ಪ್ರವಾಹ ಪೀಡಿತ ಪ್ರದೇಶದಲ್ಲಿ ರಕ್ಷಣಾ ಕಾರ್ಯ ಕೈಗೊಳ್ಳಲು ಪ್ರತಿ ಗ್ರಾಮಕ್ಕೆ ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದ್ದು, ಪೊಲೀಸ್, ಅಗ್ನಿಶಾಮಕ, ಜೆಸ್ಕಾಂ ಅಧಿಕಾರಿಗಳು ಸೇರಿದಂತೆ ರಕ್ಷಣಾ ತಂಡಗಳು ಗ್ರಾಮದಲ್ಲಿ ಠಿಕಾಣಿ ಹೂಡಲು ತಿಳಿಸಲಾಗಿದೆ. ಪ್ರಥಮ ಚಿಕಿತ್ಸೆ ನೀಡಲು ವೈದ್ಯಕೀಯ ತಂಡ ನಿಯೋಜಿಸಲಾಗಿದೆ. ಅಗತ್ಯವಿದ್ದಲ್ಲಿ ಗಂಜಿಕೇಂದ್ರಗಳನ್ನು ತೆಗೆಯುವಂತೆ ತಹಶೀಲ್ದಾರರಿಗೆ ಮತ್ತು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು