ಶುಕ್ರವಾರ ನಸುಕಿನಲ್ಲಿ ದೇವಲಗಾಣಗಾಪುರಕ್ಕೆ ಬಂದಿದ್ದ ಇವರು ದತ್ತಾತ್ರೇಯರ ದರ್ಶನ ಪಡೆದು ಮರಳುತ್ತಿದ್ದರು. ಎದುರಿಗೆ ಬಂದ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ, ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಅಪ್ಪಳಿಸಿ ಉರುಳಿತು. ಅವಘಡದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.