ಕಲಬುರ್ಗಿ: ಬೀದರ್ ಜಿಲ್ಲೆ ಬಸವಕಲ್ಯಾಣ ತಾಲ್ಲೂಕಿನ ಕಡೋಳ ಗ್ರಾಮದ ಬಳಿ ಭಾನುವಾರ ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಲಬುರ್ಗಿಯ ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಡಾ. ಲಿಂಗರಾಜ ಶಾಸ್ತ್ರಿ (50) ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಅವರ ಪತ್ನಿಗೆ ಗಾಯಗಳಾಗಿದ್ದು, ಇಬ್ಬರು ಪುತ್ರರು ಅಪಾಯದಿಂದ ಪಾರಾಗಿದ್ದಾರೆ.