<p><strong>ಕಲಬುರಗಿ</strong>: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ, ಇಲ್ಲಿನ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆ ಮೇಲೆ ಸೋಮವಾರ ಮತ್ತೆ ದಾಳಿ ಮಾಡಿದ ಸಿಐಡಿ ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸಿದರು.</p>.<p>ಅಕ್ರಮದಲ್ಲಿ ಪಾಲ್ಗೊಂಡ ಆರೋಪದಡಿ ಬಂಧಿತರಾದ ಮೂವರು ಅಭ್ಯರ್ಥಿಗಳು ಹಾಗೂ ಮೂವರು ಪರೀಕ್ಷೆ ಮೇಲ್ವಿಚಾರಕಿಯರನ್ನು ಸ್ಥಳಕ್ಕೆ ಕರೆತಂದ ಅಧಿಕಾರಿಗಳು, ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ನಡೆಸಿ, ಹೇಳಿಕೆ ದಾಖಲಿಸಿಕೊಂಡರು.</p>.<p>ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ, ಡಿವೈಎಸ್ಪಿಗಳಾದ ಶಂಕರಗೌಡ ಪಾಟೀಲ, ಪ್ರಕಾಶ ರಾಠೋಡ ನೇತೃತ್ವದ ತಂಡವು ತನಿಖೆಯನ್ನು ಚುರುಕುಗೊಳಿಸಿದೆ.</p>.<p>ಮೂವರೂ ಆರೋಪಿಗಳಲ್ಲಿ ಇಬ್ಬರು ಶಾಲೆಯ ಎರಡನೇ ಮಹಡಿಯ ಕೇಂದ್ರದಲ್ಲಿ ಒಬ್ಬ ಕೆಳಮಹಡಿಯಲ್ಲಿ ಪರೀಕ್ಷೆ ಹಾಜರಾಗಿದ್ದ. ಈ ಮೂರು ಕೋಣೆಗಳು, ಶಾಲೆಯ ಮಾಲೀಕರಾದ ದಿವ್ಯಾ ಹಾಗರಗಿ ಅವರ ಕಚೇರಿ, ಮುಖ್ಯಶಿಕ್ಷಕರ ಕೋಣೆಯನ್ನೂ ಅಧಿಕಾರಿಗಳು ತಡಕಾಡಿದರು.</p>.<p>ಸಿಸಿಟಿವಿ ಕ್ಯಾಮೆರಾಗಳ ಕೆಲವು ದಾಖಲೆಗಳು, ಉಪಕರಣಗಳನ್ನು ವಶಕ್ಕೆ ತೆಗೆದುಕೊಂಡರು.</p>.<p>ರಾಜೇಶ ಬಂಧನ:ದಿವ್ಯಾ ಹಾಗರಗಿ ಮನೆ ಮೇಲೆ ಭಾನುವಾರ ದಾಳಿ ಮಾಡಿದ ಸಿಐಡಿ ಅಧಿಕಾರಿಗಳು, ದಿವ್ಯಾ ಅವರ ಪತಿ ರಾಜೇಶ್ ಅವರನ್ನು ತಡರಾತ್ರಿ ಬಂಧಿಸಿದ್ದಾರೆ. ಅವರ ವಾಹನವನ್ನೂ ಸೀಜ್ ಮಾಡಿದ್ದಾರೆ.</p>.<p>‘ರಾಜೇಶ್ ಅವರು ತನಿಖೆಗೆ ಸರಿಯಾಗಿ ಉತ್ತರ ನೀಡಲಿಲ್ಲ. ಮೇಲಾಗಿ, ಆರೋಪಿಯನ್ನು ತಮ್ಮ ಕಾರಿನಲ್ಲಿಯೇ ಬೇರೆ ಸ್ಥಳಕ್ಕೆ ಕಳುಹಿಸಿ ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದಾರೆ. ಈ ಆರೋಪದಡಿ ಅವರನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಂದ ಮತ್ತಷ್ಟು ಉಪಯುಕ್ತ ಮಾಹಿತಿಗಳು ಸಿಕ್ಕಿವೆ. ಎಷ್ಟು ಜನ ಇದರಲ್ಲಿ ಭಾಗಿಯಾಗಿದ್ದಾರೋ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ" ಎಂದು ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.</p>.