ಯಡ್ರಾಮಿ ತಾಲ್ಲೂಕು ಕೋಣಶಿರಸಗಿ ಗ್ರಾಮದ ದೇವೇಂದ್ರಪ್ಪ (30) ಹಾಗೂ ವಸ್ತಾರಿ ಗ್ರಾಮದ ಗುರುರಾಜ (30) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೇವೇಂದ್ರಪ್ಪ ಅವರ ಮದುವೆ ನಿಶ್ಚಯವಾಗಿತ್ತು. ಹಾಗಾಗಿ, ಸಂಬಂಧಿಕರಿಗೆ ಮದುವೆ ಆಹ್ವಾನ ಪತ್ರ ನೀಡಲು ಜೇರಟಗಿಯತ್ತ ತೆರಳುತ್ತಿದ್ದರು. ವಾಹನವೊಂದನ್ನು ಓವರ್ ಟೇಕ್ ಮಾಡಿಕೊಂಡು ಬಂದ ವಿಜಯಪುರ ಜಿಲ್ಲೆಗೆ ಸೇರಿದ ಕಾರು ಎದುರಿಗೆ ಬಂದ ಬೈಕ್ಗೆ ಡಿಕ್ಕಿ ಹೊಡೆಯಿತು. ಇದರಿಂದಾಗಿ ಒಬ್ಬರ ದೇಹವನ್ನು ಸುಮಾರು 300 ಮೀಟರ್ ದೂರದವರೆಗೆ ಎಳೆದುಕೊಂಡು ಹೋಗಿದ್ದರಿಂದ ಛಿದ್ರವಾಗಿದೆ.