ಇದರಿಂದ ಗರಂ ಆದ ಜಾಧವ ಹಾಗೂ ಜಿಲ್ಲಾಧಿಕಾರಿ ಶರತ್ ಬಿ., ಕೋವಿಡ್ ಕೇಂದ್ರ ಇಲ್ಲವೆಂದು ನಾವು ಚಿಂತೆ ಮಾಡುತ್ತಿದ್ದೇವೆ. ನೀವು ಎಲ್ಲ ಸಿದ್ಧತೆ ಮಾಡಿಕೊಂಡರೂ ನಮಗೆ ತಿಳಿಸದಿದ್ದರೆ ಹೇಗೆ? ಮುಂಚೆಯೇ ತಿಳಿಸಿದ್ದರೆ ಅಲ್ಲಿ ಅಫಜಲಪುರ, ಅಳಂದ ಹಾಗೂ ಕಲಬುರ್ಗಿ ತಾಲ್ಲೂಕಿನ ಕೋವಿಡ್ ಶಂಕಿತರನ್ನು ತಪಾಸಣೆಗೆ ಕಳಿಸುತ್ತಿದ್ದೆವು. ಕೋವಿಡ್ ತಪಾಸಣೆ ಆರಂಭಿಸುವ ಬಗ್ಗೆ ಸರ್ಕಾರದ ಕಾರ್ಯದರ್ಶಿ ಅವರಿಂದ ಇಂದು ಪತ್ರ ಬಂದ ಬಳಿಕ ಗೊತ್ತಾಯಿತು ಎಂದರು.