<p>‘545 ಪಿಎಸ್ಐ ನೇಮಕಾತಿಗೆ ಅಕ್ಟೋಬರ್ನಲ್ಲಿ ನಡೆದ ಪರೀಕ್ಷೆಯಲ್ಲಿ ಅಕ್ರಮ ನಡೆದಿತ್ತು. ಜ್ಞಾನಜ್ಯೋತಿ ಶಾಲೆಯಲ್ಲಿ ತೆರೆದಿದ್ದ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಎಸಗಿದ ನಾಲ್ವರು ಅಭ್ಯರ್ಥಿಗಳು ಮತ್ತು ಮೂವರು ಪರೀಕ್ಷಾ ಮೇಲ್ವಿಚಾರಕಿಯರನ್ನು ಈಗಾಗಲೇ ಬಂಧಿಸಲಾಗಿದೆ. ರಾಜೇಶ್ ಬಂಧನದ ಮೂಲಕ ಬಂಧಿತರ ಸಂಖ್ಯೆ 8ಕ್ಕೆ ಏರಿದೆ.</p>.<p>ಅಭ್ಯರ್ಥಿಗಳಾದ ಕಲಬುರಗಿಯ ವೀರೇಶ ನಿಡಗುಂದ, ಅರುಣ ಪಾಟೀಲ, ರಾಯಚೂರಿನ ಕೆ.ಪ್ರವೀಣಕುಮಾರ, ಚೇತನ ನಂದಗಾಂವ, ಪರೀಕ್ಷಾ ಮೇಲ್ವಿಚಾರಣೆಗೆ ನಿಯೋಜನೆಗೊಂಡಿದ್ದ ಶಿಕ್ಷಕಿಯರಾದ ಸುಮಾ, ಸಿದ್ದಮ್ಮ ಹಾಗೂ ಸಾವಿತ್ರಿ ಅವರನ್ನು ಶನಿವಾರ ಬಂಧಿಸಲಾಗಿದ್ದು, ಇನ್ನೂ ಎರಡು ದಿನ ಸಿಐಡಿ ಪೊಲೀಸರ ವಶದಲ್ಲಿರುತ್ತಾರೆ.</p>.<p>ಪ್ರಕರಣ ಬೆಳಕಿಗೆ ಬಂದಾಗಿನಿಂದ ದಿವ್ಯಾ ಪತ್ತೆಯಾಗಿಲ್ಲ. ಮೇಲಾಗಿ, ಶಾಲೆಯ ಮುಖ್ಯ ಶಿಕ್ಷಕ, ಇತರ ಸಿಬ್ಬಂದಿಯೂ ತಲೆಮರೆಸಿಕೊಂಡಿದ್ದಾರೆ.</p>.<p>ಇನ್ನೂ ಕೆಲ ಅಭ್ಯರ್ಥಿಗಳು, ಮಧ್ಯವರ್ತಿಗಳು ಭಾಗಿಯಾಗಿರುವ ಬಗ್ಗೆ ಶಂಕೆ ಇದ್ದು, ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ, ಇಲ್ಲಿನ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆ ಮೇಲೆ ಸೋಮವಾರ ಮತ್ತೆ ದಾಳಿ ಮಾಡಿದ ಸಿಐಡಿ ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸಿದರು.</p>.<p>ಅಕ್ರಮದಲ್ಲಿ ಪಾಲ್ಗೊಂಡ ಆರೋಪದಡಿ ಬಂಧಿತರಾದ ಮೂವರು ಅಭ್ಯರ್ಥಿಗಳು ಹಾಗೂ ಮೂವರು ಪರೀಕ್ಷೆ ಮೇಲ್ವಿಚಾರಕಿಯರನ್ನು ಸ್ಥಳಕ್ಕೆ ಕರೆತಂದ ಅಧಿಕಾರಿಗಳು, ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ನಡೆಸಿ, ಹೇಳಿಕೆ ದಾಖಲಿಸಿಕೊಂಡರು.</p>.<p>ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ, ಡಿವೈಎಸ್ಪಿಗಳಾದ ಶಂಕರಗೌಡ ಪಾಟೀಲ, ಪ್ರಕಾಶ ರಾಠೋಡ ನೇತೃತ್ವದ ತಂಡವು ತನಿಖೆಯನ್ನು ಚುರುಕುಗೊಳಿಸಿದೆ.</p>.<p>ಮೂವರೂ ಆರೋಪಿಗಳಲ್ಲಿ ಇಬ್ಬರು ಶಾಲೆಯ ಎರಡನೇ ಮಹಡಿಯ ಕೇಂದ್ರದಲ್ಲಿ ಒಬ್ಬ ಕೆಳಮಹಡಿಯಲ್ಲಿ ಪರೀಕ್ಷೆ ಹಾಜರಾಗಿದ್ದ. ಈ ಮೂರು ಕೋಣೆಗಳು, ಶಾಲೆಯ ಮಾಲೀಕರಾದ ದಿವ್ಯಾ ಹಾಗರಗಿ ಅವರ ಕಚೇರಿ, ಮುಖ್ಯಶಿಕ್ಷಕರ ಕೋಣೆಯನ್ನೂ ಅಧಿಕಾರಿಗಳು ತಡಕಾಡಿದರು.