಯಾಣಿ ತಿಳಿಸಿದರು.</p>.<p>ಪಶು ವೈದ್ಯಾಧಿಕಾರಿ ಬಸವರಾಜ ಸಪ್ಪಾಣಿ, ಕಂದಾಯ ನಿರೀಕ್ಷಕ ಮಲ್ಲಿನಾಥ ಮರಗುತ್ತಿ, ಗ್ರಾಮ ಲೆಕ್ಕಾಧಿಕಾರಿ ಸುನಿತಾ ಮತ್ತಿತರರು ಭೇಟಿ ನೀಡಿ ಪರಿಶೀಲಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲಾಪುರ</strong>: ಆಳಂದ ತಾಲ್ಲೂಕಿನ ಕಮಲಾನಗರ ಗ್ರಾಮದಲ್ಲಿ ಪ್ರವಾಹದ ನೀರು ಹೊಕ್ಕು ಜೋಡೆತ್ತು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ.</p>.<p>ರೈತ ಕಲ್ಯಾಣಿ ಬಸವರಾಜ ಕೆರುಳ್ಳಿ ಎಂಬುವವರ ಎರಡು ಎತ್ತುಗಳು ಮೃತಪಟ್ಟು ಕೃಷಿ ಪರಿಕರಗಳು ಕೊಚ್ಚಿಹೋಗಿವೆ. ಸುಮಾರು ₹1.50 ಲಕ್ಷ ಹಾನಿಯಾಗಿದೆ.</p>.<p>ಕಲ್ಯಾಣಿ ಅವರು ಮಂಗಳವಾರ ಸಂಜೆ ತಮ್ಮ ಜಮೀನಿನ ಕೊಟ್ಟಿಗೆಯಲ್ಲಿ ಎತ್ತುಗಳನ್ನು ಕಟ್ಟಿ ಮನೆಗೆ ಬಂದಿದ್ದರು. ರಾತ್ರಿಯಿಡೀ ರಭಸದಿಂದ ಮಳೆ ಸುರಿದಿದೆ. ಕಮಲಾನಗರ ಬೆಡಜುರ್ಗಿ ಮಧ್ಯದ ಗಡಿಹಳ್ಳಕ್ಕೆ ಪ್ರವಾಹ ಉಂಟಾಗಿದೆ. ಪ್ರವಾಹದ ನೀರು ದನದ ಕೊಟ್ಟಿಗೆಗೆ ಹೊಕ್ಕಿ ಉಸಿರು ಗಟ್ಟಿ ಸ್ಥಳದಲ್ಲೇ ಮೃತಪಟ್ಟಿವೆ.</p>.<p>‘ಸುಮಾರು ₹1 ಲಕ್ಷ ಮೌಲ್ಯದ ಎತ್ತು ಹಾಗೂ ₹50 ಸಾವಿರ ಮೌಲ್ಯದ ಪಂಪ್ಸೆಟ್, ಸ್ಪಿಂಕ್ಲರ್ ಪೈಪ್ ಕೊಚ್ಚಿ ಹೋಗಿವೆ’ ಎಂದು ರೈತ ಕಲ್ಯಾಣಿ ತಿಳಿಸಿದರು.</p>.<p>ಪಶು ವೈದ್ಯಾಧಿಕಾರಿ ಬಸವರಾಜ ಸಪ್ಪಾಣಿ, ಕಂದಾಯ ನಿರೀಕ್ಷಕ ಮಲ್ಲಿನಾಥ ಮರಗುತ್ತಿ, ಗ್ರಾಮ ಲೆಕ್ಕಾಧಿಕಾರಿ ಸುನಿತಾ ಮತ್ತಿತರರು ಭೇಟಿ ನೀಡಿ ಪರಿಶೀಲಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>