<p><strong>ಶಹಾಬಾದ್</strong>: ನೀಟ್ ಪರೀಕ್ಷೆಯಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ ಎಂಬ ಕೂಗು ವಿದ್ಯಾರ್ಥಿಗಳು ಹಾಗೂ ಶಿಕ್ಷಣ ತಜ್ಞರಿಂದ ಕೇಳಿ ಬಂದಿದೆ. ಪಾಟ್ನಾ ಮತ್ತು ಇತರೆ ಪ್ರದೇಶಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯ ಆರೋಪಗಳು ಕೇಳಿ ಬಂದಿವೆ. ಈ ಕುರಿತು ಸರ್ಕಾರ ಅಥವಾ ಎನ್ಟಿಎ ಯಾವುದೇ ಗಂಭೀರ ತನಿಖೆ ಕೈಗೊಂಡಿಲ್ಲ. ಬದಲಿಗೆ, ಯಾವುದೇ ಭ್ರಷ್ಟಾಚಾರವು ನಡೆದಿಲ್ಲವೆಂದು ಕೇಂದ್ರ ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ ಕ್ಲೀನ್ಚಿಟ್ ನೀಡಿರುವುದನ್ನು ಖಂಡಿಸುತ್ತೇವೆ. ವಿದ್ಯಾರ್ಥಿಗಳ ಹೆಚ್ಚುವರಿ ಅಂಕಗಳನ್ನು ರದ್ದು ಮಾಡುವುದು ಮತ್ತು ಅವರಿಗೆ ಮರು-ಪರೀಕ್ಷೆ ನಡೆಸುವ ನಿರ್ಧಾರವನ್ನು ವಿದ್ಯಾರ್ಥಿ ಸಮೂಹವು ಒಪ್ಪುವುದಿಲ್ಲ’ ಎಂದು ಎಐಡಿಎಸ್ಒ ಜಿಲ್ಲಾ ಉಪಾಧ್ಯಕ್ಷೆ ಪ್ರೀತಿ ದೊಡ್ಡಮನಿ ಹೇಳಿದರು.</p>.<p>ನಗರದ ನೆಹರು ವೃತ್ತದಲ್ಲಿ ಎಐಡಿಎಸ್ಒ ತಾಲ್ಲೂಕು ಸಮಿತಿಯಿಂದ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಪ್ರತಿಭಟನೆಯಲ್ಲಿ ಎಐಡಿಎಸ್ಒ ಕಾರ್ಯದರ್ಶಿ ಅಜಯ್ ಎ.ಜಿ, ಉಪಾಧ್ಯಕ್ಷ ದೇವರಾಜ್ ಎಸ್, ಸದಸ್ಯರಾದ ಬಾಬೂ ಪವರ್, ಸ್ಪೂರ್ತಿ ಆರ್.ಜಿ, ಸೃಷ್ಠಿ ಆರ್.ಜಿ, ವಿದ್ಯಾರ್ಥಿಗಳಾದ ನಿಂಗರಾಜು ಹಾಗೂ ಹಲವಾರು ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಹಾಬಾದ್</strong>: ನೀಟ್ ಪರೀಕ್ಷೆಯಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ ಎಂಬ ಕೂಗು ವಿದ್ಯಾರ್ಥಿಗಳು ಹಾಗೂ ಶಿಕ್ಷಣ ತಜ್ಞರಿಂದ ಕೇಳಿ ಬಂದಿದೆ. ಪಾಟ್ನಾ ಮತ್ತು ಇತರೆ ಪ್ರದೇಶಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯ ಆರೋಪಗಳು ಕೇಳಿ ಬಂದಿವೆ. ಈ ಕುರಿತು ಸರ್ಕಾರ ಅಥವಾ ಎನ್ಟಿಎ ಯಾವುದೇ ಗಂಭೀರ ತನಿಖೆ ಕೈಗೊಂಡಿಲ್ಲ. ಬದಲಿಗೆ, ಯಾವುದೇ ಭ್ರಷ್ಟಾಚಾರವು ನಡೆದಿಲ್ಲವೆಂದು ಕೇಂದ್ರ ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ ಕ್ಲೀನ್ಚಿಟ್ ನೀಡಿರುವುದನ್ನು ಖಂಡಿಸುತ್ತೇವೆ. ವಿದ್ಯಾರ್ಥಿಗಳ ಹೆಚ್ಚುವರಿ ಅಂಕಗಳನ್ನು ರದ್ದು ಮಾಡುವುದು ಮತ್ತು ಅವರಿಗೆ ಮರು-ಪರೀಕ್ಷೆ ನಡೆಸುವ ನಿರ್ಧಾರವನ್ನು ವಿದ್ಯಾರ್ಥಿ ಸಮೂಹವು ಒಪ್ಪುವುದಿಲ್ಲ’ ಎಂದು ಎಐಡಿಎಸ್ಒ ಜಿಲ್ಲಾ ಉಪಾಧ್ಯಕ್ಷೆ ಪ್ರೀತಿ ದೊಡ್ಡಮನಿ ಹೇಳಿದರು.</p>.<p>ನಗರದ ನೆಹರು ವೃತ್ತದಲ್ಲಿ ಎಐಡಿಎಸ್ಒ ತಾಲ್ಲೂಕು ಸಮಿತಿಯಿಂದ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಪ್ರತಿಭಟನೆಯಲ್ಲಿ ಎಐಡಿಎಸ್ಒ ಕಾರ್ಯದರ್ಶಿ ಅಜಯ್ ಎ.ಜಿ, ಉಪಾಧ್ಯಕ್ಷ ದೇವರಾಜ್ ಎಸ್, ಸದಸ್ಯರಾದ ಬಾಬೂ ಪವರ್, ಸ್ಪೂರ್ತಿ ಆರ್.ಜಿ, ಸೃಷ್ಠಿ ಆರ್.ಜಿ, ವಿದ್ಯಾರ್ಥಿಗಳಾದ ನಿಂಗರಾಜು ಹಾಗೂ ಹಲವಾರು ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>