</p>.<p>ಸಿಸಿಟಿವಿ ಕ್ಯಾಮೆರಾಗಳ ಕೆಲವು ದಾಖಲೆಗಳು, ಉಪಕರಣಗಳನ್ನು ವಶಕ್ಕೆ ತೆಗೆದುಕೊಂಡರು.</p>.<p>ರಾಜೇಶ ಬಂಧನ:ದಿವ್ಯಾ ಹಾಗರಗಿ ಮನೆ ಮೇಲೆ ಭಾನುವಾರ ದಾಳಿ ಮಾಡಿದ ಸಿಐಡಿ ಅಧಿಕಾರಿಗಳು, ದಿವ್ಯಾ ಅವರ ಪತಿ ರಾಜೇಶ್ ಅವರನ್ನು ತಡರಾತ್ರಿ ಬಂಧಿಸಿದ್ದಾರೆ. ಅವರ ವಾಹನವನ್ನೂ ಸೀಜ್ ಮಾಡಿದ್ದಾರೆ.</p>.<p>‘ರಾಜೇಶ್ ಅವರು ತನಿಖೆಗೆ ಸರಿಯಾಗಿ ಉತ್ತರ ನೀಡಲಿಲ್ಲ. ಮೇಲಾಗಿ, ಆರೋಪಿಯನ್ನು ತಮ್ಮ ಕಾರಿನಲ್ಲಿಯೇ ಬೇರೆ ಸ್ಥಳಕ್ಕೆ ಕಳುಹಿಸಿ ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದಾರೆ. ಈ ಆರೋಪದಡಿ ಅವರನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಂದ ಮತ್ತಷ್ಟು ಉಪಯುಕ್ತ ಮಾಹಿತಿಗಳು ಸಿಕ್ಕಿವೆ. ಎಷ್ಟು ಜನ ಇದರಲ್ಲಿ ಭಾಗಿಯಾಗಿದ್ದಾರೋ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ" ಎಂದು ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.</p>.<p>‘545 ಪಿಎಸ್ಐ ನೇಮಕಾತಿಗೆ ಅಕ್ಟೋಬರ್ನಲ್ಲಿ ನಡೆದ ಪರೀಕ್ಷೆಯಲ್ಲಿ ಅಕ್ರಮ ನಡೆದಿತ್ತು. ಜ್ಞಾನಜ್ಯೋತಿ ಶಾಲೆಯಲ್ಲಿ ತೆರೆದಿದ್ದ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಎಸಗಿದ ನಾಲ್ವರು ಅಭ್ಯರ್ಥಿಗಳು ಮತ್ತು ಮೂವರು ಪರೀಕ್ಷಾ ಮೇಲ್ವಿಚಾರಕಿಯರನ್ನು ಈಗಾಗಲೇ ಬಂಧಿಸಲಾಗಿದೆ. ರಾಜೇಶ್ ಬಂಧನದ ಮೂಲಕ ಬಂಧಿತರ ಸಂಖ್ಯೆ 8ಕ್ಕೆ ಏರಿದೆ.</p>.<p>ಅಭ್ಯರ್ಥಿಗಳಾದ ಕಲಬುರಗಿಯ ವೀರೇಶ ನಿಡಗುಂದ, ಅರುಣ ಪಾಟೀಲ, ರಾಯಚೂರಿನ ಕೆ.ಪ್ರವೀಣಕುಮಾರ, ಚೇತನ ನಂದಗಾಂವ, ಪರೀಕ್ಷಾ ಮೇಲ್ವಿಚಾರಣೆಗೆ ನಿಯೋಜನೆಗೊಂಡಿದ್ದ ಶಿಕ್ಷಕಿಯರಾದ ಸುಮಾ, ಸಿದ್ದಮ್ಮ ಹಾಗೂ ಸಾವಿತ್ರಿ ಅವರನ್ನು ಶನಿವಾರ ಬಂಧಿಸಲಾಗಿದ್ದು, ಇನ್ನೂ ಎರಡು ದಿನ ಸಿಐಡಿ ಪೊಲೀಸರ ವಶದಲ್ಲಿರುತ್ತಾರೆ.</p>.<p>ಪ್ರಕರಣ ಬೆಳಕಿಗೆ ಬಂದಾಗಿನಿಂದ ದಿವ್ಯಾ ಪತ್ತೆಯಾಗಿಲ್ಲ. ಮೇಲಾಗಿ, ಶಾಲೆಯ ಮುಖ್ಯ ಶಿಕ್ಷಕ, ಇತರ ಸಿಬ್ಬಂದಿಯೂ ತಲೆಮರೆಸಿಕೊಂಡಿದ್ದಾರೆ.</p>.<p>ಇನ್ನೂ ಕೆಲ ಅಭ್ಯರ್ಥಿಗಳು, ಮಧ್ಯವರ್ತಿಗಳು ಭಾಗಿಯಾಗಿರುವ ಬಗ್ಗೆ ಶಂಕೆ ಇದ್ದು, ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>