<p><strong>ಕಲಬುರ್ಗಿ</strong>: ಅಫಜಲಪುರ ತಾಲ್ಲೂಕಿನ ಕುಲಾಲಿ ರೈಲ್ವೆ ನಿಲ್ದಾಣದ ಕೆಳ ಸೇತುವೆ ನಿರ್ಮಾಣಕ್ಕಾಗಿ ರೈಲ್ವೆ ₹ 7.84 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿದ್ದು, ಅದಕ್ಕೆ ಶೇ 2 ಮೊತ್ತವನ್ನು ಭರಿಸದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು ಸಂಸದ ಡಾ.ಉಮೇಶ ಜಾಧವ ತರಾಟೆಗೆ ತೆಗೆದುಕೊಂಡರು.</p>.<p>ಇಲಾಖೆ ಅಧಿಕಾರಿಗಳು ತಮ್ಮ ಪಾಲಿನ ₹ 15.67 ಲಕ್ಷದ ಪಾಲನ್ನು ಸಲ್ಲಿಸದ ಕಾರಣ ಹಣ ಬಿಡುಗಡೆ ಮಾಡಲು ಆಗಿಲ್ಲ ಎಂದು ರೈಲ್ವೆ ಇಲಾಖೆ ಎಂಜಿನಿಯರ್ ತಿಳಿಸಿದರು. ₹ 15 ಲಕ್ಷಕ್ಕಾಗಿ ಇಷ್ಟು ದಿನ ಕಾಮಗಾರಿ ಸ್ಥಗಿತಗೊಳಿಸಿದ್ದೀರಾ ಎಂದು ಲೋಕೋಪಯೋಗಿ ಇಲಾಖೆ ಅಫಜಲಪುರ ವಿಭಾಗದ ಸಹಾಯಕ ಎಂಜಿನಿಯರ್ ಗೆ ಪ್ರಶ್ನಿಸಿದರು.</p>.<p>ಆಗ ಮಧ್ಯಪ್ರವೇಶಿಸಿದ ಜಿಲ್ಲಾಧಿಕಾರಿ ಶರತ್ ಬಿ. ಹಣ ಇಲ್ಲದಿದ್ದರೆ ಹೇಳಿ ಇಂದೇ ಬಿಡುಗಡೆ ಮಾಡುತ್ತೇವೆ. ತಕ್ಷಣ ಹಣ ಬಿಡುಗಡೆ ಮಾಡಿದ ಪತ್ರವನ್ನು ತಮಗೆ ಕಳಿಸಿಕೊಡಬೇಕು ಎಂದು ತಾಕೀತು ಮಾಡಿದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ</strong>: ಅಫಜಲಪುರ ತಾಲ್ಲೂಕಿನ ಕುಲಾಲಿ ರೈಲ್ವೆ ನಿಲ್ದಾಣದ ಕೆಳ ಸೇತುವೆ ನಿರ್ಮಾಣಕ್ಕಾಗಿ ರೈಲ್ವೆ ₹ 7.84 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿದ್ದು, ಅದಕ್ಕೆ ಶೇ 2 ಮೊತ್ತವನ್ನು ಭರಿಸದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು ಸಂಸದ ಡಾ.ಉಮೇಶ ಜಾಧವ ತರಾಟೆಗೆ ತೆಗೆದುಕೊಂಡರು.</p>.<p>ಇಲಾಖೆ ಅಧಿಕಾರಿಗಳು ತಮ್ಮ ಪಾಲಿನ ₹ 15.67 ಲಕ್ಷದ ಪಾಲನ್ನು ಸಲ್ಲಿಸದ ಕಾರಣ ಹಣ ಬಿಡುಗಡೆ ಮಾಡಲು ಆಗಿಲ್ಲ ಎಂದು ರೈಲ್ವೆ ಇಲಾಖೆ ಎಂಜಿನಿಯರ್ ತಿಳಿಸಿದರು. ₹ 15 ಲಕ್ಷಕ್ಕಾಗಿ ಇಷ್ಟು ದಿನ ಕಾಮಗಾರಿ ಸ್ಥಗಿತಗೊಳಿಸಿದ್ದೀರಾ ಎಂದು ಲೋಕೋಪಯೋಗಿ ಇಲಾಖೆ ಅಫಜಲಪುರ ವಿಭಾಗದ ಸಹಾಯಕ ಎಂಜಿನಿಯರ್ ಗೆ ಪ್ರಶ್ನಿಸಿದರು.</p>.<p>ಆಗ ಮಧ್ಯಪ್ರವೇಶಿಸಿದ ಜಿಲ್ಲಾಧಿಕಾರಿ ಶರತ್ ಬಿ. ಹಣ ಇಲ್ಲದಿದ್ದರೆ ಹೇಳಿ ಇಂದೇ ಬಿಡುಗಡೆ ಮಾಡುತ್ತೇವೆ. ತಕ್ಷಣ ಹಣ ಬಿಡುಗಡೆ ಮಾಡಿದ ಪತ್ರವನ್ನು ತಮಗೆ ಕಳಿಸಿಕೊಡಬೇಕು ಎಂದು ತಾಕೀತು ಮಾಡಿದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>